ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ₹3 ಕೋಟಿ ಬೆಲೆಯ 22 ಕಾರು ಖರೀದಿಸಿ ಅಡಗಿಸಿಟ್ಟಿದ್ದ ಕೆಸಿಆರ್: ರೇವಂತ್ ರೆಡ್ಡಿ

Date:

ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ 64 ಸ್ಥಾನಗಳಲ್ಲಿ ಭರ್ಜರಿ ಜಯ ಗಳಿಸುವುದರೊಂದಿಗೆ ಕಾಂಗ್ರೆಸ್‌ ನೇತೃತ್ವದ ಸರ್ಕಾರ ರಚನೆಯಾಗಿದ್ದು, ಇತ್ತೀಚೆಗಷ್ಟೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅಧಿಕಾರ ಸ್ವೀಕರಿಸಿದ್ದರು. ರೇವಂತ್ ರೆಡ್ಡಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಹಿಂದಿನ ಸಿಎಂ ಚಂದ್ರಶೇಖರ್ ರಾವ್ ಅವರ ಬಿಆರ್‌ಎಸ್‌ ಪಕ್ಷದ ಹಗರಣಗಳು ಒಂದೊಂದಾಗಿ ಬಹಿರಂಗಗೊಳ್ಳುತ್ತಿದೆ.

ಹೊಸ ಬೆಳವಣಿಗೆಯೊಂದರಲ್ಲಿ, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಕೆಸಿಆರ್, ತಲಾ 3 ಕೋಟಿ ಬೆಲೆಬಾಳುವ ಸುಮಾರು 22 ಟೊಯೊಟಾ ಲ್ಯಾಂಡ್ ಕ್ರೂಸರ್ ಕಾರುಗಳನ್ನು ಖರೀದಿಸಿತ್ತಲ್ಲದೇ, ಅದನ್ನು ಯಾರಿಗೂ ತಿಳಿಯದಂತೆ ರಹಸ್ಯ ಸ್ಥಳದಲ್ಲಿ ಬಚ್ಚಿಟ್ಟಿದ್ದ ವಿಚಾರ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂಬ ಅತಿಯಾದ ಆತ್ಮವಿಶ್ವಾಸದಲ್ಲಿ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖ‌ರ್ ರಾವ್ ಅವರ ಸರ್ಕಾರವು, ಸುಮಾರು ₹66 ಕೋಟಿ ಖರ್ಚು ಮಾಡಿ 22 ಟೊಯೊಟಾ ಲ್ಯಾಂಡ್ ಕ್ರೂಸರ್ ಕಾರುಗಳನ್ನು ಖರೀದಿಸಿತ್ತು” ಎಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಮಾಹಿತಿ ನೀಡಿದ್ದಾರೆ.

‘ಪ್ರಜಾ ಪಾಲನಾ’ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ನಡೆದ ಸಂವಾದದ ವೇಳೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

“ಮುಖ್ಯಮಂತ್ರಿಯಾಗಿ ನಾನು ಅಧಿಕಾರ ಸ್ವೀಕರಿಸಿದ ನಂತರ ನನಗಾಗಿ ಹೊಸ ವಾಹನಗಳನ್ನು ಖರೀದಿಸದಂತೆ ಅಧಿಕಾರಿಗಳಿಗೆ ತಿಳಿಸಿದ್ದೆ. ಹಳೆಯ ಕಾರುಗಳನ್ನೇ ರಿಪೇರಿ ಮಾಡಿ ಬಳಸುವಂತೆ ಸೂಚಿಸಿದ್ದೆ. ಈ ವೇಳೆ ಅಧಿಕಾರಿಗಳು ಹೊಸ ಕಾರುಗಳನ್ನು ಈಗಾಗಲೇ ಖರೀದಿಸಿರುವ ಬಗ್ಗೆ ನನಗೆ ಮಾಹಿತಿ ನೀಡಿದರು” ಎಂದು ಹೇಳಿದ್ದಾರೆ.

“ಹಿಂದಿನ ಕೆಸಿಆರ್ ಸರ್ಕಾರ 22 ಲ್ಯಾಂಡ್ ಕ್ರೂಸರ್ ವಾಹನಗಳನ್ನು ಖರೀದಿಸಿತ್ತು. ಅವೆಲ್ಲವೂ ವಿಜಯವಾಡದಲ್ಲಿವೆ. ಕೆಸಿಆ‌ರ್ ಮೂರನೇ ಬಾರಿಗೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಅವುಗಳನ್ನು ತರಲು ಆಲೋಚಿಸಿದ್ದೆವು ಎಂದು ಅಧಿಕಾರಿಗಳು ತಿಳಿಸಿದರು. ಅಧಿಕಾರಿಗಳ ಬಾಯಿಂದ ಈ ವಿಚಾರ ಕೇಳಿ ನನಗೆ ಒಮ್ಮೆಲೆ ಶಾಕ್ ಆಯಿತು” ಎಂದು ರೇವಂತ್ ರೆಡ್ಡಿ ತಿಳಿಸಿದ್ದಾರೆ.

” ಖರೀದಿಸಿದ್ದ 22 ಕಾರುಗಳೆಲ್ಲವೂ ಬುಲೆಟ್ ಪ್ರೂಫ್ ಕಾರುಗಳಾಗಿದ್ದು, ಒಂದು ಕಾರಿನ ಬೆಲೆ ಸುಮಾರು ₹3 ಕೋಟಿ ಇದೆ. ಈ ರೀತಿಯಲ್ಲಿ ಕೆಸಿಆ‌ರ್ ಸರ್ಕಾರವು, ರಾಜ್ಯದ ಸಂಪತ್ತನ್ನು ಕೊಳ್ಳೆ ಹೊಡೆಯಲು ಹೊರಟಿತ್ತು” ಎಂದು ನೂತನ ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...