ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ವಾರ್ಷಿಕ 50 ರಿಂದ 60 ಸಾವಿರ ಉಳಿತಾಯ: ಡಿ.ಕೆ.ಶಿವಕುಮಾರ್

Date:

“ಗ್ಯಾರಂಟಿ ಯೋಜನೆಗಳಿಂದ ಒಂದು ಬಡ ಕುಟುಂಬಕ್ಕೆ ವಾರ್ಷಿಕ 50-60 ಸಾವಿರ ಉಳಿತಾಯವಾಗುತ್ತಿದೆ. ಐದು ಗ್ಯಾರಂಟಿ ಯೋಜನೆಗಳ ಹೊರತಾಗಿ ವಿವಿಧ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹1.20 ಸಾವಿರ ಕೋಟಿ ಹಣವನ್ನು ಬಜೆಟ್‌ನಲ್ಲಿ ಮೀಸಲಿಟ್ಟಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು‌.

ಹಾಸನದಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು,” ₹1.56 ಕೋಟಿ ಕುಟುಂಬಗಳಿಗೆ ಉಚಿತವಾಗಿ ವಿದ್ಯುತ್‌ ನೀಡುವುದರ ಜೊತೆಗೆ ₹1.50 ವಿದ್ಯುತ್ ದರ ಇಳಿಸಿದ್ದೇವೆ. ಇದಕ್ಕೆ ವಿರೋಧ ಪಕ್ಷಗಳು ಏನು ಹೇಳುತ್ತವೆ. ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಕುಮಾರಸ್ವಾಮಿ, ಆರ್‌. ಅಶೋಕ್‌ ಅವರು ಇದಕ್ಕೆ ಉತ್ತರಿಸಲಿ” ಎಂದು ಸವಾಲೆಸೆದರು.

“ವಸ್ತುಗಳ ಬೆಲೆ ಏರಿಕೆಯಾಗಿತ್ತು. ಬಿಜೆಪಿಯವರು ವಿದ್ಯುತ್‌ ಬೆಲೆ ಏರಿಕೆ ಮಾಡಿದ್ದರು. ನಾವು ಉಚಿತವಾಗಿ ವಿದ್ಯುತ್‌ ನೀಡುವುದರ ಜೊತೆಗೆ ಬೆಲೆ ಇಳಿಕೆ ಮಾಡಿದ್ದೇವೆ. ಗೃಹಲಕ್ಷ್ಮೀ ಯೋಜನೆಯಿಂದ ಅತ್ತೆ-ಸೊಸೆ ಜಗಳವಾಡುತ್ತಾರೆ ಎಂದು ಗುಲ್ಲೆಬ್ಬಿಸಿದರು. ಯಾವುದಾದರೂ ಮನೆಯಲ್ಲಿ ಜಗಳ ಉಂಟಾಗಿದೆಯೇ?” ಎಂದು ಕೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರು ಶಕ್ತಿ ಯೋಜನೆಯಿಂದ ದೇವಸ್ಥಾನಕ್ಕೆ ಜನ ಹೆಚ್ಚು ಬರುತ್ತಿದ್ದಾರೆ. ಹುಂಡಿ ತುಂಬಿ ತುಳುಕುತ್ತಿದೆ. ಸಿದ್ದರಾಮಯ್ಯ ಅವರ ಮತ್ತು ಡಿ.ಕೆ.ಶಿವಕುಮಾರ್‌ ಅವರ ಹೆಸರಿನಲ್ಲಿ ಮಹಿಳೆಯರು ಅರ್ಚನೆ ಮಾಡಿಸುತ್ತಿದ್ದಾರೆ ಎಂದು ಪತ್ರ ಬರೆದಿದ್ದರು. ಜನರ ಪ್ರಾರ್ಥನೆ ಎಂದಿಗೂ ಮೋಸ ಮಾಡುವುದಿಲ್ಲ. ಮಹಿಳೆಯರು ರಾಜ್ಯದ ನಾನಾ ದೇವಸ್ಥಾನಗಳನ್ನು ನೋಡುತ್ತಿದ್ದಾರೆ. ಮಕ್ಕಳನ್ನು ಕರೆದುಕೊಂಡು ಹೋಗಿ ದರ್ಶನ ಮಾಡಿಸುತ್ತಿದ್ದಾರೆ. ತವರು ಮನೆಗೆ ಹೋಗಿ ಬರುತ್ತಿದ್ದಾರೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

