ಬೆಂಗಳೂರಿನಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು 5000 ಕೋಟಿ ರೂ. ಗಳ ಶಾಶ್ವತ ಯೋಜನೆ: ಸಚಿವ ಕೃಷ್ಣ ಬೈರೇಗೌಡ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳಲ್ಲಿ ಅತಿಹೆಚ್ಚು ಮಳೆಯಿಂದ ಪ್ರವಾಹ ರೀತಿಯಲ್ಲಿ ಉಂಟಾಗುವ ಅತಿವೃಷ್ಟಿಯ ಹಾನಿಯನ್ನು ತಡೆಗಟ್ಟಲು ಒಟ್ಟು 5000 ಕೋಟಿ ರೂ. ಗಳ ಶಾಶ್ವತ ಯೋಜನೆಯನ್ನು ರೂಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಹೇಳಿದರು.

ಪ್ರಸಕ್ತ ವರ್ಷ ರಾಜ್ಯದಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತಂತೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ಸರ್ಕಾರದ ಪರವಾಗಿ ಹೇಳಿಕೆ ನೀಡಿದರು.

ಬೆಂಗಳೂರು ವ್ಯಾಪ್ತಿಯಲ್ಲಿ ಅತಿಹೆಚ್ಚು ಮಳೆ ಸುರಿದಾಗ ಪದೇ ಪದೇ ಹಾನಿಗೊಳಗಾಗುವ ಪ್ರದೇಶಗಳನ್ನು ಗುರುತಿಸಲಾಗಿದೆ. ಮಳೆ ಸುರಿದಂತಹ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯುವಂತೆ ರಾಜಕಾಲುವೆ ಹಾಗೂ ವಸತಿ ಪ್ರದೇಶದಲ್ಲಿನ ಕಾಲುವೆಗಳನ್ನು ಪರಿಪಕ್ವವಾಗಿ ಸುಧಾರಿಸಲು ಕ್ರಮ ವಹಿಸಲಾಗಿದೆ. ಈ ವ್ಯಾಪ್ತಿಯಲ್ಲಿ 856 ಕಿ.ಮೀ. ರಾಜಕಾಲುವೆಗಳಿದ್ದು, ರಾಜಕಾಲುವೆ ಇಲ್ಲದ ಕಡೆ 200 ಕಿ.ಮೀ. ಕಿರು ಕಾಲುವೆಗಳು ಸೇರಿದಂತೆ ಒಟ್ಟು 1100 ಕಿ.ಮೀ. ಕಾಲುವೆಗಳಲ್ಲಿ ಹೆಚ್ಚಿನ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಲು ಶಾಶ್ವತ ಯೋಜನೆಯನ್ನು ರೂಪಿಸಲಾಗಿದೆ. ಈಗಾಗಲೆ 700 ಕಿ.ಮೀ. ಅಭಿವೃದ್ಧಿಪಡಿಸಲಾಗಿದ್ದು ಇನ್ನೂ 300 ಕಿ.ಮೀ. ರಾಜಕಾಲುವೆಯನ್ನು ಬರುವ ಒಂದು ವರ್ಷದ ಅವಧಿಯಲ್ಲಿ ಅಭಿವೃದ್ಧಿಪಡಿಸಲಾಗುವುದು, ಇದಕ್ಕಾಗಿ ಡಿಸಾಸ್ಟರ್ ಮಿಟಿಗೇಶನ್ ಯೋಜನೆಯಡಿ 240 ಕೋಟಿ ರೂ. ಒದಗಿಸಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಕಾಲುವೆಗಳ ಅಭಿವೃದ್ದಿಗೆ 03 ಸಾವಿರ ಕೋಟಿ

