ಬಿಜೆಪಿಯ 40 ಹಾಲಿ ಶಾಸಕರು ಅಪರಾಧದ ಹಿನ್ನೆಲೆ ಉಳ್ಳವರು: ರಮೇಶ್ ಬಾಬು ಆರೋಪ

Date:

  • ಎಲ್ಲ ಪಕ್ಷಗಳಿಂದ ಶೇ. 35ರಷ್ಟು ಶಾಸಕರು ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾರೆ
  • ಅಪರಾಧ ಹಿನ್ನೆಲೆ ಹೊಂದಿರುವ ರೌಡಿ ಶೀಟರ್‌ಗಳನ್ನು ಬಿಜೆಪಿ ಸೇರಿಸಿಕೊಳ್ಳುತ್ತಿದೆ

ಚುನಾಯಿತ ಶಾಸಕರ ಕ್ರಿಮಿನಲ್ ಪ್ರಕರಣ ಕುರಿತು ಇತ್ತೀಚೆಗೆ ವರದಿ ಬಂದಿದ್ದು, ಆ ಪ್ರಕಾರ ಆಡಳಿತ ಬಿಜೆಪಿಯ 40 ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿವೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಆರೋಪಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಒಟ್ಟಾರೆ ಎಲ್ಲ ಪಕ್ಷಗಳಿಂದ 2018ರಲ್ಲಿ ಚುನಾಯಿತರಾಗಿರುವವರಲ್ಲಿ ಶೇ. 35ರಷ್ಟು ಶಾಸಕರು ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾರೆ ಎಂದು ತಿಳಿಸಿದರು.

ಆಡಳಿತ ಪಕ್ಷದವರು ಇತರರಿಗೆ ಮಾದರಿ ಆಗಿ ನಡೆದುಕೊಳ್ಳಬೇಕು. ಆದರೆ, ಆಡಳಿತ ಬಿಜೆಪಿ ಕ್ರಿಮಿನಲ್ ಅಪರಾಧ ಇರುವ ರೌಡಿ ಶೀಟರ್‌ಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ. ಸೈಲೆಂಟ್ ಸುನೀಲ್ ಮತ್ತು ಫೈಟರ್ ರವಿ ಅವರ ಪಕ್ಷ ಸೇರ್ಪಡೆ ವಿಚಾರವಾಗಿ ಸಾಕಷ್ಟು ಸುದ್ದಿ ಆಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೆ ಹಿನ್ನೆಲೆ ಕಳೆದ ಕೆಲವು ತಿಂಗಳಿನಿಂದ ಅಪರಾಧ ಪ್ರಕರಣ ತೆರವು ಮಾಡಿ ಬಿಜೆಪಿಗೆ ಸೇರಿಸಿಕೊಳ್ಳುತ್ತಾರೆ. ಸುಪ್ರೀಂ ಕೋರ್ಟ್ ತೀರ್ಪಿನ ಆದೇಶದ ಮೇರೆಗೆ ಚುನಾವಣಾ ಆಯೋಗ ಕಠಿಣ ನಿಯಮ ಜಾರಿ ಮಾಡಿದೆ. ನಾಮಪತ್ರ ಸಲ್ಲಿಕೆ ಮಾಡುವಾಗ ಕ್ರಿಮಿನಲ್ ಪ್ರಕರಣದ ಮಾಹಿತಿಯನ್ನು ಕಡ್ಡಾಯವಾಗಿ ದಾಖಲಿಸಬೇಕು. ಈ ವಿಚಾರವಾಗಿ ಮಾಹಿತಿ ನೀಡದೇ ಇರುವುದು, ಮುಚ್ಚಿಡುವುದು ಮಾಡಿದರೆ ನಾಮಪತ್ರ ತಿರಸ್ಕರಿಸುವ ಅಧಿಕಾರ ನೀಡಲಾಗಿದೆ ಎಂದು ವಿವರಿಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಶ್ರೀಧರ್ ರೆಡ್ಡಿ ಎಂಬುವವರು ಬಿಜೆಪಿ ಅಭ್ಯರ್ಥಿ ಆಕಾಂಕ್ಷಿ ಎಂದು ಹೇಳಿಕೊಂಡಿದ್ದು, ಇದಕ್ಕೆ ಇಂಬು ಕೊಡುವಂತೆ ಬಿಜೆಪಿ ನಾಯಕರು ಇವರ ಹೆಸರು ಪ್ರಸ್ತಾಪ ಮಾಡಿದ್ದಾರೆ. ಇವರು ಬೆಂಗಳೂರು ನಗರ ಪದಾಧಿಕಾರಿಯಾಗಿ ಕೆಲಸ ಮಾಡಿದ್ದು, ದುರಂತ ಎಂದರೆ ಇವರ ವಿರುದ್ಧ 12 ಕ್ರಿಮಿನಲ್ ಪ್ರಕರಣ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. 1997ರಲ್ಲಿ ಜಮೀನು ಪ್ರಕರಣದಲ್ಲಿ ಅನೇಕ ಕೇಸು ದಾಖಲಾಗಿವೆ ಎಂದು ಹೇಳಿದರು.

