ಕಾಂಗ್ರೆಸ್‌ ಶಾಸಕರಿಗೆ ₹50 ಕೋಟಿ ಆಮಿಷ | ರಾಜ್ಯದ ಜನತೆಗೆ ಸಿಎಂ ಸತ್ಯ ತಿಳಿಸಲಿ: ವಿಜಯೇಂದ್ರ ಆಗ್ರಹ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಬಹುಶಃ ನಿಮ್ಮ ಶಾಸಕರ ಮೇಲೆ ನೀವು ವಿಶ್ವಾಸವನ್ನು ಕಳೆದುಕೊಂಡಂತೆ ಕಾಣುತ್ತಿದೆ. ಅದಕ್ಕಾಗಿಯೇ ₹50 ಕೋಟಿಗೆ ಅವರು ಮಾರಾಟವಾಗುತ್ತಿದ್ದಾರೆ ಎಂಬ ಕಪೋಲಕಲ್ಪಿತ ಆರೋಪ ಮಾಡುತ್ತಿದ್ದೀರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, “ಇದು ನೀವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾಗೂ ಶಾಸಕರನ್ನು ಮಾರಾಟದ ವಸ್ತುಗಳಂತೆ ವ್ಯಾಖ್ಯಾನಿಸಿ ಅವರಿಗೆ ಮಾಡುತ್ತಿರುವ ಅವಮಾನವಾಗಿದೆ. ನಿಮ್ಮ ಈ ಹೇಳಿಕೆ ಕಾಂಗ್ರೆಸ್‌ ಶಾಸಕರುಗಳನ್ನು ಅಂಕೆಯಲಿಟ್ಟುಕೊಳ್ಳಲು ಹಾಗೂ ನಿಮ್ಮನ್ನು ಸುತ್ತುವರೆದಿರುವ ಭ್ರಷ್ಟಾಚಾರದ ಹಗರಣಗಳನ್ನು ಮುಚ್ಚಿಕೊಳ್ಳಲು ಹೆಣೆದಿರುವ ಹತಾಶೆಯ ಸುಳ್ಳಿನ ಕಂತೆ ಎನ್ನುವುದು ಕನಿಷ್ಠ ರಾಜಕೀಯ ಜ್ಞಾನ ಇರುವವರಿಗೂ ಅರಿವಾಗುತ್ತದೆ” ಎಂದಿದ್ದಾರೆ.

“ಸುಳ್ಳು, ಭಂಡತನ, ಕಪೋಲ ಕಲ್ಪಿತ ಸುದ್ದಿಗಳನ್ನು ಹರಿಬಿಡುವುದು ನಿಮ್ಮ ಹಾಗೂ ನಿಮ್ಮ ಪಕ್ಷದ ನಿತ್ಯ ಮಂತ್ರವಾಗಿದೆ. ನೀವು ನಡೆಸಿರುವ ಸರಣೀ ಹಗರಣಗಳ ಹಿನ್ನೆಲೆಯ ಉರುಳು ಬಿಗಿಯಾಗುತ್ತಿರುವಷ್ಟೂ ನಿದ್ದೆಗೆಡುತ್ತಿರುವ ನಿಮ್ಮ ಮನಸ್ಸು ಅಸ್ಥಿರಗೊಂಡಿದೆ ಈ ಹಿನ್ನಲೆಯಲ್ಲಿ ಪ್ರಚಲಿತ ಬೆಳವಣಿಗೆಯನ್ನು ವಿಚಲಿತಗೊಳಿಸುವುದು ಹೇಗೆ ಎಂಬುದರತ್ತಲೇ ನೀವು ನಿಗಾ ಇಟ್ಟಿರುವಂತೆ ಕಾಣುತ್ತಿದೆ” ಎಂದು ಕುಟುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಖ್ಯಮಂತ್ರಿಯಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ನೀವು ಅದರ ಘನತೆಯನ್ನು ಕುಗ್ಗಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದೀರಿ, ನಿಮ್ಮದೇ ಸರ್ಕಾರವಿದೆ, ನಿಮ್ಮದೇ ತನಿಖಾ ಸಂಸ್ಥೆಗಳಿವೆ, ₹50 ಕೋಟಿ ಆಮಿಷದ ಮೂಲ ಯಾವುದು ಎನ್ನುವುದನ್ನು ಜನರ ಮುಂದೆ ಬಹಿರಂಗಪಡಿಸುವುದು ನಿಮ್ಮ ನೈತಿಕ ಜವಾಬ್ದಾರಿಯಾಗಿರುತ್ತದೆ. ಇಲ್ಲದಿದ್ದರೆ ನಿಮ್ಮ ಹೇಳಿಕೆ ಪುಡಾರಿಗಳು ನೀಡುವ ಬಾಲಿಶ ರಾಜಕೀಯ ಹೇಳಿಕೆಯಾಗುತ್ತದೆಯಷ್ಟೆ” ಎಂದು ಟೀಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ನ 50 ಶಾಸಕರಿಗೆ ಬಿಜೆಪಿಯಿಂದ ತಲಾ 50 ಕೋಟಿ ರೂ. ಆಫರ್