“ನಮ್ಮ ಯೋಜನೆಗಳಿಂದ ಆರ್ಥಿಕತೆಗೆ ಉತ್ತೇಜನ ನೀಡಲಾಗಿದೆ. ದುಡ್ಡು ಮತ್ತು ಬ್ಲಡ್‌ ಎರಡೂ ಚಲಾವಣೆಯಲ್ಲಿ ಇರಬೇಕು. ದುಡ್ಡು ಒಂದೇ ಕಡೆ ಇದ್ದರೆ ಕಳ್ಳರ, ಆದಾಯ ತೆರಿಗೆ ಅಧಿಕಾರಿಗಳ ಭಯ. ಬ್ಲಡ್‌ ಒಂದೇ ಕಡೆ ಇದ್ದರೆ ಅನಾರೋಗ್ಯ ಉಂಟಾಗುತ್ತದೆ. ನಾವು ಧರ್ಮವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವುದಿಲ್ಲ. ದೇವರು ಬೇರೆ, ರಾಜಕಾರಣ ಬೇರೆ. ಈ ಬಾರಿಯ ಸದನದಲ್ಲಿ ನಮ್ಮ ಸರ್ಕಾರ ಸಣ್ಣ ದೇವಸ್ಥಾನಗಳ ಅಭಿವೃದ್ಧಿಗೆ ಮತ್ತು ಅರ್ಚಕರಿಗೆ ಸಹಾಯ ಮಾಡುವ ಕಾನೂನು ತರಲು ಹೊರಟೆವು. ಆದರೆ ಬಿಜೆಪಿಯವರು ಅದಕ್ಕೆ ವಿರೋಧಿಸಿದರು” ಎಂದು ತಿಳಿಸಿದರು.

“ನಮಗೆ ಜಾತಿ ಮುಖ್ಯವಲ್ಲ ನೀತಿ ಮುಖ್ಯ. ನಾವು ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ. ಭಾವನೆಗಳ ಮೇಲೆ ಅಲ್ಲ. ನಾವು ಕೇವಲ ದಲಿತ, ಹಿಂದುಳಿದ, ಅಲ್ಪಸಂಖ್ಯಾತರಿಗೆ ಮಾತ್ರ ಯೋಜನೆಗಳನ್ನು ನೀಡಿಲ್ಲ. ಎಲ್ಲರಿಗೂ ನೀಡಿದ್ದೇವೆ. ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಸಹಕಾರಿ ಸಂಘಗಳಲ್ಲಿನ ರೈತರ ಸಾಲ ಮನ್ನಾ ಮಾಡಿದ್ದೆವು. ಆದರೆ ಆ ಹಣ ಬಿಡುಗಡೆಯಾಗಿರಲಿಲ್ಲ. ಸಿಎಂ ಮತ್ತು ರಾಜಣ್ಣ ಅವರ ಕಾಳಜಿಯಿಂದ ಈ ಹಣ ಬಿಡುಗಡೆ ಮಾಡಿ ಸಹಕಾರಿ ಸಂಘ ಮತ್ತು ರೈತರಿಗೆ ಬೆನ್ನೆಲುಬಾಗಿದ್ದೇವೆ. ಮುಂದಕ್ಕೂ ನೀವು ನಮ್ಮ ಕೈ ಹಿಡಿಯುತ್ತೀರಾ ಎಂದು ನಂಬಿದ್ದೇವೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ಇದನ್ನು ಓದಿದ್ದೀರಾ? ಮೈಸೂರು | ಜನರ ವಿರುದ್ಧ ಕೇಂದ್ರ ಯುದ್ಧ ಘೋಷಿಸಿದೆ: ತೀಸ್ತಾ ಸೆಟಲ್ವಾಡ್‌

“ಹಾಸನ ಜಿಲ್ಲೆಯ ಜನಪ್ರತಿನಿಧಿಗಳು ಒಂದಷ್ಟು ಅನುದಾನಗಳ ಬಿಡುಗಡೆಗೆ ಮನವಿ ಸಲ್ಲಿಸಿದ್ದಾರೆ. ಇದರಲ್ಲಿ ನಮ್ಮ ಶಿವಲಿಂಗೇಗೌಡರು ಬಂಪರ್‌ ಹೊಡೆದಿದ್ದಾರೆ. ಈ ವರ್ಷ ಮಳೆ ಬಿದ್ದು ನೀರು ಬಂದರೆ, ಎತ್ತಿನಹೊಳೆ ಮೂಲಕ ಎಲ್ಲ ಕೆರೆಗಳನ್ನು ತುಂಬಿಸುವ ಕೆಲಸವಾಗುತ್ತದೆ” ಎಂದು ಇದೇ ವೇಳೆ ಡಿಸಿಎಂ ಡಿ ಕೆ ಶಿವಕುಮಾರ್ ಭರವಸೆ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...