40 ಪರ್ಸೆಂಟ್‌ ಕಮಿಷನ್ | ದಾಖಲೆ ನೀಡಿ ಕೆಂಪಣ್ಣ ಆರೋಪ ಮಾಡಲಿ: ಸಿದ್ದರಾಮಯ್ಯ

Date:

“40 ಪರ್ಸೆಂಟ್‌ ಕಮಿಷನ್ ವಿಚಾರವಾಗಿ ತನಿಖೆ ನಡೆಸಲು ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದೇವೆ. ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಮತ್ತೆ 40 ಪರ್ಸೆಂಟ್‌ ಕಮಿಷನ್ ಆರೋಪಿಸಿದ್ದಾರೆ. ಈ ಬಗ್ಗೆ ದಾಖಲೆ ನೀಡಲಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಭಗೀರಥ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “40% ಭ್ರಷ್ಟಾಚಾರ ಇದ್ದರೆ ದಾಖಲೆ ನೀಡಲಿ, ಅಲ್ಲದೆ ಅಧಿಕಾರಿಗಳು ಕೇಳುತ್ತಾರೆ ಎಂದಿದ್ದಾರೆ. ಅಂಥವರ ವಿರುದ್ದ ದೂರು ನೀಡಲಿ, ಕ್ರಮಕೈಗೊಳ್ಳುತ್ತೇವೆ” ಎಂದರು.

ಈಶ್ವರಪ್ಪ ವಿರುದ್ಧ ಕ್ರಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶ ವಿಭಜನೆ ಹೇಳಿಕೆ ನೀಡುವವರನ್ನ ಕೊಲ್ಲುವ ಕಾನೂನು ತರಬೇಕು ಎನ್ನುವ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, “ಈಶ್ವರಪ್ಪನವರಿಗೆ ಕಡಿ, ಬಡಿ, ತರಿ ಇದು ಬಿಟ್ಟು ಬೇರೆ ಭಾಷೆ ಗೊತ್ತಿಲ್ಲ. ಈಶ್ವರಪ್ಪನ ವಿರುದ್ದ ಕ್ರಮ ತೆಗೆದುಕೊಳ್ಳುತ್ತೇವೆ. ಕಡಿ, ಬಡಿ, ಕೊಲ್ಲು, ಕತ್ತರಿಸು ಭಾಷೆ ಬಿಟ್ಟು ಬಿಜೆಪಿಗೆ ಏನು ಬರಲ್ಲ” ಎಂದರು.

“ನನಗೆ ಆರ್‌ಎಸ್‌ಎಸ್ ಟ್ರೈನಿಂಗ್ ಆಗಿದೆ ಎನ್ನುತ್ತಾರೆ. ಇದೇನಾ ಟ್ರೈನಿಂಗ್ ಆಗಿರುವುದು ಈಶ್ವರಪ್ಪ? ಈಶ್ವರಪ್ಪ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಡಿ ಕೆ ಸುರೇಶ್ ಅವರನ್ನು ಕೊಲ್ಲಬೇಕು ಎಂದರೆ ಒಬ್ಬ ರಾಜಕೀಯ ಪಕ್ಷದ ಮುಖಂಡರಾಗಿ ಹೇಳುವ ಭಾಷೆನಾ ಇದು? ಇವರಿಗೆಲ್ಲ ಆರ್‌ಎಸ್‌ಎಸ್ ಟ್ರೈನಿಂಗ್ ಕೊಟ್ಟಿರುವುದು ಇದೇನಾ?” ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳಾ ಆಯೋಗಕ್ಕೆ ಅಧ್ಯಕ್ಷರಿಲ್ಲ; ಶೋಷಿತ ಹೆಣ್ಣುಮಕ್ಕಳ ನೋವು ಕೇಳುವವರಿಲ್ಲ

“ಅನುದಾನದ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ಗೆ ಹೋಗುವ ಆಲೋಚನೆ ಇಲ್ಲ. ನಮಗೆ ಅನ್ಯಾಯ ಆಗಿರುವುದು ನಿಜ. ನಾವು 100 ರೂ.ತೆರಿಗೆ ಕೊಟ್ಟರೆ 12 ರೂ ಮಾತ್ರ. ಇನ್ನುಳಿದ 88 ರೂ. ಕೇಂದ್ರಕ್ಕೆ ಹೋಗುತ್ತದೆ. ಗುಜರಾತ್ ಸಿಎಂ ಆದಾಗ ತೆರಿಗೆ ನಮ್ಮ ರಾಜ್ಯದ್ದು, ನಾವೇ ವಸೂಲಿ ಮಾಡುತ್ತೇವೆ ಎಂದರು. ಇದನ್ನ ಹೇಳಿದ್ದು ಮಿಸ್ಟರ್ ಮೋದಿ. ಈಗ ದೇಶ ವಿಭಜನೆ ಎಂದು ಹೇಳುತ್ತಿದ್ದಾರೆ. ನಮ್ಮ ಪಾಲು ನಾವು ಕೇಳಿದ್ರೆ ದೇಶ ವಿಭಜನೆ ಎನ್ನುತ್ತಾರೆ”ಎಂದರು.

“ಭದ್ರ ಮೇಲ್ದಂಡೆ ವಿಚಾರದಲ್ಲಿ ನಿರ್ಮಲ ಸೀತಾರಾಮನ್ ಯೋಜನೆಗೆ 5300 ಕೋಟಿ ರೂ ಹೇಳಿದ್ದಾರೆ. ಬಜೆಟ್ ನಲ್ಲಿ ಹೇಳಿದ್ದಾರೆಯೇ ವಿನಃ ಒಂದು ರೂಪಾಯಿ ಕೂಡಾ ಕೊಟ್ಟಿಲ್ಲ. ನಾನು ಕೂಡಾ ನೀರಾವರಿ ಮಂತ್ರಿಗಳನ್ನ ಕೇಳಿದ್ದೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...