ಕಂದಾಯ ಇಲಾಖೆಯೊಳಗಿನ ಭ್ರಷ್ಟರ ಬೇಟೆಗೆ ಮುಂದಾದ ಸಚಿವರು, 67 ಅಧಿಕಾರಿ/ನೌಕರರಿಗೆ ಶಿಕ್ಷೆ

Date:

  • ‘ಭ್ರಷ್ಟರ ಬೇಟೆಗೆ ನಮ್ಮ ಸರ್ಕಾರ ಒಂದು ಹೆಜ್ಜೆ ಮುಂದಿಟ್ಟಿದೆ’
  • ‘ವಿಚಾರಣಾ ಕಾಲಾವಧಿ ಅನಗತ್ಯವಾಗಿ ವಿಸ್ತರಣೆ ಮಾಡಕೂಡದು’

ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ಮುಕ್ತ ಶುದ್ಧ ಆಡಳಿತ ನೀಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಅಧಿಕಾರಕ್ಕೆ ಬಂದ ಎರಡೇ ತಿಂಗಳಿನಲ್ಲಿ ಕಳೆದ ಐದು ವರ್ಷಗಳಿಂದ ಧೂಳು ಹಿಡಿದಿದ್ದ ಕಂದಾಯ ಇಲಾಖೆ ಅಧಿಕಾರಿ/ನೌಕರರ ಕಡತಗಳನ್ನು ಕೊಡವಿ, 67 ಭ್ರಷ್ಟ ಅಧಿಕಾರಿಗಳಿಗೆ ಶಿಕ್ಷೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, “ದೊಡ್ಡ ಇಲಾಖೆಯೊಂದರಲ್ಲಿ ಸುಧಾರಣೆ ಸಾಧಿಸಿಬಿಡಬಹುದು, ಇಲಾಖೆಯನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಿ ಜನರಿಗೆ ಉತ್ತಮ ಸೇವೆ ನೀಡಬಹುದು ಎಂಬ ಭ್ರಮೆ ನಮಗಿಲ್ಲ. ಆದರೆ, ಭ್ರಷ್ಟರ ಬೇಟೆಗೆ ನಮ್ಮ ಸರ್ಕಾರ ಒಂದು ಹೆಜ್ಜೆ ಮುಂದಿಟ್ಟಿದೆ” ಎಂದು ತಿಳಿಸಿದ್ದಾರೆ.

“ಕಳೆದ ಕೆಲವು ವರ್ಷಗಳಿಂದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ/ಇಲಾಖಾ ವಿಚಾರಣೆ ಪ್ರಸ್ತಾವನೆ ವಿವಿಧ ಹಂತಗಳಲ್ಲಿ ಬಾಕಿ ಇವೆ. ಈ ಪೈಕಿ ಅನೇಕ ಪ್ರಕರಣ ಪ್ರಸ್ತಾವನೆ ಅಥವಾ ವಿಚಾರಣೆ ಹಂತಗಳಲ್ಲಿ ಬಹಳ ವಿಳಂಬವಾಗಿದ್ದು, ವರ್ಷಗಳೇ ಕಳೆದಿವೆ. ದುರುದ್ದೇಶದಿಂದ ಕಡತಗಳನ್ನು ಮರೆಮಾಚಿ, ವಿಳಂಬ ಮಾಡಿರುವ ಪ್ರಕರಣಗಳೂ ಕೂಡ ನಡೆದಿವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಳಂಬ ಮಾಡಿ ತಪ್ಪು ಮಾಡದ ಅಧಿಕಾರಿಗಳಿಗೆ ತೊಂದರೆ ನೀಡುವುದು ಒಂದು ಕಡೆಯಾದರೆ, ತಪ್ಪು ಮಾಡಿರುವ ಅಧಿಕಾರಿಗಳಿಗೆ ರಕ್ಷಣೆ ನೀಡುವುದು ಮತ್ತೊಂದು ಪರಿಣಾಮವಾಗಿರುತ್ತದೆ. ಇವರೆಡೂ ನ್ಯಾಯಕ್ಕೆ ವಿರುದ್ಧ. ಆಡಳಿತ ಸುಧಾರಣೆಯಾಗಬೇಕಾದರೆ ಸಮಯಕ್ಕೆ ಸರಿಯಾಗಿ ವಿಚಾರಣೆಗಳು ಜರುಗಿ ಅಮಾಯಕರನ್ನು ದೋಷಮುಕ್ತಗೊಳಿಸಿ, ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಅವಶ್ಯಕ. ಈ ಹಿನ್ನೆಲೆಯಲ್ಲಿ ಈ ಕೆಳಕಂಡ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ವಿವರಿಸಿದ್ದಾರೆ.

