ಸರ್ಕಾರಿ ಹುದ್ದೆಗಳಿಂದ 2,896 ಶಿಕ್ಷಕರ ವಜಾ: ಮರು ನೇಮಕಾತಿಗೆ ಆಗ್ರಹಿಸಿ ‘ದೀರ್ಘದಂಡ’ ಪ್ರತಿಭಟನೆ

Date:

ಛತ್ತೀಸ್‌ಗಢದಲ್ಲಿ ಹಲವಾರು ಇಲಾಖೆಗಳಲ್ಲಿ ಸರ್ಕಾರಿ ಹುದ್ದೆಗಳು ಖಾಲಿ ಉಳಿದಿವೆ. ಆದರೆ, ಸರ್ಕಾರವು ಆ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿಲ್ಲ. ಪರಿಣಾಮ, ಅಲ್ಲಿನ ಯುವಜನರು ನಿರುದ್ಯೋಗದ ಭೀಕರತೆಯನ್ನು ಎದುರಿಸುತ್ತಿದ್ದಾರೆ. ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಸುವಂತೆ ಒತ್ತಾಯಿಸಿ ಪ್ರತಿಭಟನೆಗಳನ್ನು ನಡೆಸುತ್ತಲೇ ಇದ್ದಾರೆ. ಆದರೆ, ಬಿಜೆಪಿ ಸರ್ಕಾರ ಯುವಜನರನ್ನು ನಿರ್ಲಕ್ಷಿಸಿದೆ. ಹೀಗಾಗಿ, ರಾಜ್ಯದ ಯುವತಿಯರು ಸೋಮವಾರ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ರಸ್ತೆಯ ಉದ್ದಕ್ಕೂ ದೀರ್ಘದಂಡ ನಮಸ್ಕಾರ ಹಾಕಿ ಹೋರಾಟ ನಡೆಸಿದ್ದಾರೆ.

ಛತ್ತೀಸ್‌ಗಢದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಛತ್ತೀಸ್‌ಗಢ ಶಿಕ್ಷಣ ಇಲಾಖೆಯಲ್ಲಿ ಸಾವಿರಾರು ಹುದ್ದೆಗಳು ಖಾಲಿ ಇವೆ. ಆದರೆ, ನೇಮಕಾತಿ ನಡೆದಿಲ್ಲ. ಮಾತ್ರವಲ್ಲದೆ, ಬಿಇಡಿಯಂತಹ ಪದವಿಗಳನ್ನು ಪಡೆದು ಶಿಕ್ಷಕ ಹುದ್ದೆಗೆ ನೇಮಕವಾಗಿದ್ದ ಸುಮಾರು 2,896 ಶಿಕ್ಷಕರನ್ನು ವಜಾಗೊಳಿಸಲಾಗಿದೆ. ಸರ್ಕಾರವು ಎಸಗಿದ ನ್ಯಾಯಾಂಗ ನಿಂದನೆಯಿಂದಾಗಿ ಸಾವಿರಾರು ಶಿಕ್ಷಕರನ್ನು ವಜಾಗೊಳಿಸಲಾಗಿದೆ. ವಜಾಗೊಂಡ ಹಲವಾರು ಶಿಕ್ಷಕರು ಬಸ್ತಾರ್ ಮತ್ತು ಸುರ್ಗುಜಾದಂತಹ ಬುಡಕಟ್ಟು ಜಿಲ್ಲೆಗಳಿಗೆ ಸೇರಿದವರಾಗಿದ್ದಾರೆ. ಹೀಗಾಗಿ, ಕೆಲಸ ಕಳೆದುಕೊಂಡ ಶಿಕ್ಷಕರ ಕುಟುಂಬಗಳು ಈಗ ನಿರ್ಗತಿಕ ಪರಿಸ್ಥಿತಿ ಎದುರಿಸುತ್ತಿವೆ.