ಆನೇಕಲ್ ತಾಲೂಕಿನ ಜಿಗಣಿ ಹೋಬಳಿ ಮಾಲಗೊಂಡನಹಳ್ಳಿ ಗ್ರಾಮದ ಸರ್ವೆ ನಂ. 76, 79ರಲ್ಲಿ 9 ಎಕರೆಯಲ್ಲಿ 450ಕ್ಕೂ ಹೆಚ್ಚು ಕಂದಾಯ ನಿವೇಶನ ನಿರ್ಮಾಣ ಮಾಡಿ ಮಾರಾಟ ಮಾಡಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ಮಾಡಿದ್ದಾರೆ. ಇವರ ವಿರುದ್ಧ ಅನೇಕ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ದಾಖಲಾಗಿರುವ ದೂರು ಪೂರ್ಣ ಪ್ರಮಾಣದಲ್ಲಿ ತನಿಖೆ ಆಗಿಲ್ಲ. ಹೀಗಾಗಿ ಕಾಂಗ್ರೆಸ್ ಪರವಾಗಿ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದು ಈ ಹಗರಣ ಸಿಐಡಿ ತನಿಖೆಗೆ ನೀಡಬೇಕು ಎಂದು ಒತ್ತಾಯಿಸಿದ್ದೇವೆ ಎಂದರು.

ಈ ಸುದ್ದಿ ಓದಿದ್ದೀರಾ ? ಈ ದಿನ ಸಂಪಾದಕೀಯ | ಸೋಲಿನ ಭಯದಿಂದ ಸಿನಿಮಾ ತಾರೆಯರ ಹಿಂದೆ ಬಿದ್ದಿದೆಯೇ ಬಿಜೆಪಿ?

ಜನರ ಗಮನ ಬೇರೆಡೆ ಸೆಳೆಯಲು ದೇವೇಗೌಡರ ಹೇಳಿಕೆ

ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರು ದೆಹಲಿಯಲ್ಲಿ ಹೇಳಿಕೆ ನೀಡಿ, ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಅವರ ಸಂಬಂಧ ಚೆನ್ನಾಗಿದೆ. ವರುಣಾದಲ್ಲಿ ವಿಜಯೇಂದ್ರ ಅವರ ಸ್ಪರ್ಧೆಗೆ ಯಡಿಯೂರಪ್ಪ ಅವರು ಒಪ್ಪುತ್ತಿಲ್ಲ ಎಂಬ ಕಾರಣಕ್ಕೆ ಈ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನು ದೇವೇಗೌಡರ ಮೇಲೆ ಅಪಾರ ಗೌರವ ಹೊಂದಿದ್ದು, ಅವರ ಬಾಯಲ್ಲಿ ಇಂತಹ ಹೇಳಿಕೆ ಬರಬಾರದು. ಅವರು ಹಾಸನ ಟಿಕೆಟ್ ವಿಚಾರವಾಗಿ ಇರುವ ಗೊಂದಲದ ವಿಚಾರದಿಂದ ಜನರ ಗಮನ ಬೇರೆಡೆ ಸೆಳೆಯಲು ಈ ಹೇಳಿಕೆ ನೀಡಿದ್ದಾರೆ. ಇದರಲ್ಲಿ ಯಾವುದೇ ತಿರುಳು ಇಲ್ಲ. ರಾಜ್ಯ ಚುನಾವಣೆಯ ಪ್ರತಿ ಹಂತದಲ್ಲಿ ಜೆಡಿಎಸ್ ಬಿಜೆಪಿ ಬಿ ಟೀಮ್ ಆಗಿದೆ. ಕಾಂಗ್ರೆಸ್ ಪಕ್ಷ, ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರಿಗೆ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯವಿಲ್ಲ. ಹೊಂದಾಣಿಕೆ ಅಗತ್ಯ ಇರುವುದು ಜೆಡಿಎಸ್ ಪಕ್ಷಕ್ಕೆ. ಈ ಬಗ್ಗೆ ಸಿ ಪಿ ಯೋಗೇಶ್ವರ್ ಅವರೇ ಹೇಳಿದ್ದಾರೆ ಎಂದು ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...