43 ಕೇಸ್‌ ವಿತ್‌ಡ್ರಾ, ಇವೆಲ್ಲ ಅಲ್ಪಸಂಖ್ಯಾತರಿಗೆ ಸೇರಿದ ಪ್ರಕರಣಗಳೇ: ಬಿಜೆಪಿಗೆ ಪರಮೇಶ್ವರ್‌ ಪ್ರಶ್ನೆ

Date:

ಹುಬ್ಬಳ್ಳಿ ಪ್ರಕರಣವನ್ನು ಮಾತ್ರ ಹಿಂಪಡೆದಿಲ್ಲ. ರೈತರು, ವಿದ್ಯಾರ್ಥಿಗಳು, ಸಾಮಾನ್ಯ ಜನರು ಕೈಗೊಂಡಿದ್ದ ಪ್ರತಿಭಟನೆಯ ಪ್ರಕರಣಗಳನ್ನೂ ಹಿಂಪಡೆಯಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾನೂನಿನ ಚೌಕಟ್ಟಿನಲ್ಲಿ ಹಿಂಪಡೆಯುವ ಪ್ರಕ್ರಿಯೆಯನ್ನು ಮಾಡಿದ್ದೇವೆ. ಕೋರ್ಟ್ ಒಪ್ಪಿದರೆ ವಾಪಸ್ ಆಗುತ್ತದೆ. ಇಲ್ಲವಾದರೆ ಕೇಸ್‌ಗಳು ಮುಂದುವರಿಯುತ್ತವೆ” ಎಂದರು.

“ನಮ್ಮ ಮುಂದೆ 56 ಕೇಸ್‌ಗಳು ಬಂದಿದ್ದವು. 43 ಕೇಸ್‌ಗಳನ್ನು ವಿತ್‌ಡ್ರಾ ಮಾಡಿದ್ದೇವೆ. ಇದರಲ್ಲಿ ಬರೀ ಅಲ್ಪಸಂಖ್ಯಾತರಿಗೆ ಸೇರಿದ ಪ್ರಕರಣಗಳಿವೆಯೇ? ರೈತರು, ವಿದ್ಯಾರ್ಥಿಗಳು, ಸಾಮಾನ್ಯ ಜನರು ಬೇರೆ ಬೇರೆ ಸಂದರ್ಭಗಳಲ್ಲಿ ಪ್ರತಿಭಟನೆ ಮಾಡಿರುವ ಪ್ರಕರಣಗಳಿವೆ. ಅವೆಲ್ಲ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಹುಬ್ಬಳ್ಳಿ ಪ್ರಕರಣವನ್ನು ಮಾತ್ರ ಹಿಂಪಡೆದಿದ್ದರೆ ಅಥವಾ 43 ಪ್ರಕರಣಗಳು ಅಲ್ಪಸಂಖ್ಯಾತರಿಗೆ ಸೇರಿರುವ ಪ್ರಕರಣಗಳಾಗಿದ್ದರೆ ಬಿಜೆಪಿಯವರ ಆರೋಪವನ್ನು ಒಪ್ಪಿಕೊಳ್ಳಬಹುದಿತ್ತು. ಆ ರೀತಿ ಮಾಡಲು ಬರುವುದಿಲ್ಲ. ಎಲ್ಲವನ್ನು ಸಮಾನ ದೃಷ್ಟಿಯಿಂದ ನೋಡಬೇಕಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವುದೇ ಪ್ರಕರಣಗಳನ್ನು ವಾಪಸ್ ತೆಗೆದುಕೊಳ್ಳಲು ಪ್ರಕ್ರಿಯೆ ಇದೆ. ಸುಳ್ಳು ಕೇಸ್ ದಾಖಲಿಸಿದ್ದಾರೆ, ಪೂರಕವಾದ ಸೆಕ್ಷನ್‌ಗಳನ್ನು ಹಾಕಿಲ್ಲ, ನಡೆದಿರುವ ಘಟನೆಯೇ ಬೇರೆ ಕೇಸ್ ದಾಖಲಿಸಿರುವುದೇ ಬೇರೆ ಎಂದು ಆರೋಪಿಸಿ ಮನವಿ ಕೊಟ್ಟಿರುತ್ತಾರೆ. ಇದನ್ನು ಪರಿಶೀಲಿಸಲು ಸಚಿವ ಸಂಪುಟ ಉಪ ಸಮಿತಿ ರಚಿಸಿರುತ್ತಾರೆ. ಸಾಮಾನ್ಯವಾಗಿ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಮಾಡಿರುತ್ತಾರೆ. ನಮಗೆ ಬರುವ ಮನವಿಗಳನ್ನು ಇಲಾಖೆಗೆ ಕಳುಹಿಸುತ್ತೇವೆ‌. ಅವರು ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಸಾಕ್ಷ್ಯ ಸಂಗ್ರಹಣೆಯಲ್ಲಿ ಆದ‌ ಲೋಪದೋಷಗಳನ್ನು ಪರಿಶೀಲಿಸಿ ಸಚಿವ ಸಂಪುಟ ಉಪಸಮಿತಿ ಮುಂದೆ ತರುತ್ತಾರೆ‌” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಚ್‌ಡಿಕೆ V/s ಎಡಿಜಿಪಿ ಚಂದ್ರಶೇಖರ್‌- ಇದು ಸಾಮಾನ್ಯ ವಿದ್ಯಮಾನವಲ್ಲ