ಬೆಂಗಳೂರಿನಲ್ಲಿ ಮಳೆ ಬಂದಾಗ ಪ್ರವಾಹ ತಡೆಗಟ್ಟುವ ನಿಟ್ಟಿನಲ್ಲಿ 5 ಸಾವಿರ ಕೋಟಿ ರೂ.ವೆಚ್ಚದಲ್ಲಿ ಶಾಶ್ವತ ಪರಿಹಾರ ಕ್ರಮಗಳನ್ನು ಸರಕಾರ ಕೈಗೊಳ್ಳುತ್ತಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉತ್ತರ ಕರ್ನಾಟಕ ಜನತೆಯ ಆಶೋತ್ತರಗಳು ಈ ಬಾರಿಯಾದರೂ ಈಡೇರಲಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು ಒಂದು ಬಾರಿಯ ಶಾಶ್ವತ ಕಾಮಗಾರಿ ಕೈಗೊಳ್ಳಲು ವಿಶ್ವಬ್ಯಾಂಕ್ ನೆರವು ಪಡೆಯುವ ನಿಟ್ಟಿನಲ್ಲಿ ಈಗಾಗಲೆ 10 ಸುತ್ತಿನ ಸಭೆಗಳನ್ನು ನಡೆಸಲಾಗಿದೆ. ವಿಶ್ವಬ್ಯಾಂಕ್‌ನಿಂದ 3000 ಕೋಟಿ ರೂ. ಸಾಲ ಪಡೆದು, ಬಿಬಿಎಂಪಿ ಮೂಲಕ 2000 ಕೋಟಿ ರೂ. ವೆಚ್ಚದಲ್ಲಿ ಎಲ್ಲ ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ.

ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳಲ್ಲಿ ಒಳಚರಂಡಿ ವ್ಯವಸ್ಥೆ ಇರದ ಕಡೆ ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ರೂಪಿಸಿ ಸದರಿ ಒಳಚರಂಡಿ ನೀರು ನೇರವಾಗಿ ಸೀವೆಜ್ ಟ್ರೀಟ್‌ಮೆಂಟ್ ವಾಟರ್ ಲೈನ್‌ಗೆ ಸೇರ್ಪಡೆಯಾಗುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದ್ದು, ಈ ಕಾರ್ಯಕ್ಕೆ ಬೆಂಗಳೂರು ಜಲಮಂಡಳಿಗೆ 01 ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗುತ್ತಿದೆ. ಇನ್ನಿತರೆ ಕಾಮಗಾರಿಗಳಿಗಾಗಿ 02 ಸಾವಿರ ಕೋಟಿ ರೂ. ಗಳನ್ನು ವೆಚ್ಚ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಇನ್ನುಳಿದ 2000 ಕೋಟಿ ರೂ. ಗಳನ್ನು ರಾಜ್ಯ ಸರ್ಕಾರ ಭರಿಸಲು ನಿರ್ಧರಿಸಲಾಗಿದೆ. ಬೆಂಗಳೂರಿನಲ್ಲಿ ಮಳೆಯಿಂದ ಪದೇ ಪದೇ ಹಾನಿಗೀಡಾಗುವ ಪ್ರಮುಖ ರಸ್ತೆಗಳನ್ನು ಗುರುತಿಸಲಾಗಿದ್ದು, ಇಂತಹ ರಸ್ತೆಗಳನ್ನು ದುರಸ್ತಿಪಡಿಸಿ, ಡಾಂಬರೀಕರಣಗೊಳಿಸಲು 695 ಕೋಟಿ ರೂ. ಗಳ ಯೋಜನೆ ರೂಪಿಸಿ, ಸಚಿವ ಸಂಪುಟದ ಅನುಮೋದನೆ ಪಡೆದು ಈಗಾಗಲೆ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಒಟ್ಟಾರೆ ಬೆಂಗಳೂರಿನಲ್ಲಿ ಅತಿಯಾದ ಮಳೆಯಾದಾಗ ಹಾನಿಯಾಗುವುದನ್ನು ತಡೆಗಟ್ಟಲು ಸರ್ಕಾರ ಶಾಶ್ವತವಾದ ಯೋಜನೆಗಳನ್ನು ರೂಪಿಸಿದ್ದು, ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...