“ಒಂದು ಕಡೆ ನಿಮ್ಮ ಪುತ್ರ ನ್ಯಾಯಾಂಗ ವ್ಯವಸ್ಥೆಯನ್ನೇ ಅಪಮಾನಿಸುವ ಆರೋಪ ಮಾಡಿದರೆ, ಮತ್ತೊಂದೆಡೆ ನೀವು ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಹತಾಶೆಯಿಂದ ವರ್ತಿಸುತ್ತಿದ್ದೀರಿ. ನಿಮ್ಮನ್ನು ಅಧಿಕಾರದಿಂದ ಕೆಳಗಿಳಿಸಿದರೆ ಜನ ಸುಮ್ಮನೆ ಬಿಡುವುದಿಲ್ಲ ಎಂದು ಅಬ್ಬರಿಸುತ್ತಿದ್ದೀರಿ ಆದರೆ ವಾಸ್ತವ ಸಂಗತಿ ಏನೆಂದರೆ, ಕರ್ನಾಟಕದ ಜನತೆ ನಿಮ್ಮಂಥ ಭ್ರಷ್ಟ ಮುಖ್ಯಮಂತ್ರಿ ಇನ್ನೂ ಅಧಿಕಾರದಿಂದ ಕೆಳಗಿಳಿಯದೇ ಭಂಡತನ ಪ್ರದರ್ಶಿಸುತ್ತಿದ್ದಾರಲ್ಲ ಎಂದು ರಸ್ತೆಯಲ್ಲಿ ನಿಂತು ಮಾತನಾಡಿಕೊಳ್ಳುತ್ತಿದ್ದಾರೆ,
ನಿಮ್ಮ ಗುಪ್ತಚರ ಇಲಾಖೆ ಈ ವಿಷಯವನ್ನು ನಿಮಗೆ ಮುಟ್ಟಿಸಿರಲೇಬೇಕು. ಆದ್ದರಿಂದಲೇ ನೀವು ಇಷ್ಟೊಂದು ವಿಚಲಿತರಾದಂತೆ ಕಪೋಲ ಕಲ್ಪಿತ ಕಥೆಗಳನ್ನು ಸೃಷ್ಟಿಸಿಕೊಂಡು ಬಡ ಬಡಿಸುತ್ತಿದ್ದೀರಿ” ಎಂದು ವ್ಯಂಗ್ಯವಾಡಿದ್ದಾರೆ.

“ನೀವು ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತು 50 ಕೋಟಿ ಆಮಿಷದ ಗಂಭೀರ ಆರೋಪ ಮಾಡಿರುವ ಹಿನ್ನಲೆಯಲ್ಲಿ ಸರ್ಕಾರ ಬೀಳಿಸಲು ಸಾವಿರಾರು ಕೋಟಿ ಬಂಡವಾಳ ಹೂಡಲು ತಯಾರಾಗಿರುವವರು ಯಾರು? ಎಂಬುದು ಬಹಿರಂಗವಾಗಬೇಕಿದೆ ಈ ನಿಟ್ಟಿನಲ್ಲಿ ಇ.ಡಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕೂಡಲೇ ತನಿಖೆ ನಡೆಸುವುದು ತುರ್ತು ಅಗತ್ಯವಿದೆ. ರಾಜ್ಯದ ಜನತೆಗೆ ಸತ್ಯ ತಿಳಿಯಬೇಕಿದೆ” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...