2023ರಲ್ಲಿ ಕಠಿಣ ಪರೀಕ್ಷೆಗಳನ್ನು ಬರೆದು, ಶಿಕ್ಷಕ ವೃತ್ತಿಗೆ ಹಲವರು ಆಯ್ಕೆಯಾಗಿದ್ದರು. ಆದರೆ, ಅವರ ನೇಮಕವಾದ 14 ತಿಂಗಳ ನಂತರ, ಡಿಇಎಲ್‌ಇಡಿ ಅಭ್ಯರ್ಥಿಗಳು ಪ್ರಾಥಮಿಕ ಶಾಲೆಗಳಲ್ಲಿ ಪಾಠಮಾಡಲು ಬಿಎಡ್‌ ಪದವೀಧರರ ಅರ್ಹತೆಯನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಸರ್ಕಾರವು ನ್ಯಾಯಾಂಗ ನಿಂದನೆ ಮಾಡಿದೆ ಎಂದು ಆರೋಪಿಸಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್‌ ತೀರ್ಪಿನ ಆಧಾರದ ಮೇಲೆ 2,896 ಶಿಕ್ಷಕರನ್ನು ವಜಾಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೇವೆಯಿಂದ ವಜಾಗೊಂಡಿರುವ ಶಿಕ್ಷಕರನ್ನು ತಮ್ಮನ್ನು ಸೇವೆಗೆ ಮರುನೇಮಕ ಮಾಡಿಕೊಳ್ಳಬೇಕು. ಜೊತೆಗೆ, ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಮಗೆ ಸರ್ಕಾರ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ. ಆದರೆ, ಸರ್ಕಾರ ನ್ಯಾಯ ಕೊಡುವ ಬದಲು ನಮಗೆ ಪೊಲೀಸರ ಮೂಲಕ ಬೆದರಿಕೆ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರತಿಭಟನೆಗಳನ್ನು ದಮನಿಸುವ ಸರ್ಕಾರದ ಧೋರಣೆಯಿಂದಾಗಿ ನಮ್ಮ ಕುಟುಂಬಗಳು ಹತಾಶೆ ಮತ್ತು ಭಯಕ್ಕೆ ಒಳಗಾಗಿವೆ ಎಂದಿರುವ ಪ್ರತಿಭಟನಾಕಾರರು, ಅದರಲ್ಲೂ ಶಿಕ್ಷಕಿಯರು ತಮ್ಮ ದುಸ್ಥಿತಿಯ ಬಗ್ಗೆ ಗಮನ ಸೆಳೆಯಲು ರಾಯ್‌ಪುರದ ರಸ್ತೆಗಳಲ್ಲಿ ‘ದೀರ್ಘದಂಡ ನಮಸ್ಕಾರ’ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಮನೆ-ಮನೆಗೆ ತೆರಳಿ ಹೊಸದಾಗಿ ಕೊಯ್ಲು ಮಾಡಿದ ಅಕ್ಕಿಯನ್ನು ಭಿಕ್ಷೆಯಾಗಿ ನೀಡುವಂತೆ ಬೇಡಿದ್ದಾರೆ. ಸರ್ಕಾರದ ಧೋರಣೆಯಿಂದಾಗಿ ತಾವು ನಿರ್ಲಕ್ಷ್ಯಕ್ಕೊಳಗಾಗಿದ್ದೇವೆ. ನಮಗೆ ಸಹಾಯ ಮಾಡಿ ಎಂದು ಕೇಳುವ ಮೂಲಕ ಸರ್ಕಾರದ ವಿಫಲತೆಯನ್ನು ಎತ್ತಿ ತೋರಿಸಿದ್ದಾರೆ.

ಪ್ರತಿಭಟನೆ ನಡೆಸುತ್ತಿದ್ದ ಯುವತಿಯರಿಗೆ ಪೊಲೀಸರು ಬೆದರಿಕೆ ಹಾಕಿದ್ದಾರೆ. “ನಾವು ನಮ್ಮ ನಿಜವಾದ ಪೊಲೀಸ್ ಕೆಲಸಕ್ಕೆ ಬಂದರೆ ನೀವು ಭಾರೀ ತೊಂದರೆ ಎದುರಿಸಬೇಕಾಗುತ್ತದೆ” ಎಂದು ಪೊಲೀಸರು ದರ್ಪದಿಂದ ಮಾತನಾಡಿದ್ದಾರೆ.

