ಆಪರೇಷನ್ ಕಮಲಕ್ಕೆ 6,500 ಕೋಟಿ ರೂ. ಬೇಕು, ಸುಮ್ಮನೇ ಆರೋಪ ಬೇಡ: ಪ್ರಲ್ಹಾದ್‌ ಜೋಶಿ

Date:

ನಾವು ಕಾಂಗ್ರೆಸ್‌ನ ಯಾವ ಶಾಸಕರಿಗೂ 100 ಕೋಟಿ ರೂ. ಆಫರ್ ಮಾಡಿಲ್ಲ. 65 ಶಾಸಕರನ್ನು ತೆಗೆದುಕೊಂಡರೆ ಮಾತ್ರ ಸರ್ಕಾರ ರಚನೆ ಸಾಧ್ಯ. ಹಾಗಾದರೆ 65 ಶಾಸಕರಿಗೆ 6,500 ಕೋಟಿ ರೂ. ಆಗಲಿದೆ. ಸುಮ್ಮನೇ ಆರೋಪ ಮಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು.

ಆಪರೇಷನ್ ಕಮಲ ಕುರಿತ ಆರೋಪಗಳಿಗೆ ಧಾರವಾಡದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ನಾನು ಬಿಜೆಪಿಯ ಕೇಂದ್ರದ ಸಚಿವನಾಗಿ ಬರೆದು ಕೊಡುತ್ತೇನೆ, ಯಾವ ಕಾಲಕ್ಕೂ ನಾವು ಸರ್ಕಾರಕ್ಕೆ ತೊಂದರೆ ಕೊಡಲ್ಲ. ಆದರೆ, ಸಿಎಂ ರಾಜೀನಾಮೆ ಕೇಳುತ್ತಿದ್ದೇವೆ” ಎಂದು ತಿಳಿಸಿದರು.

“ಮುಡಾ ಹಗರಣದಲ್ಲಿ ಸಿಲುಕಿದ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡದಿದ್ದರೆ ಸಿಬಿಐ ತನಿಖೆಗೆ ವಹಿಸಲಿ. ಅವರು ನೈತಿಕತೆ ಇದ್ದರೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು. ಮುಡಾ ಹಗರಣದ ಎ-1 ಆರೋಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆಗಿದ್ದರಿಂದ ಇಲ್ಲಿಯ ಅಧಿಕಾರಿಗಳು ಅವರ ವಿರುದ್ಧ ಸರಿಯಾದ ತನಿಖೆ ಮಾಡಲ್ಲ. ಪರಿಣಾಮ ಸತ್ಯ ಹೊರ ಬರುವುದಿಲ್ಲ” ಎಂದು ಜೋಶಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇತ್ತೀಚೆಗಷ್ಟೇ ಲೋಕಾಯುಕ್ತಕ್ಕೆ ತಮಗೆ ಬೇಕಾದವರನ್ನು ನೇಮಕ ಮಾಡಿಕೊಂಡಿದ್ದಾರೆ. ಹೀಗಿರುವಾಗ ಸಿಎಂ ವಿರುದ್ಧ ಲೋಕಾಯುಕ್ತ ಎಸ್‌ಪಿ ಆಗಲಿ ಕರ್ನಾಟಕ ಪೊಲೀಸ್ ಆಗಲಿ ಪಾರದರ್ಶಕ ತನಿಖೆ ನಡೆಸೋದು ಅಸಾಧ್ಯದ ಮಾತು. ಹಾಗಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು” ಎಂದು ಆಗ್ರಹಿಸಿದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಂಧನ ಕಾನೂನಿಗೆ ಬಿಟ್ಟ ವಿಷಯ. ಆದರೆ, ಅವರದ್ದೇ ಸರ್ಕಾರ ಇರುವುದರಿಂದ ಪ್ರಕರಣ ಸುದೀರ್ಘವಾಗಲಿದೆ. ನಮ್ಮ ಹೋರಾಟವೂ ಮುಂದುವರಿಯಲಿದೆ. ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ನೈತಿಕವಾಗಿ ದಿವಾಳಿ ಎದ್ದಿದೆ” ಎಂದು ಕಿಡಿ ಕಾರಿದರು.

ಕುಮಾರಸ್ವಾಮಿ ಕಾಲು ಹಿಡಿದು ಸಿಎಂ ಮಾಡಿದ್ದು ಯಾರು?

“ಹೆಚ್ ​ಡಿ ಕುಮಾರಸ್ವಾಮಿ ಬೇಲ್ ಮೇಲೆ ಇರುವ ಬಗ್ಗೆ ಹಲವು ಬಾರಿ‌ ಹೇಳಿದ್ದೇನೆ. ಕುಮಾರಸ್ವಾಮಿ ವಿರುದ್ಧ ಕೇಸ್ ದಾಖಲಾಗಿರುವುದು 2008ರಲ್ಲಿ. 2013-18ರ ಅವಧಿಯಲ್ಲಿ ಸಿದ್ದರಾಮಯ್ಯ ಸಿಎಂ ಆಗಿರಲಿಲ್ವಾ? ಆಗ ಯಾಕೆ ಕ್ರಮ ಕೈಗೊಳ್ಳಲಿಲ್ಲ? 2018ರಲ್ಲಿ ಹೆಚ್ ​ಡಿ ಕುಮಾರಸ್ವಾಮಿ ಅವರ ಕಾಲುಹಿಡಿದು ಅವರನ್ನು ಸಿಎಂ ಮಾಡಿದವರು ಯಾರು? ಆಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲ್ಲ ಎಂದಿದ್ದರು. ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಅದನ್ನು ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಿದರು. 2008ರ ಕೇಸ್​​ನಲ್ಲಿ ರಾಜೀನಾಮೆ ಕೊಡಬೇಕು ಅಂತಾರಲ್ಲವೇ? ಈಗ ಸಿಎಂ ರಾಜೀನಾಮೆ ಕೊಡಲ್ಲ ಅನ್ನೋದು ಯಾವ ಲೆಕ್ಕ? ಹೆಚ್​ಡಿಕೆ ಅಥವಾ ನಮಗೆ ಅಷ್ಟೇ ಸಿಎಂ ಆಗಲು ಒಲವು ಇದೆಯಾ? ಕಾಂಗ್ರೆಸ್​​ನವರೆಲ್ಲಾ ಸನ್ಯಾಸಿಗಳಾ” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...