62 ತಾಲೂಕು ಬರ ಘೋಷಣೆಗೆ ಅರ್ಹ, 529 ಕೋಟಿ ಅನುದಾನ ಎತ್ತಿಡಲಾಗಿದೆ : ಸಚಿವ ಕೃಷ್ಣಭೈರೇಗೌಡ

Date:

  • ಕಂದಾಯ ಸಚಿವ ಕೃಷ್ಣಭೈರೇಗೌಡ ಸಹಿತ ಮೂವರು ಸಚಿವರಿಂದ ಬರ ಪರಿಸ್ಥಿತಿ ವಿವರಣೆ
  • ರೈತರಿಗೆ ಮೇವು ಬಿತ್ತನೆ ಬೀಜದ ಕಿಟ್ ವಿತರಿಸಲು ಪಶು ಸಂಗೋಪನೆ ಇಲಾಖೆಗೆ 20 ಕೋಟಿ ರೂ.

113 ತಾಲೂಕುಗಳ ಪೈಕಿ ಜಂಟಿ ಸಮೀಕ್ಷೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ 62 ತಾಲೂಕುಗಳು ಸದ್ಯ ಬರ ಘೋಷಣೆಗೆ ಅರ್ಹವಾಗಿವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಸಚಿವ ಸಂಪುಟದ ಉಪಸಮಿತಿಯ ಸಭೆಯ ಬಳಿಕ ವಿಧಾನಸೌಧದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಚಲುವರಾಯಸ್ವಾಮಿ ಜೊತೆಗೆ ಸುದ್ದಿಗೋಷ್ಠಿ ನಡೆಸಿದ ಕೃಷ್ಣಭೈರೇಗೌಡ, “2023ರ ಮಂಗಾರು ಆರಂಭದಲ್ಲಿಯೇ ದುರ್ಬಲಗೊಂಡು, ಜೂನ್ ತಿಂಗಳಿನಲ್ಲಿ ಶೇ 5ರಷ್ಟು ಮಳೆ ಕೊರತೆಯಾಗಿತ್ತು. ನಂತರ ಜುಲೈನಲ್ಲಿ ಉತ್ತಮವಾಗಿ ಮಳೆಯಾದರೂ, ಆಗಸ್ಟ್‌ ತಿಂಗಳಿನಲ್ಲಿ ಶೇಕಡಾ 73 ರಷ್ಟು ಮಳೆ ಕೊರತೆಯಾಗಿದೆ. ಒಟ್ಟಾರೆ ಪ್ರಸಕ್ತ ಮುಂಗಾರು ಜೂನ್ 1 ರಿಂದ ಸೆಪ್ಟೆಂಬರ್ 4 ರವರೆಗೆ ವಾಡಿಕೆಯಾಗಿ 711 ಮಿ.ಮಿ. ಮಳೆಯಾಗಬೇಕಿತ್ತು. ಆದರೆ ಕೇವಲ 526 ಮಿ.ಮೀ ಮಳೆಯಾಗಿದೆ. ಇದರಿಂದಾಗಿ ಶೇಕಡಾ 26ರಷ್ಟು ಮಳೆ ಕೊರತೆಯಾಗಿದ್ದರಿಂದ ಬರ ಪರಿಸ್ಥಿತಿ ತಲೆದೋರಿದೆ” ಎಂದು ವಿವರಿಸಿದರು.