ನಮ್ಮ ಸಮಸ್ಯೆಯನ್ನು ಪರಿಹರಿಸಲು ಸರ್ಕಾರಕ್ಕೆ ರಾಜಕೀಯ ಇಚ್ಛಾಶಕ್ತಿಯ ಕೊರತೆ ಇದೆ. ನ್ಯಾಯಾಲಯದಲ್ಲಿ ನಮ್ಮ ಪ್ರಕರಣವನ್ನು ಪರಿಣಾಮಕಾರಿಯಾಗಿ ವಾದಿಸುವ ಮೂಲಕ ನಮ್ಮನ್ನು ವಜಾಗೊಳಿಸುವುದನ್ನು ಸರ್ಕಾರ ತಡೆಯಬಹುದಿತ್ತು. ಆದರೆ, ಸರ್ಕಾರಕ್ಕೆ ಯಾವುದೇ ಇಚ್ಛಾಶಕ್ತಿ ಇಲ್ಲವೆಂದು ಆರೋಪಿಸಿದ್ದಾರೆ.

ಛತ್ತೀಸ್‌ಗಢದಲ್ಲಿ 4,000 ಕ್ಕೂ ಹೆಚ್ಚು ಲ್ಯಾಬ್ ಸಹಾಯಕ ಹುದ್ದೆಗಳು ಮತ್ತು 24,000 ಕ್ಕೂ ಹೆಚ್ಚು ಸಹಾಯಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ನೇಮಕಾತಿ ನಡೆಸಬೇಕು. ನಮ್ಮನ್ನು ಮರು ನೇಮಕ ಮಾಡಿಕೊಳ್ಳಬೇಕೆಂದು ಪ್ರತಿಭಟನಾನಿರತ ಶಿಕ್ಷಕಿಯರು ಆಗ್ರಹಿಸಿದ್ದಾರೆ.

ಸರ್ಕಾರದ ನಿರ್ಲಕ್ಷ್ಯದಿಂದ ವಜಾಗೊಂಡಿರುವ ನಮ್ಮಲ್ಲಿ 71% ಶಿಕ್ಷಕರು ಬುಡಕಟ್ಟು ಸಮುದಾಯಕ್ಕೆ ಸೇರಿದವರು. ಹೆಚ್ಚಿನವರು ಮಹಿಳೆಯರು. ಬುಡಕಟ್ಟು ಪ್ರದೇಶಗಳಲ್ಲಿ ಮಹಿಳೆಯರು ಎದುರಿಸುತ್ತಿರುವ ಸಾಮಾಜಿಕ ಮತ್ತು ಆರ್ಥಿಕ ಅಡೆತಡೆಗಳಿಂದಾಗಿ, ಪರ್ಯಾಯ ಉದ್ಯೋಗವನ್ನು ಹುಡುಕುವುದು ಸವಾಲಿನ ಸಂಗತಿ, ನಮಗೆ ಅನ್ಯಾಯವಾಗಿದೆ. ಸರ್ಕಾರವು ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.

ಶಿಕ್ಷಣ ಇಲಾಖೆಯ ಮುಖ್ಯಸ್ಥರೂ ಆಗಿರುವ ಮುಖ್ಯಮಂತ್ರಿ ವಿಷ್ಣು ದೇವ ಸಾಯಿ ಅವರನ್ನು ಭೇಟಿ ಮಾಡಲು ಪ್ರತಿಭಟನಾನಿರತರು ಪದೇ ಪದೇ ಪ್ರಯತ್ನಿಸಿದ್ದಾರೆ. ಆದರೆ, ಅವರ ಭೇಟಿಗೆ ಮುಖ್ಯಮಂತ್ರಿಗಳು ಅವಕಾಶ ನೀಡುತ್ತಿಲ್ಲ. ಮುಖ್ಯಮಂತ್ರಿಗಳು ಕೇವಲ ಭರವಸೆ ನೀಡುತ್ತಲೇ, ಯಾಮಾರಿಸುತ್ತಿದ್ದಾರೆ ಎಂದು ಶಿಕ್ಷಕಿಯರು ಆರೋಪಿಸಿದ್ದಾರೆ.

