ಚುನಾವಣೆಗೂ ಮುನ್ನ ಕೆಸಿಆರ್‌ಗೆ ಆಘಾತ: ಮಾಜಿ ಸಚಿವರು, ಶಾಸಕರು ಸೇರಿ 35 ಮಂದಿ ‘ಕೈ’ ಸೇರ್ಪಡೆಗೆ ಸಜ್ಜು

Date:

ಡಿಸೆಂಬರ್‌ನಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಗೂ ಮುನ್ನವೇ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ನೇತೃತ್ವದ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿಗೆ ದೊಡ್ಡ ಆಘಾತವುಂಟಾಗಿದೆ. ಮಾಜಿ ಸಚಿವರು, ಶಾಸಕರು, ಸಂಸದರು ಸೇರಿ ಸುಮಾರು 35ಕ್ಕೂ ಹೆಚ್ಚು ಪ್ರಮುಖ ನಾಯಕರು ಕಾಂಗ್ರೆಸ್‌ ಸೇರಲು ಸಜ್ಜಾಗಿದ್ದಾರೆ.

ಇದಕ್ಕೆ ಮುನ್ಸೂಚನೆಯೆಂಬಂತೆ ಈ ನಾಯಕರೆಲ್ಲರೂ ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ ಅವರನ್ನು ಭೇಟಿಯಾದರು.

ಭೇಟಿ ಮಾಡಿದ ಬಿಆರ್‌ಎಸ್ ನಾಯಕರಲ್ಲಿ ಮಾಜಿ ಸಂಸದ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ, ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್, ಮಾಜಿ ಶಾಸಕರಾದ ಪಣ್ಯಂ ವೆಂಕಟೇಶ್ವರಲು, ಕೋರಂ ಕನಕಯ್ಯ, ರಾಕೇಶ್ ರೆಡ್ಡಿ, ಕೋಟ ರಾಮ್ ಬಾಬು ಸೇರಿದಂತೆ  35ಕ್ಕೂ ಅಧಿಕ ನಾಯಕರು ಉಪಸ್ಥಿತರಿದ್ದರು. ಈ ನಾಯಕರೆಲ್ಲ ಬಿಆರ್‌ಎಸ್ ತ್ಯಜಿಸಿ ಕಾಂಗ್ರೆಸ್ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜೀನಾಮೆ ನೀಡಿ ಕೆಲಸ ತೊರೆದಿದ್ದ ಮಹಿಳಾ ಬಸ್ ಚಾಲಕಿಗೆ ಕಾರು ಉಡುಗೊರೆ ನೀಡಿದ ಕಮಲ್ ಹಾಸನ್

ಜುಲೈ ಮೊದಲ ವಾರದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಉಪಸ್ಥಿತಿಯೊಂದಿಗೆ ತೆಲಂಗಾಣದ ಕಮ್ಮಂನಲ್ಲಿ ಅದ್ಧೂರಿ ಸಾರ್ವಜನಿಕ ಸಭೆ ನಡೆಸಲು ಉದ್ದೇಶಿಸಲಾಗಿದೆ. ಈ ಸಮಾರಂಭದಲ್ಲಿ ಬಿಆರ್‌ಎಸ್ ನಾಯಕರು ಮಾತ್ರವಲ್ಲದೆ ಬಿಜೆಪಿಯ ಕೆಲವು ನಾಯಕರು ಕೂಡ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...