ಹೆಲಿಕಾಪ್ಟರ್, ವಿಮಾನಕ್ಕಾಗಿ 58 ಕೋಟಿ ರೂ. ಖರ್ಚು ಮಾಡಿದ ಗುಜರಾತ್ ಸರ್ಕಾರ

Date:

ಕಳೆದ ಎರಡು ವರ್ಷಗಳಲ್ಲಿ ಸರ್ಕಾರಿ ಸ್ವಾಮ್ಯದ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳ ನಿರ್ವಹಣೆ, ಗುತ್ತಿಗೆ, ಇಂಧನ ಮತ್ತು ಸಿಬ್ಬಂದಿಗಾಗಿ ಗುಜರಾತ್‌ ಸರ್ಕಾರ 58 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ಸರ್ಕಾರವೇ ಹೇಳಿಕೊಂಡಿದೆ.

ಗುಜರಾತ್ ವಿಧಾನಸಭೆಯಲ್ಲಿ, ಕಳೆದ ಎರಡು ವರ್ಷಗಳಲ್ಲಿ ಸರ್ಕಾರಿ ಸ್ವಾಮ್ಯದ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳಿಗಾಗಿ ಗುಜರಾತ್ ಸರ್ಕಾರವು ನಿರ್ವಹಣೆ, ಗುತ್ತಿಗೆ, ಇಂಧನ, ಪೈಲಟ್‌ಗಳು ಮತ್ತು ಇತರ ಸಿಬ್ಬಂದಿಗೆ ಮಾಡಿದ ವೆಚ್ಚದ ಬಗ್ಗೆ ಕಾಂಗ್ರೆಸ್ ಶಾಸಕ ಅರವಿಂದ್ ಲಡಾನಿ ಪ್ರಶ್ನೆ ಕೇಳಿದ್ದರು.

ಅವರ ಪ್ರಶ್ನೆಗೆ ಉತ್ತರಿಸಿರುವ ಸರ್ಕಾರ, “2021ರ ಜನವರಿ 1ರಿಂದ 2022ರ ಡಿಸೆಂಬರ್ 31ರವರೆಗೆ ನಿರ್ವಹಣೆ, ಗುತ್ತಿಗೆ, ಇಂಧನ, ಪೈಲಟ್‌ಗಳು ಮತ್ತು ಇತರ ಸಿಬ್ಬಂದಿಗಳಿಗಾಗಿ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳಿಗೆ 34,26,65,295 ರೂ. ವೆಚ್ಚ ಮಾಡಲಾಗಿದೆ. ಹೆಚ್ಚುವರಿಯಾಗಿ, 2022ರ ಜನವರಿ 1ರಿಂದ 2023ರ ಡಿಸೆಂಬರ್ 31ರವರೆಗೆ 24,24,55,209 ರೂ. ವ್ಯಯಿಸಲಾಗಿದೆ. ಕೇವಲ ಎರಡು ವರ್ಷಗಳಲ್ಲಿ ಒಟ್ಟು 58,51,20,504 ರೂ. ಖರ್ಚು ಮಾಡಲಾಗಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳ ನಿರ್ವಹಣೆಗೆ ಜವಾಬ್ದಾರಿ ಹೊತ್ತಿರುವ ಗುತ್ತಿಗೆದಾರ ಕಂಪನಿಯ ಗುರುತನ್ನು ಬಹಿರಂಗಪಡಿಸಲು ಸರ್ಕಾರ ನಿರಾಕರಿಸಿದೆ. ಕಂಪನಿಯ ಗುರುತಿನ ಮಾಹಿತಿಯು ಉನ್ನತ ಮಟ್ಟದ ರಾಜ್ಯ ಭದ್ರತೆಗೆ ಸಂಬಂಧಿಸಿದೆ ಎಂದು ಉಲ್ಲೇಖಿಸಿದೆ.

ಸರ್ಕಾರಿ ವಿಮಾನಗಳಲ್ಲಿ ಗಮನಾರ್ಹ ಹೂಡಿಕೆಯ ಹೊರತಾಗಿಯೂ, ಸಾರ್ವಜನಿಕರಿಗಾಗಿ ಪ್ರಾರಂಭವಾದ ಭಾರತದ ಮೊದಲ ಸೀಪ್ಲೇನ್ ಸೇವೆಯ ಭವಿಷ್ಯವು ಅತಂತ್ರವಾಗಿಯೇ ಉಳಿದಿದೆ.

2024ರ ಫೆಬ್ರವರಿ 13ರಂದು, ಗುಜರಾತ್ ಸರ್ಕಾರವು ಅಹಮದಾಬಾದ್‌ನ ಸಬರಮತಿ ಮತ್ತು ನರ್ಮದಾ ಜಿಲ್ಲೆಯ ಏಕತಾ ಪ್ರತಿಮೆ ನಡುವಿನ ಸೀಪ್ಲೇನ್ ಸೇವೆಯನ್ನು ಪುನರಾರಂಭಿಸಲು ಕಳೆದ ವರ್ಷ ಮೇನಲ್ಲಿ ಟೆಂಟರ್‌ ಕರೆದಿತ್ತು. ಆದರೆ, ಯಾವುದೇ ಸಂಸ್ಥೆ ಸೇವೆ ಒದಗಿಸಲು ಆಸಕ್ತಿ ತೋರಿಸಿಲ್ಲ ಎಂದು ಹೇಳಲಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2020ರ ಅಕ್ಟೋಬರ್‌ನಲ್ಲಿ ಸೀಪ್ಲೇನ್ ಸೇವೆಯನ್ನು ಉದ್ವಾಟಿಸಿದ್ದರು. ಆದರೆ, 2021ರ ಏಪ್ರಿಲ್‌ನಲ್ಲಿ ಸೇವೆ ಸ್ಥಗಿತಗೊಂಡಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...