“ಕ್ಯಾಬಿನೆಟ್ ಉಪಸಮಿತಿಯಲ್ಲಿ ಕೇಸ್‌ಗಳ ಬಗ್ಗೆ ಚರ್ಚಿಸಲಾಗುತ್ತಿದೆ. ಹುಬ್ಬಳ್ಳಿ ಕೇಸ್‌ನಲ್ಲಿಯೂ ಮನವಿ ಕೊಟ್ಟಿದ್ದರು. ಅಷ್ಟೊಂದು ಜನರ ಮೇಲೆ ಕೇಸ್ ದಾಖಲಿಸುವ ಅಗತ್ಯ ಇಲ್ಲ‌ ಎಂಬುದು ಚರ್ಚೆಯಾಗಿದೆ. ಕ್ಯಾಬಿನೆಟ್‌ನಲ್ಲಿ ವಾಪಸ್ ಪಡೆಯುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದನ್ನು ಕೋರ್ಟ್‌ಗೆ ತಿಳಿಸಬೇಕು. ಕೋರ್ಟ್ ಒಪ್ಪಿದರೆ ಕೇಸ್ ವಾಪಸ್ ತೆಗೆದುಕೊಳ್ಳಲು ಸಾಧ್ಯ, ಇಲ್ಲವಾದರೆ ಇಲ್ಲ. ಈ ಎಲ್ಲ ಹಂತದಲ್ಲೂ ಬಹಳ ಎಚ್ಚರಿಕೆಯಿಂದ ಕೆಲಸ ಮಾಡಬೇಕಾಗುತ್ತದೆ. ಯಾರೋ ಸಮೋಟೋ ಹೇಳಿದ್ರು ಅಂತ ವಾಪಸ್ ಪಡೆಯಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಬಿಜೆಪಿಯವರು ಆಡಳಿತದಲ್ಲಿದ್ದಾಗಲೂ ಸಹ ಇಂತಹ ಪ್ರಕರಣಗಳಲ್ಲಿ ಬೇಕಾದಷ್ಟು ಮಾಡಿದ್ದಾರೆ. ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿಯೂ ಮಾಡಿದ್ದಾರೆ‌.‌ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿನಾಥ್ ಅವರ ವಿರುದ್ಧ ಕೇಸ್‌ಗಳಿದ್ದವು. ಮುಖ್ಯಮಂತ್ರಿ ಸ್ಥಾನದಲ್ಲಿದ್ದುಕೊಂಡೇ ಕೇಸ್‌ಗಳನ್ನು ವಾಪಸ್ ಪಡೆದಿದ್ದಾರೆ. ಬಿಜೆಪಿಯವರು ಯಾರ ಮೇಲೆ ಆಪಾದನೆ ಮಾಡುತ್ತಿದ್ದಾರೆ” ಎಂದು ಪ್ರಶ್ನಿಸಿದರು.

“ನಮಗೆ ಬರುವ ಮನವಿಗಳನ್ನು ಕಣ್ಮುಚ್ಚಿಕೊಂಡು ವಿತ್‌ಡ್ರಾ ಅಂತ ಫೈಲ್‌ ಮೇಲೆ ಬರೆದುಕೊಡಲಾಗುವುದಿಲ್ಲ. ನಾನೊಬ್ಬನೇ ಆಗಲಿ ಅಥವಾ ಮುಖ್ಯಮಂತ್ರಿಯವರಾಗಲಿ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಬಿಜೆಪಿಯವರು ಎಲ್ಲದರಲ್ಲೂ ರಾಜಕೀಯ ಮಾಡಲು ಹೊರಟಿದ್ದು, ಇದು ಸರಿಯಲ್ಲ. ವಿಪಕ್ಷದವರು ಆಡಳಿತದ ವಿಚಾರವಾಗಿ ಸಕರಾತ್ಮಕವಾಗಿ ವಿರೋಧಿಸಿದರೆ ಒಪ್ಪಿಕೊಳ್ಳುತ್ತೇವೆ. ನಾವು ವಿಪಕ್ಷದಲ್ಲಿದ್ದಾಗ ಸಹ ಅನೇಕ ಸಲಹೆಗಳನ್ನು ಕೊಟ್ಟಿದ್ದೇವೆ. ಅವರು ನಮಗೆ ಸಲಹೆಗಳನ್ನು ನೀಡಲಿ‌” ಎಂದರು.

ರಾಹುಲ್ ಖರ್ಗೆ ಅವರು ಸಿದ್ಧಾರ್ಥ ಟ್ರಸ್ಟ್‌‌ ನಿವೇಶನವನ್ನು ವಾಪಸ್ ನೀಡಿರುವ ಕುರಿತ ಪ್ರತಿಕ್ರಿಯಿಸಿ, “ಯಾವುದೇ ಕಾನೂನು ಉಲ್ಲಂಘನೆ ಮಾಡದೆ ನಿವೇಶನ‌ ತೆಗೆದುಕೊಂಡಿದ್ದೇವೆ. ಆಪಾದನೆ ಮಾಡುತ್ತಿರುವುದರಿಂದ ಬೇಡ ಎಂದು ನಿವೇಶ ವಾಪಸ್ ನೀಡಿದ್ದಾರೆ. ಕಾಮಾಲೆ ಕಣ್ಣಿಗೆ ಕಾಣಿಸುವುದೆಲ್ಲ ಹಳದಿ ಎಂಬಂತೆ, ಬಿಜೆಪಿಯವರು ಕಾಮಾಲೆ ಕಣ್ಣಿನಿಂದ ಎಲ್ಲವನ್ನು ನೋಡುತ್ತಿದ್ದಾರೆ” ಎಂದು ತಿರುಗೇಟು ನೀಡಿದರು‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...