45 ದಿನಗಳ ನಂತರ ಈಗೇಕೆ ನೋಟಿಸ್? ಕೇಂದ್ರದ ನಡೆಗೆ ಕಾಂಗ್ರೆಸ್ ಆಕ್ರೋಶ

Date:

  • ಶ್ರೀನಗರದಲ್ಲಿ ಜನವರಿ 30ರಂದು ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಮಾತು
  • ಮಾರ್ಚ್ 16ರಂದು ರಾಹುಲ್ ಅವರ ದೆಹಲಿ ನಿವಾಸಕ್ಕೆ ನೋಟಿಸ್ ನೀಡಿದ್ದ ದೆಹಲಿ ಪೊಲೀಸರು

ಭಾರತ್ ಜೋಡೋ ಯಾತ್ರೆ ವೇಳೆ ಜಮ್ಮು-ಕಾಶ್ಮೀರದ ಶ್ರೀನಗರದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರ ಬಗ್ಗೆ ನೀಡಿರುವ ಹೇಳಿಕೆಯ ಬಗ್ಗೆ ರಾಹುಲ್ ಗಾಂಧಿಯವರನ್ನು ವಿಚಾರಣೆ ನಡೆಸುತ್ತಿರುವ ದೆಹಲಿ ಪೊಲೀಸರ ನಡೆಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಕಾಂಗ್ರೆಸ್ ಮಾಧ್ಯಮ ಘಟಕದ ಮುಖ್ಯಸ್ಥರಾದ ಜೈರಾಂ ರಮೇಶ್, “ಭಾರತ್ ಜೋಡೋ ಯಾತ್ರೆ ಮುಗಿದು 45 ದಿನಗಳಾಗಿವೆ. ದೆಹಲಿ ಪೊಲೀಸರು 45 ದಿನಗಳ ನಂತರ ಪ್ರಶ್ನಿಸುತ್ತಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಅಷ್ಟೋಂದು ಕಾಳಜಿಯಿದ್ದರೆ ಘಟನೆ ನಡೆದು ಕೆಲ ದಿನಗಳಲ್ಲೇ ವಿಚಾರಿಸಬಹುದಿತ್ತಲ್ಲವೆ? ಇದಕ್ಕೆ ರಾಹುಲ್ ಗಾಂಧಿಯವರ ಕಾನೂನು ಘಟಕ ಕಾನೂನಿನ್ವಯ ಉತ್ತರ ನೀಡಲಿದೆ” ಎಂದು ತಿಳಿಸಿದರು.

“ಇದು ಅಮೃತಕಾಲವಲ್ಲ ಆಪತ್ಕಾಲ. ಮೋದಿಯವರ ಸರ್ವಾಧಿಕಾರ ಆಡಳಿತ. ಸಂಸತ್ತನ್ನು ನಡೆಸುವುದು ಸರ್ಕಾರದ ಜವಾಬ್ದಾರಿ. ಇದಕ್ಕೆ ನಾವು ಬೆಂಬಲ ನೀಡುತ್ತೇವೆ. ಆದರೆ ನಮಗೆ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ. ಸದನ ನಡೆಯಲು ಬಿಡದಿರುವುದು ಸರ್ಕಾರದ ಮುಖ್ಯ ಉದ್ದೇಶ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳನ್ನು ಪರಿಗಣಿಸಿರುವ ದೆಹಲಿ ಪೊಲೀಸರು, ಈ ಸಂಬಂಧ ಪ್ರಶ್ನಾವಳಿಯನ್ನು ಸಿದ್ಧಪಡಿಸಿ ರಾಹುಲ್ ಗಾಂಧಿ ಅವರಿಗೆ ಮಾರ್ಚ್ 16ರಂದು ನೋಟಿಸ್ ನೀಡಿದ್ದರು. ಇಂದು ವಿಶೇಷ ಆಯುಕ್ತರ ನೇತೃತ್ವದಲ್ಲಿ ವಿಚಾರಣೆಗಾಗಿ ದೆಹಲಿಯಲ್ಲಿರುವ ರಾಹುಲ್ ನಿವಾಸಕ್ಕೆ ಆಗಮಿಸಿದ್ದರು.

“ಒಂದು ನಿರ್ದಿಷ್ಟ ಪ್ರಕರಣದ ಬಗ್ಗೆ ಬಾಲಕಿಯೊಬ್ಬಳು ನನಗೆ ವಿವರ ನೀಡಿದ್ದಳು. ಆಕೆ ಮೇಲೆ ಅತ್ಯಾಚಾರ ನಡೆದಿತ್ತು. ‘ಪೊಲೀಸರನ್ನು ಕರೆಯೋಣವೇ’ ಎಂದು ನಾನು ಆಕೆಯನ್ನು ಕೇಳಿದೆ. ‘ಪೊಲೀಸರನ್ನು ಕರೆಯಬೇಡಿ, ನನ್ನ ಮರ್ಯಾದೆ ಹೋಗುತ್ತದೆ’ ಎಂದು ಆಕೆ ಹೇಳಿದ್ದಳು” ಎಂಬುದಾಗಿ ರಾಹುಲ್ ಗಾಂಧಿ ಹೇಳಿದ್ದರು.

“ಶ್ರೀನಗರದಲ್ಲಿ ಜನವರಿ 30ರಂದು ಭಾರತ್ ಜೋಡೋ ಯಾತ್ರೆ ವೇಳೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಹಲವು ಮಹಿಳೆಯರನ್ನು ರಾಹುಲ್ ಗಾಂಧಿ ಭೇಟಿ ಮಾಡಿದ್ದರು. ನಾವು ಈ ಕುರಿತು ರಾಹುಲ್ ಗಾಂಧಿ ಅವರ ಬಳಿ ಹೇಳಿಕೆ ಪಡೆಯಲು ಬಂದಿದ್ದೇವೆ. ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಲು ನಾವು ಅವರಿಂದ ವಿವರಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ” ಎಂದು ದೆಹಲಿಯ ವಿಶೇಷ ಆಯುಕ್ತ ಸಾಗರ್ ಪ್ರೀತ್ ಹೂಡ ತಿಳಿಸಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...