4 ದಿನಗಳ ಕೃಷಿ ಮೇಳಕ್ಕೆ ಚಾಲನೆ | ಕೃಷಿ ಸಬಲೀಕರಣಕ್ಕೆ ನೆರವಾಗಿ: ಸಚಿವ ಚಲುವರಾಯಸ್ವಾಮಿ

Date:

ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಮತ್ತು ಆದಾಯ ನೀಡುವ ಬೆಳೆಗಳನ್ನು ನೀಡುವ ಉದ್ದೇಶದಿಂದ ಇಂತಹ ಕೃಷಿ ಮೇಳಗಳನ್ನು ಆಯೋಜಿಸಲಾಗಿದ್ದು, ಇದನ್ನು ಬಳಸಿಕೊಂಡು ರೈತರು ಉದ್ಯಮಿಗಳಾಗಿ ಬಲವರ್ಧನೆಗೊಳ್ಳಬೇಕೆಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು ಕರೆ ನೀಡಿದರು.

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಜಿಕೆವಿಕೆ ಆವರಣದಲ್ಲಿ ‘ಸಮೃದ್ಧ ಕೃಷಿ -ವಿಕಸಿತ ಭಾರತ ನೆಲ,ಜಲ ಮತ್ತು ಬೆಳೆ’ ಶೀರ್ಷಿಕೆಯ ಅಡಿಯಲ್ಲಿ ಇಂದಿನಿಂದ(ನ.13) ನಾಲ್ಕು ದಿನಗಳವರೆಗೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಏರ್ಪಡಿಸಲಾಗಿರುವ ಕೃಷಿ ಮೇಳ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರು ಕೃಷಿ ವಿವಿಯೂ ಪ್ರತಿವರ್ಷ ಅತ್ಯುತ್ತಮ ಕೃಷಿ ಮೇಳ ಮತ್ತು ಪ್ರದರ್ಶನವನ್ನು ಏರ್ಪಡಿಸುತ್ತಾ ಬಂದಿದ್ದು, ಉತ್ತಮ ತಳಿಗಳನ್ನು ಈ ಬಾರಿ ಬಿಡುಗಡೆಗೊಳಿಸಿದೆ. ಕೃಷಿ ವಿವಿಗಳು ರೈತರಿಗೆ ನೀಡಬೇಕಾಗಿರುವುದು ಇದನ್ನೆ. ಕೃಷಿಯನ್ನು ಉದ್ದಿಮೆಯಾಗಿ ಪರಿವರ್ತಿಸಿ ರೈತರಿಗೆ ಉತ್ತಮ ಆದಾಯ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಸೌಲಭ್ಯಗಳು ಹಾಗೂ ಕಾರ್ಯಕ್ರಮಗಳನ್ನು ನೀಡುತ್ತಿವೆ. ಕೆಪೆಕ್ ಸಂಸ್ಥೆಯೂ ಪಿಎಂಎಫ್ಎಂಇ ಯೋಜನೆಯಡಿಯಲ್ಲಿ ರಾಜ್ಯದಲ್ಲಿ 5 ಸಾವಿರ ಉದ್ಯಮಿಗಳಿಗೆ 15 ಲಕ್ಷ ಸಬ್ಸಿಡಿ ನೀಡಿದೆ ಎಂದು ಸಚಿವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 11 13 at 4.26.17 PM