ಬರ ಪರಿಸ್ಥಿತಿ ಬಗ್ಗೆ ನಿಗಾ ಮತ್ತು ನಿರ್ವಹಣೆಗಾಗಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿಯು ಈವರೆಗೆ 3 ಬಾರಿ ಸಭೆ ನಡೆಸಿ ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ಪರಾಮರ್ಶಿಸಿದೆ. ಇಂದಿನ ಸಭೆಯಲ್ಲಿ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಲು ಮಾತುಕತೆ ನಡೆಸಿದ್ದೇವೆ ಎಂದು ಕೃಷ್ಣಭೈರೇಗೌಡ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಬರ ಪರಿಸ್ಥಿತಿ ಕಂಡುಬಂದಿರುವ 113 ತಾಲೂಕುಗಳನ್ನು ಕ್ಷೇತ್ರ ಪರಿಶೀಲನೆ ಹಾಗೂ ದೃಢೀಕರಣಕ್ಕಾಗಿ (Ground Truthning) ಜಂಟಿ ಸಮೀಕ್ಷೆ ಕೈಗೊಂಡು ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು. 113 ತಾಲೂಕುಗಳ ಪೈಕಿ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಪ್ರಕಾರ 62 ತಾಲೂಕುಗಳ ಬರ ಘೋಷಣೆಗೆ ಅರ್ಹವಾಗಿದೆ. ಆದರೆ, ಜಂಟಿ ಸಮೀಕ್ಷೆಯ ನಂತರ ಬೆಳೆ ಪರಿಸ್ಥಿತಿ ಮತ್ತೆ ಕುಸಿದಿದೆ ಎಂದು ವರದಿಗಳು ಬಂದಿದೆ. ಹಾಗಾಗಿ ಉಳಿದ 51 ತಾಲೂಕುಗಳಲ್ಲಿ ಮತ್ತೊಮ್ಮೆ ಜಂಟಿ ಸಮೀಕ್ಷೆಗೆ ಒಳಪಡಿಸಲು ತೀರ್ಮಾನಿಸಿದೆ ಎಂದು ಕಂದಾಯ ಸಚಿವರು ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬರ ಘೋಷಣೆಯಲ್ಲ, ಪೀಡಿತರಿಗೆ ಪರಿಹಾರ ಮುಟ್ಟಿಸುವುದು ಮುಖ್ಯ

ಉಳಿದ 51 ಮತ್ತು 83 ತಾಲೂಕುಗಳಲ್ಲಿ ಸಮೀಕ್ಷೆ ಮುಗಿಸಿ ಒಂದು ವಾರದೊಳಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಈ 134 ತಾಲೂಕುಗಳಲ್ಲಿ ಜಂಟಿ ಸಮೀಕ್ಷೆ ವರದಿ ಆಧಾರದ ಅನುಸಾರ ಬರ ಘೋಷಣೆಯ ಬಗ್ಗೆ ತೀರ್ಮಾನಿಸಲಾಗುವುದು. ಜೊತೆಗೆ, ಘೋಷಣೆಯ ಬಳಿಕ ಕೇಂದ್ರ ಸರ್ಕಾರದಿಂದ ನೆರವಿಗಾಗಿ ಮನವಿ ಸಲ್ಲಿಸಲಿದ್ದೇವೆ ಎಂದು ಕೃಷ್ಣಭೈರೇಗೌಡ ಹೇಳಿದರು.

ಬರ ಘೋಷಣೆಯಾದ ದಿನದಿಂದ ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ರಚಿಸಲು ತೀರ್ಮಾನಿಸಲಾಗಿದೆ. ಕುಡಿಯುವ ನೀರು ಕೊರತೆ ಕಂಡುಬಂದ ವಸತಿ ಪ್ರದೇಶಗಳಲ್ಲಿ ಟ್ಯಾಂಕರ್ ಮುಖಾಂತರ ಅಥವಾ ಬಾಡಿಗೆ ಬೋರ್‌ವೆಲ್ ಮುಖಾಂತರ ತುರ್ತು ಕುಡಿಯುವ ನೀರು ಒದಗಿಸುವ ಖರ್ಚು ವೆಚ್ಚವನ್ನು ಎಸ್‌ಡಿಆರ್ ಎಫ್ (SDRF) ಮುಖಾಂತರ ಭರಿಸಲು ಅನುಮತಿಸಲಾಗಿದೆ ಎಂದು ಕಂದಾಯ ಸಚಿವರು ಹೇಳಿದರು.

“ಹಾಲಿ ಮೇವು ಲಭ್ಯವಿದ್ದು ಮುಂದಿನ ದಿನಗಳಲ್ಲಿ ಮೇವಿನ ಕೊರತೆ ನಿಭಾಯಿಸಲು ನೀರಿನ ವ್ಯವಸ್ಥೆ ಇರುವ ರೈತರಿಗೆ ಮೇವು ಬಿತ್ತನೆ ಬೀಜದ ಕಿಟ್ ವಿತರಿಸಲು ಪಶು ಸಂಗೋಪನೆ ಇಲಾಖೆಗೆ 20 ಕೋಟಿ ರೂ. ಮೊತ್ತ ವಿತರಿಸಲು ತೀರ್ಮಾನಿಸಲಾಗಿದೆ. ಬರ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಧಿಕಾರಿಗಳ ಬಳಿ ಈಗಾಗಲೇ 529 ಕೋಟಿ ಅನುದಾನ ಲಭ್ಯವಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...