60 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಅರಣ್ಯ ಒತ್ತುವರಿ ತೆರವು

Date:

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬೆಲೆಬಾಳುವ ಅರಣ್ಯ ಭೂಮಿ ಒತ್ತುವರಿ ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ ನೀಡಿದ 24 ಗಂಟೆಯೊಳಗೆ ಕೆಂಗೇರಿ ಬಳಿಯ ತುರಹಳ್ಳಿ ಮೀಸಲು ಅರಣ್ಯದ ಬಿಎಂ ಕಾವಲು ಬಫರ್ ವಲಯದಲ್ಲಿ ಒತ್ತುವರಿ ಮಾಡಲಾಗಿದ್ದ 60 ಕೋಟಿ ರೂ. ಮಾರುಕಟ್ಟೆ ಮೌಲ್ಯದ 6.5 ಎಕರೆ ಭೂಮಿ ತೆರವು ಮಾಡಿ, ವಶಕ್ಕೆ ಪಡೆಯಲಾಗಿದೆ.

ಹೊಸ ವರ್ಷದಲ್ಲಿ ಅರಣ್ಯ ಇಲಾಖೆಯ ಕಾರ್ಯ ಯೋಜನೆಗಳ ಬಗ್ಗೆ ನಿನ್ನೆ ಸಭೆ ನಡೆಸಿ ಉನ್ನತಾಧಿಕಾರಿಗಳಿಗೆ ಆದ್ಯತೆಯ ಮೇಲೆ ಒತ್ತುವರಿ ತೆರವು ಮಾಡಲು ಸಚಿವರು ಸೂಚಿಸಿದ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆಯೇ ಬಿ.ಎಂ. ಕಾವಲಿನಲ್ಲಿ ಜೆ.ಸಿ.ಬಿ. ವಾಹನಗಳು ಗರ್ಜಿಸಿದವು.

ಬೆಂಗಳೂರು ನಗರ ಡಿ.ಸಿ.ಎಫ್ ರವೀಂದ್ರಕುಮಾರ್, ಎ.ಸಿ.ಎಫ್. ಸುರೇಶ್ ಮತ್ತು ಆರ್.ಎಫ್.ಓ. ಗೋವಿಂದರಾಜ್ ಅವರ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಯ ತಂಡ ತೆರವು ಕಾರ್ಯಾಚರಣೆಗಿಳಿದು ಈ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿ, ಅರಣ್ಯ ಭೂಮಿ ವಶಕ್ಕೆ ಪಡೆದು ಗಡಿಯಲ್ಲಿ ಬಿದಿರು ಸೇರಿದಂತೆ ನಾನಾ ಜಾತಿಯ ಮರಗಳನ್ನು ನೆಡುವ ಮೂಲಕ ಮರುವಶಕ್ಕೆ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಅರಣ್ಯ ಪ್ರದೇಶದಲ್ಲಿ ಸುಮಾರು 6.5 ಎಕರೆಯಷ್ಟು ಭೂಮಿಯನ್ನು ಮಧುಸೂದನಾನಂದ ಸ್ವಾಮಿ ಎಂಬುವವರು ಒತ್ತುವರಿ ಮಾಡಿ, ಮಂಜೂರಾತಿ ಮಾಡುವಂತೆ ಅರ್ಜಿ ಸಲ್ಲಿಸಿದ್ದರು, ಅರಣ್ಯ ಭೂಮಿಯಾದ ಕಾರಣ ಯಾರಿಗೂ ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಅರಣ್ಯ ಇಲಾಖೆ ತಿರಸ್ಕರಿಸಿತ್ತು.

ಒತ್ತುವರಿದಾರರ ಬಳಿ ಅರಣ್ಯ ಭೂಮಿಗೆ ಸಂಬಂಧಿಸಿದಂತೆ ಯಾವುದೇ ಕಂದಾಯ ದಾಖಲೆ, ಕ್ರಯಪತ್ರ, ಮಂಜೂರಾತಿ ಪತ್ರ, ಸಾಗುವಳಿ ಚೀಟಿ ಯಾವುದೂ ಇಲ್ಲದ ಕಾರಣ 2017ರ ಆಗಸ್ಟ್ ನಲ್ಲಿಯೇ ಈ ಒತ್ತುವರಿ ತೆರವಿಗೆ ಎ.ಸಿ.ಎಫ್. ನ್ಯಾಯಾಲಯ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸಿಸಿಎಫ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.

29.12.2023ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಿಂಗರಾಜ್ ಅವರು ಈ ಭೂಮಿ ಅರಣ್ಯ ಇಲಾಖೆಗೆ ಸಂಬಂಧಿಸಿದ್ದೆಂದು ಮಹತ್ವದ ಆದೇಶ ನೀಡಿದ್ದರು. ನಿನ್ನೆ ಅರಣ್ಯ ಸಚಿವ ಈಶ್ವರ ಖಂಡ್ರೆಯವರು ಬೆಂಗಳೂರು ಸುತ್ತಮುತ್ತ ಬೆಲೆ ಬಾಳುವ ಅರಣ್ಯ ಭೂಮಿ ಒತ್ತುವರಿಯಾಗಿದ್ದರೆ ಆದ್ಯತೆಯ ಮೇಲೆ ತೆರವು ಮಾಡುವಂತೆ ನಿರ್ದೇಶಿಸಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಲಾಗಿದೆ.

ಈ ಸುದ್ದಿ ಓದಿದ್ದೀರಾ? 15ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ | ಫೆಬ್ರವರಿ 29ರಿಂದ ಮಾರ್ಚ್‌ 7ರ ವರೆಗೆ ಆಯೋಜನೆ

ಐದು ಪ್ರಕರಣ ದಾಖಲು

ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿರುವ ಮಧುಸೂದನಾನಂದ ಸ್ವಾಮಿ ಎನ್ನುವವರ ವಿರುದ್ಧ ಈಗಾಗಲೇ 5 ಪ್ರಕರಣ ದಾಖಲು ಮಾಡಲಾಗಿದೆ.

ವನಸಂಪತ್ತು ಉಳಿಸುವುದೇ ಇಲಾಖೆಯ ಕರ್ತವ್ಯ : ಈಶ್ವರ ಖಂಡ್ರೆ

“ಬೆಂಗಳೂರು ಸುತ್ತಮುತ್ತ ಭೂಮಿಗೆ ಬಂಗಾರದ ಬೆಲೆ ಇದೆ. ಕೆಲವರು ಸ್ವಾರ್ಥಕ್ಕಾಗಿ ಕೋಟ್ಯಂತರ ರೂ. ಬೆಲೆಬಾಳುವ ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ. ಪ್ರಕೃತಿ, ಪರಿಸರ, ಕಾಡು ಮತ್ತು ವನಸಂಪತ್ತು ಉಳಿಸುವುದೇ ಇಲಾಖೆಯ ಕರ್ತವ್ಯವಾಗಿದ್ದು, ಬೆಂಗಳೂರಿನಲ್ಲಿ ಆದೇಶ ಆಗಿರುವ ಪ್ರಕರಣಗಳಲ್ಲಿ ಒತ್ತುವರಿ ತೆರವು ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ” ಎಂದು ಸಚಿವ ಈಶ್ವರ ಖಂಡ್ರೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...