ವಕ್ಫ್ ಬೋರ್ಡ್‌ ಜೊತೆ ಭೂ ವಿವಾದ ಹೊಂದಿದ್ದ 50 ಮಂದಿ ಬಿಜೆಪಿಗೆ ಸೇರ್ಪಡೆ

Date:

ಸಂಸತ್ತಿನ ಉಭಯ ಸದನಗಳಲ್ಲಿ ‘ವಕ್ಫ್ ತಿದ್ದುಪಡಿ ಮಸೂದೆ-2024’ ಅಂಗೀಕಾರಗೊಂಡ ಕೆಲವೇ ಗಂಟೆಗಳಲ್ಲಿ ಕೇರಳದಲ್ಲಿ ಸುಮಾರು 50 ಮಂದಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇವರೆಲ್ಲರೂ ವಕ್ಫ್‌ ಬೋರ್ಡ್‌ ಜೊತೆಗಿನ ಭೂ ವಿವಾದದಲ್ಲಿ ಸಿಲುಕಿಕೊಂಡಿರುವವರು ಎಂದು ವರದಿಯಾಗಿದೆ.

ಕೇರಳದ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರ ಸಮ್ಮುಖದಲ್ಲಿ ಹಲವರು ಬಿಜೆಪಿ ಸೇರಿದ್ದಾರೆ. ‘ಈ ಎಲ್ಲರೂ ತಮ್ಮದು ಎಂದು ವಾದಿಸುತ್ತಿರುವ ಭೂಮಿಯನ್ನು ವಕ್ಫ್‌ ಬೋರ್ಡ್‌ನಿಂದ ಪಡೆದುಕೊಳ್ಳಲು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ನೆರವು ನೀಡಲಿದೆ’ ಎಂದು ಬಿಜೆಪಿ ನಾಯಕರು ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮುಖ್ಯವಾಗಿ ಕೇರಳದ ಕೊಚ್ಚಿಯಲ್ಲಿರುವ ಮುನಂಬಮ್‌ ಪ್ರದೇಶದ ಹಲವಾರು ನಿವಾಸಿಗಳು ಬಿಜೆಪಿ ಸೇರಿದ್ದಾರೆ. ಅವರೆಲ್ಲರೂ ವಕ್ಫ್‌ ಮಂಡಳಿಯ ಸುಪರ್ದಿಯಲ್ಲಿರುವ ಭೂಮಿಯ ಮೇಲೆ ತಮ್ಮ ಆಸ್ತಿ ಹಕ್ಕು ಪಡೆಯಲು ಕಳೆದ ಆರು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಪ್ರತಿಭಟನೆಗೆ ಕ್ಯಾಥೋಲಿಕ್ ಚರ್ಚ್‌ ಬೆಂಬಲವಾಗಿ ನಿಂತಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ, ವಕ್ಫ್‌ ತಿದ್ದುಪಡಿ ಮಸೂದೆ ಅಂಗೀಕಾರವಾಗಿರುವುದರಿಂದ, ತಿದ್ದುಪಡಿ ಕಾಯ್ದೆ ಜಾರಿಗೆ ಬಂದರೆ, ವಕ್ಫ್‌ ಮಂಡಳಿ ಹಕ್ಕು ಹೊಂದಿರುವ ತಮ್ಮ ಭೂಮಿಯ ವಿವಾದ ಇತ್ಯರ್ಥವಾಗುತ್ತದೆ. ತಮ್ಮ ಭೂಮಿ ತಮಗೆ ಮರಳಿ ದೊರೆಯುತ್ತಿದೆ ಎಂದು ನಂಬಿದ್ದಾರೆ.

“ವಕ್ಫ್‌ ಮಂಡಳಿ ಜೊತೆಗೆ ಭೂ ವಿವಾದ ಹೊಂದಿರುವವರ ಅಳಲು ಆಲಿಸುವಲ್ಲಿ ಕೇರಳದ ಚುನಾಯಿತ ಸರ್ಕಾರ ನಿರ್ಲಕ್ಷ್ಯ ಧೋರಣೆ ಹೊಂದಿದೆ. ಈ ಸಂತ್ರಸ್ತರ ಸಮಸ್ಯೆ ಪರಿಹರಿಸಿ, ಉತ್ತಮ ಭವಿಷ್ಯ ಒದಗಿಸಲು ಕೆಲವ ಮಾಡುವ ಅವಕಾಶ ನಮಗೆ ದೊರೆತಿದೆ” ಎಂದು ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. ಹೇಳಿದ್ದಾರೆ. ಉತ್ತಮ ಭವಿಷ್ಯಕ್ಕಾಗಿ ಕೆಲಸ ಮಾಡುವ ಅವಕಾಶ ನಮಗೆ ಸಿಕ್ಕಿದೆ. ನಾವು ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆ ಎಂದೂ ಅವರು ಭರವಸೆ ನೀಡಿದ್ದಾರೆ.

“ವಕ್ಫ್ ಮಸೂದೆ ಅಂಗೀಕಾರ ಆಗಿರುವುದರಿಂದ ಮುನಂಬಮ್ ಜನರ ಸಮಸ್ಯೆಗೆ ಪರಿಹಾರ ದೊರೆಯುವುದೇ. ಅವರ ಸಮಸ್ಯೆಯನ್ನು ಬಗೆಹರಿಸಿ, ಪರಿಹಾರ ಒದಗಿಸುತ್ತೇವೆಂದು ಬಿಜೆಪಿ ಯಾವೊಬ್ಬ ನಾಯಕರೂ ಹೇಳಿಲ್ಲ” ಎಂದು ವಿಪಕ್ಷ ನಾಯಕ ವಿ.ಡಿ. ಸತೀಶನ್ ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...