ಅಧಿಕಾರಿಗಳಿಗೆ ನೀಡಿದ ಸೂಚನೆಗಳು

  1. ವಿವಿಧ ಹಂತಗಳಲ್ಲಿ ಬಾಕಿ ಇರುವ ಪ್ರಕರಣಗಳ ಸಂಪೂರ್ಣ ಪಟ್ಟಿ ತಯಾರಿಸುವುದು.
  2. ವಿಚಾರಣಾಧಿಕಾರಿಗಳು, ಮಂಡನಾಧಿಕಾರಿಗಳ ನೇಮಕ ಮತ್ತು ಇತರೆ ಪ್ರಕ್ರಿಯೆಗಳಲ್ಲಿ ವಿಳಂಬ ಆಗದಂತೆ ಮಾಡುವುದು. ಈ ಹಂತಗಳಲ್ಲಿ ಕಡತಗಳನ್ನು ಮರೆಮಾಚಲು ಅವಕಾಶ ನೀಡಬಾರದು. ವಿಳಂಬವಿಲ್ಲದೆ ವಿಚಾರಣೆಗೆ ಒಳಪಡಿಸುವುದು ಹಾಗೂ ಮುಕ್ತಾಯಗೊಳಿಸುವುದು.
  3. ಹಾಲಿ ಚಾಲ್ತಿಯಲ್ಲಿರುವ ವಿಚಾರಣೆಗಳನ್ನು ಮತ್ತು ಈ ನಂತರದ ಪ್ರಕರಣಗಳನ್ನು ನಿಗದಿತ ಸಮಯದೊಳಗೆ ಮುಕ್ತಾಯ ಮಾಡಲು ವಿಚಾರಣಾಧಿಕಾರಿಗಳನ್ನು ತಾಕೀತು ಮಾಡುವುದು.
  4. ವಿಚಾರಣಾ ಕಾಲಾವಧಿಯನ್ನು ಅನಗತ್ಯವಾಗಿ ವಿಸ್ತರಣೆ ಮಾಡಕೂಡದು. ಅನಿವಾರ್ಯವಿದ್ದ ಸಂದರ್ಭಗಳಲ್ಲಿ ಮಾತ್ರ ಒಂದು ವಿಸ್ತರಣೆ ನೀಡುವುದು, ವಿಸ್ತರಣೆಗಳ ಮೂಲಕ ವಿಳಂಬಕ್ಕೆ ದಾರಿ ಮಾಡಿಕೊಡಬಾರದು.
  5. ಪ್ರಕರಣಗಳು ಅನಿವಾರ್ಯ ಕಾರಣಗಳಿಂದಾಗಿ ನ್ಯಾಯಾಲಯದ ಮೆಟ್ಟಿಲನ್ನು ತಲುಪಿದಲ್ಲಿ, ಇಂತಹ ಪ್ರಕರಣಗಳ ಶೀಘ್ರ ಮತ್ತು ಪರಿಣಾಮಕಾರಿ ವಿಲೇವಾರಿಗಾಗಿ ಕಾನೂನು ಕ್ರಮ ವಹಿಸುವುದು.
  6. ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಈ ಪ್ರಕರಣಗಳ ವಿಲೇವಾರಿ/ಪ್ರಗತಿ ಕುರಿತು ಪರಿಶೀಲನೆ ಮಾಡುವುದು ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ಆಗ್ಗಿಂದಾಗ್ಗೆ ನೀಡುವುದು.
  7. ವಿಚಾರಣಾ ವರದಿಗಳನ್ನು ತ್ವರಿತವಾಗಿ ಅನುಷ್ಠಾನಕ್ಕೆ ತರುವುದು. ಕಡತಗಳನ್ನು ವಿಚಾರಣೆಗೆ ಒಪ್ಪಿಸುವುದು ಹಾಗೂ ವಿಚಾರಣಾ ನಂತರ ಅಥವಾ ಯಾವುದೇ ಹಂತದಲ್ಲಿ ವಿಳಂಬ ಮಾಡಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವುದು.

“ರಾಜ್ಯದ ಜನತೆಗೆ ನಾವು ನೀಡಿದ ಭರವಸೆಗೆ ಬದ್ಧರಾಗಿದ್ದೇವೆ. ಹೀಗಾಗಿ ಕಂದಾಯ ಇಲಾಖೆಯ ಸೇವೆಯನ್ನು ಜನರಿಗೆ ಮತ್ತಷ್ಟು ಹತ್ತಿರ ಕೊಂಡೊಯ್ಯಲು, ನೇರ, ಶುದ್ಧ ಮತ್ತು ಪ್ರಗತಿಪರ ಆಡಳಿತ ನೀಡಲು ಎಲ್ಲ ಇಲಾಖೆಗಳ ಮಾತೃ ಇಲಾಖೆಯಾದ ಕಂದಾಯ ಇಲಾಖೆಯಲ್ಲಿ ಮತ್ತಷ್ಟು ಸುಧಾರಣಾ ಕ್ರಮಗಳನ್ನು ಜಾರಿಗೆ ತರಲಾಗುವುದು ಎಂಬುದನ್ನು ನಾನು ಈ ಮೂಲಕ ತಿಳಿಯಪಡಿಸಲು ಇಚ್ಛಿಸುತ್ತೇನೆ” ಎಂದು ಕೃಷ್ಣಭೈರೇಗೌಡ ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...