ಶಿಕ್ಷಕಿಯರ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ, “ಬಿಎಡ್ ಶಿಕ್ಷಕರು ‘ದೀರ್ಘದಂಡ ನಮಸ್ಕಾರ’ ಹಾಕುತ್ತಿರುವ ಈ ದೃಶ್ಯಗಳು ಈ ದೇಶದಲ್ಲಿ ಯುವಜನರನ್ನು ಹೇಗೆ ನಡೆಸಿಕೊಳ್ಳಲಾಗುತ್ತಿದೆ ಎಂಬುದನ್ನು ತೋರಿಸುತ್ತದೆ. ಬಿಜೆಪಿ ಸರ್ಕಾರ ಛತ್ತೀಸ್‌ಗಢದಲ್ಲಿ 1 ಲಕ್ಷ ಉದ್ಯೋಗಗಳನ್ನು ನೀಡುವುದಾಗಿ ಭರವಸೆ ನೀಡಿತ್ತು. ರಾಜ್ಯದಲ್ಲಿ 33,000 ಬೋಧನಾ ಹುದ್ದೆಗಳು ಖಾಲಿಯಾಗಿವೆ. ಆದರೆ, ಇದೇ ಸರ್ಕಾರ 3,000 ಶಿಕ್ಷಕರನ್ನು ವಜಾಗೊಳಿಸಿದೆ. ಈ ಯುವತಿಯರು ತಮ್ಮನ್ನು ಮರುನೇಮಕ ಮಾಡಿಕೊಳ್ಳುವಂತೆ ಒತ್ತಾಯಿಸಿ ಚಳಿ-ಗಾಳಿಯ ನಡುವೆ ರಸ್ತೆಯಲ್ಲಿ ಮಲಗಿದ್ದಾರೆ. ಪ್ರಸ್ತುತ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ, ಛತ್ತೀಸ್‌ಗಢ ಮತ್ತು ಇತರ ರಾಜ್ಯಗಳ ಯುವಜನರು ಭ್ರಷ್ಟಾಚಾರ ಮತ್ತು ನಿರುದ್ಯೋಗದ ವಿರುದ್ಧ ಪ್ರತಿಭಟನೆ ನಡೆಸಿ ಬೀದಿಗಿಳಿಯುತ್ತಿದ್ದಾರೆ. ಬಿಜೆಪಿ ಯುವಜನರ ಭವಿಷ್ಯವನ್ನು ಕತ್ತಲೆಗೆ ತಳ್ಳಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಷ್ಟೇ ಅಲ್ಲ, ಇಡೀ ದೇಶದಲ್ಲಿಯೇ ನಿರುದ್ಯೋಗ ಸಮಸ್ಯೆ ರಾರಾಜಿಸುತ್ತಿದೆ. ವಿಶೇಷವಾಗಿ ಉತ್ತರ ಪ್ರದೇಶ ಮತ್ತು ಬಿಹಾರ ಎರಡೂ ರಾಜ್ಯಗಳ ಯುವಜನರು ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮೋದಿ ಅಧಿಕಾರಕ್ಕೆ ಬರುವ ಹಿಂದಿನ ವರ್ಷ- 2012ರಲ್ಲಿ ನಿರುದ್ಯೋಗ ದರವು 2.1% ಇತ್ತು. 2024ರಲ್ಲಿ 9.1%ಗೆ ಏರಿಕೆಯಾಗಿದೆ. ಪದವೀಧರರಲ್ಲಿ ನಿರುದ್ಯೋಗ ದರವು 19.2% ರಿಂದ 35.8%ಕ್ಕೆ ಏರಿದ್ದರೆ, ಸ್ನಾತಕೋತ್ತರ ಪದವಿ ಪಡೆದವರಲ್ಲಿ ನಿರುದ್ಯೋಗ ದರವು 36.2%ಗೆ ದಾಖಲಾಗಿದೆ. 20ರಿಂದ 24 ವಯಸ್ಸಿನ ಯುವಜನರ ನಿರುದ್ಯೋಗ ಪ್ರಮಾಣವು ಬರೋಬ್ಬರಿ 44.49%ಗೆ ಏರಿಕೆಯಾಗಿದೆ. ಅಂತೆಯೇ, 25 ಮತ್ತು 29ರ ನಡುವಿನ ಯುವಜನರಲ್ಲಿ ನಿರುದ್ಯೋಗವು 14.33% ಇದೆ. ದೇಶದಲ್ಲಿ ಬಹಳ ದೊಡ್ಡ ಸಂಖ್ಯೆಯಲ್ಲಿರುವ ನಿರುದ್ಯೋಗಿಗಳಿಗೆ ಕೆಲಸ ಕೊಡುವವರೂ ಇಲ್ಲ; ಅವರ ಶಕ್ತಿ ಮತ್ತು ಸಾಮರ್ಥ್ಯವನ್ನು ಸರಿದಾರಿಯಲ್ಲಿ ಸದುಪಯೋಗಪಡಿಸಿಕೊಳ್ಳುವ ನಾಯಕರೂ ಕೂಡ ಇಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...