ಮಧ್ಯಪ್ರದೇಶ | ಮತದಾರರ ಪಟ್ಟಿಯಿಂದ 42.74 ಲಕ್ಷ ಮತದಾರರ ಹೆಸರು ಡಿಲೀಟ್

Date:

ಮಧ್ಯಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಮೊದಲ ಹಂತವು ಮಂಗಳವಾರ ಪೂರ್ಣಗೊಂಡಿದ್ದು, 230 ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯಿಂದ 42.74 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ.

2003ರ ಮತದಾರರ ಪಟ್ಟಿಯಲ್ಲಿ ಪೋಷಕರು ಅಥವಾ ಅಜ್ಜ-ಅಜ್ಜಿಯರ ವಿವರಗಳು ಕಂಡುಬಂದಿಲ್ಲವಾದ್ದರಿಂದ ಒಟ್ಟು 8,65,832 ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ಹೇಳಲಾಗಿದೆ. ಪಟ್ಟಿಯಿಂದ ತೆಗೆದುಹಾಕಲಾದ 42.74 ಲಕ್ಷಕ್ಕೂ ಹೆಚ್ಚು ಮತದಾರರಲ್ಲಿ 19.19 ಲಕ್ಷ ಪುರುಷರು ಮತ್ತು 23.64 ಲಕ್ಷ ಮಹಿಳೆಯರು.

ಇದನ್ನು ಓದಿದ್ದೀರಾ? Breaking News | ಆಳಂದ ಮತದಾರರ ಪಟ್ಟಿ ಅಕ್ರಮ; ತನಿಖೆಗೆ ಎಸ್‌ಐಟಿ ರಚನೆ ಸಾಧ್ಯತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಸರು ನೋಂದಾಯಿಸದ 8.65 ಲಕ್ಷಕ್ಕೂ ಹೆಚ್ಚು ಮತದಾರರಿಗೆ ನೋಟಿಸ್ ನೀಡಲಾಗುವುದು. 2026ರ ಫೆಬ್ರವರಿ 21ರಂದು ಪ್ರಕಟವಾಗುವ ಅಂತಿಮ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಸೇರಿಸಲು ಮತ್ತು 13 ದಾಖಲೆಗಳಲ್ಲಿ ಯಾವುದಾದರೂ ಒಂದರೊಂದಿಗೆ ವೈಯಕ್ತಿಕವಾಗಿ ಹಾಜರಾಗಲು ಅವರಿಗೆ ಒಂದು ವಾರದ ಸಮಯವನ್ನು ನೀಡಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

ಇನ್ನು ಈ ಬಗ್ಗೆ ಮಾತನಾಡಿದ ಮಧ್ಯಪ್ರದೇಶದ ಸಿಇಒ ಎಸ್‌ಕೆ ಝಾ, “31.51 ಲಕ್ಷ ಅಥವಾ 73% ಮತದಾರರು ಸ್ಥಳಾಂತರಗೊಂಡಿದ್ದಾರೆ, 8.46 ಲಕ್ಷ ಅಥವಾ 20% ಜನರು ಸಾವನ್ನಪ್ಪಿದ್ದಾರೆ ಮತ್ತು 2.77 ಲಕ್ಷ ಅಥವಾ 6% ಜನರು ನಕಲಿ ಮತದಾರರಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಚುನಾವಣೆಗೂ ಮುನ್ನವೇ ಬಿಹಾರದಲ್ಲಿ ತರಾತುರಿಯಲ್ಲಿ ನಡೆಸಲಾದ ಸದ್ಯ 12 ರಾಜ್ಯಗಳಲ್ಲಿ ನಡೆಸಲಾಗುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ವಿರುದ್ಧ ಈಗಾಗಲೇ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದೆ. ಈ ಪ್ರಕ್ರಿಯೆಯ ಮೂಲಕ ದೊಡ್ಡ ಮಟ್ಟದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂದು ದೂರಿದೆ. ಅದೂ ಮುಖ್ಯವಾಗಿ ಎಲ್ಲ ದಾಖಲೆಗಳು ಇರದ ದಲಿತರು, ಮಹಿಳೆಯರು ಮತ್ತು ವಲಸೆ ಕಾರ್ಮಿಕರಿಂದ ಮತದಾನದ ಹಕ್ಕನ್ನು ಕಸಿಯಲಾಗುತ್ತಿದೆ ಎಂದು ವಿಪಕ್ಷಗಳು ಆರೋಪಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...