545 ಪಿಎಸ್ಐ ಹುದ್ದೆ | ನಮ್ಮ ಹೋರಾಟಕ್ಕೆ ಕೊನೆಗೂ ಜಯ: ಸಚಿವ ಪ್ರಿಯಾಂಕ್‌ ಖರ್ಗೆ

Date:

ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಹಾಗೂ ಪಾರದರ್ಶಕವಾಗಿ ಮರುಪರೀಕ್ಷೆ ನಡೆಸಿ, ಅಂದು ಬಿಜೆಪಿ ಸರ್ಕಾರ ಲೂಟಿಗೆ ಬಳಸಿಕೊಂಡಿದ್ದ ಅದೇ 545 ಪಿಎಸ್ಐ ಹುದ್ದೆಗಳಿಗೆ ಪ್ರತಿಭಾವಂತ ಅಭ್ಯರ್ಥಿಗಳನ್ನು ನಿಯಮಾನುಸಾರ, ನ್ಯಾಯಸಮ್ಮತವಾಗಿ ಆಯ್ಕೆ ಮಾಡಿದೆ. ಆಯ್ಕೆ ಪ್ರಕ್ರಿಯೆ ವಿಳಂಬವಾದರೂ ಪಾರದರ್ಶಕವಾಗಿರಬೇಕು ಎನ್ನುವುದು ನಮ್ಮ ಉದ್ದೇಶವಾಗಿತ್ತು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರು ಆಯ್ಕೆಯಾದ ಅಭ್ಯರ್ಥಿಗಳೆಲ್ಲರಿಗೂ ಶುಭಕೋರಿ ಪೋಸ್ಟ್‌ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟ ವ್ಯವಸ್ಥೆಯಿಂದಾಗಿ ಪ್ರತಿಭಾವಂತ ಪಿಎಸ್ಐ ಅಭ್ಯರ್ಥಿಗಳು ಕಟ್ಟಿಕೊಂಡಿದ್ದ ಕನಸು ಕಮರಿಹೋಗಿತ್ತು,PSI ನೇಮಕಾತಿಯ ಬೃಹತ್ ಹಗರಣವನ್ನು ಬಯಲಿಗೆಳೆಯುವ ನನ್ನ ಮೊದಲ ಹೆಜ್ಜೆಯಿಂದಲೇ ಪ್ರತಿಭಾವಂತರಿಗೆ ನ್ಯಾಯ ದೊರೆಯುವ ವಿಶ್ವಾಸವಿತ್ತು, ನಮ್ಮ ಹೋರಾಟದಲ್ಲಿ ಬದ್ಧತೆಯೂ ಇತ್ತು” ಎಂದಿದ್ದಾರೆ.

“ನಾವು ಈ ಹಗರಣವನ್ನು ಬಿಚ್ಚಿಟ್ಟಾಗ ಅಂದಿನ ಬಿಜೆಪಿ ಸರ್ಕಾರದ ಗೃಹಸಚಿವರಾದಿಯಾಗಿ ಬಿಜೆಪಿ ನಾಯಕರೆಲ್ಲರೂ ಸದನದಲ್ಲೇ “ಹಗರಣ ನಡೆದೇ ಇಲ್ಲ” ಎನ್ನುವ ಶತಮಾನದ ಹಸಿ ಸುಳ್ಳನ್ನು ಸತ್ಯದ ತಲೆಯ ಮೇಲೆ ಸುತ್ತಿಗೆಯಲ್ಲಿ ಹೊಡೆದಂತೆ ಹೇಳಿದ್ದರು. ಇಷ್ಟೂ ಸಾಲದೆಂಬಂತೆ, ನನ್ನ ಬಾಯಿ ಮುಚ್ಚಿಸಲು ಬಿಜೆಪಿಗರು ನಡೆಸಿದ ಕಸರತ್ತು ಒಂದೆರಡಲ್ಲ. ನನಗೆ CID ಪೊಲೀಸರ ಮೂಲಕ ಎರಡೆರಡು ಬಾರಿ ನೋಟಿಸ್ ನೀಡಿದ್ದರು. ಪ್ರಮುಖ ಆರೋಪಿ ಆರ್.ಡಿ ಪಾಟೀಲನೊಂದಿಗೆ ನನ್ನ ಹೆಸರು ತಳುಕು ಹಾಕಲು ಯತ್ನಿಸಿದ್ದರು. ನನ್ನ ವಿರುದ್ಧ ಬಿಜೆಪಿ ನಾಯಕರು ಸಾಲುಗಟ್ಟಿ ನಿಂತು ತಮ್ಮ ಕೊಳಕು ನಾಲಿಗೆಯ ಮೂಲಕ ಯುದ್ಧ ಸಾರಿದ್ದರು. “ಕಾನ್ವೆಂಟ್ ದಲಿತ್” ಎಂಬ ಬಿರುದನ್ನೂ ಕೊಟ್ಟಿದ್ದರು” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀರಿಗಿಳಿದ ಮೇಲೆ ಚಳಿಯ ಚಿಂತೆಯೇಕೆ” ಎನ್ನುವಂತೆ ನ್ಯಾಯದ ಹೋರಾಟಕ್ಕೆ ಇಳಿದ ಮೇಲೆ ಬಿಜೆಪಿಗರ ದಾಳಿಗಳನ್ನು ಲೆಕ್ಕಿಸಲಿಲ್ಲ, ಲೆಕ್ಕಿಸುವ ಜಾಯಮಾನವೂ ನನ್ನದಲ್ಲ. ಇಂದು ನಮ್ಮ ಸರ್ಕಾರ ನಡೆಸಿದ 545 ಪಿಎಸ್ಐ ಹುದ್ದೆಗಳ ಪ್ರಾಮಾಣಿಕ ನೇಮಕಾತಿಯೇ ಬಿಜೆಪಿಗರಿಗೆ ನಾನು ಕೊಡಬಹುದಾದ ಅತ್ಯುತ್ತಮ ಉತ್ತರ ಎಂದು ಭಾವಿಸಿದ್ದೇನೆ” ಎಂದಿದ್ದಾರೆ.

“ಚುನಾವಣೆಯ ಪೂರ್ವದಲ್ಲಿ ನಾವು ನೀಡಿದ್ದ ಭರವಸೆಯಂತೆಯೇ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಈಗಾಗಲೇ ಚಾಲನೆ ಕೊಡಲಾಗಿದೆ, ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿದೆ, ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ವಿಫಲರಾದ ಅಭ್ಯರ್ಥಿಗಳು ನಿರಾಸೆಗೊಳ್ಳದೆ ತಮ್ಮ ಪ್ರಯತ್ನವನ್ನು ಮುಂದುವರೆಸಬೇಕು, ಪ್ರತಿಭೆಗೆ ತಕ್ಕ ಫಲ ಪಡೆಯುವ ವಿಫುಲ ಅವಕಾಶಗಳನ್ನು ಸರ್ಕಾರ ಮಾಡಿಕೊಡಲಿದೆ. ಕಾಂಗ್ರೆಸ್ ಸರ್ಕಾರ ಯುವ ಸಮುದಾಯದ ಜೊತೆಗಿದೆ. ಯುವಜನರಿಗೆ ಸುಭದ್ರ ಬದುಕು ರೂಪಿಸುವುದು ನಮ್ಮ ಆದ್ಯತೆ ಹಾಗೂ ಬದ್ಧತೆಯಾಗಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...