ಇತ್ತೀಚೆಗೆ ಫಿಲಿಪೈನ್ಸ್ ದೇಶಕ್ಕೆ ಪ್ರವಾಸ ಕೈಗೊಂಡು ಮನಿಲಾದಲ್ಲಿರುವ ಅಂತಾರಾಷ್ಟ್ರೀಯ ಭತ್ತ ಸಂಶೋಧನ ಕೇಂದ್ರಕ್ಕೆ ಭೇಟಿ ನೀಡಿದ್ದೆ. ಈ ವೇಳೆ ಫಿಲಿಪೈನ್ಸ್ ದೇಶದಲ್ಲಿ ಸುಮಾರು 25 ರಿಂದ 30 ದಿನಗಳ ಕಾಲ ಮಳೆ ನಿರಂತರವಾಗಿ ಬಂದರೂ ಹಾನಿಯಾಗದಂತಹ ಭತ್ತದ ತಳಿಯನ್ನು ಕಂಡು ಹಿಡಿದಿದ್ದು, ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿವಿಯಲ್ಲೂ ನಮ್ಮ ವಿಜ್ಞಾನಿಗಳು ರೈತರಿಗೆ ಇಂತಹ ತಳಿ ಸಂಶೋಧಿಸಿದ್ದಾರೆ ಎಂದು ಮಾಹಿತಿ ನೀಡಿದರು.

ರೈತರು ವೈಜ್ಞಾನಿಕ ಹಾಗೂ ಸಮಗ್ರ ಬೇಸಾಯದ ಬಗ್ಗೆ ಎಚ್ಚು ಗಮನ ಹರಿಸಬೇಕು, ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಪರಿವರ್ತಿಸಬೇಕು. ಇದಕ್ಕೆ ಕೃಷಿ ವಿವಿಗಳು ನೆರವಾಗಬೇಕು ಎಂದು ಸಚಿವರು ಕರೆ ನೀಡಿದರು.

ರೈತರ ಬೆಲೆಗಳಿಗೆ ನ್ಯಾಯಯುತ ಬೆಲೆ , ಸೂಕ್ತ ಮಾರುಕಟ್ಟೆ ವ್ಯವಸ್ಥೆ ಜೊತೆಗೆ ಸಂಶೋಧನೆಗಳ ವೈಜ್ಞಾನಿಕ ಅನುಷ್ಠಾನ, ಬರ ನಿರ್ವಹಣೆ ಮಾಡಿದಾಗ ಮಾತ್ರ ಸುಸ್ಥಿರ ಕೃಷಿ ಸಾಧ್ಯ. ರೈತರ ಬದುಕು ಹಸನು ಮಾಡುವುದು ನಮ್ಮ ಹೊಣೆ .ಕೃಷಿ ಸಂಶೋಧನೆ, ಮೌಲ್ಯ ವರ್ಧನೆಗೆ ಹೆಚ್ಚು ಒತ್ತು ನೀಡಬೇಕು. ಇಳುವರಿಯೂ ವೃದ್ಧಿಸಬೇಕು. ನಮ್ಮ ಸರ್ಕಾರ ಕೃಷಿಗೆ ಬೆಂಬಲ, ಸಂಶೋಧನೆಗಳಿಗೆ ನೆರವು, ಪ್ರೋತ್ಸಾಹ ನೀಡಲು ಸದಾ ಸಿದ್ದ ಎಂದು ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು.

ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೂವರು ಪ್ರಗತಿಪರ ರೈತರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಾಂದ್ಲಾಜೆ, ಕೃಷಿ ಇಲಾಖೆ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯದ ಕುಲಪತಿ ಎಸ್.ವಿ. ಸುರೇಶ್, ಕುಲಸಚಿವ ನಾರಾಯಣಸ್ವಾಮಿ, ಆಡಳಿತ ಮಂಡಳಿ ಸದಸ್ಯರಾದ ಡಾ.ಟಿ.ಕೆ. ಪ್ರಭಾಕರ ಶೆಟ್ಟಿ, ಡಾ.ಹೆಚ್.ಎಲ್.ಹರೀಶ್, ಬಿ.ಎಸ್ ಉಲ್ಲಾಸ್, ಡಾ. ವೈ.ಎನ್. ಶಿವಲಿಂಗಯ್ಯ ದಿನೇಶ್ ಹಾಗೂ ಡಾ.ಎಂ. ಚಂದ್ರೆಗೌಡ ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು.

KRISHI MELA
WhatsApp Image 2025 11 13 at 4.26.21 PM
WhatsApp Image 2025 11 13 at 4.26.14 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...