ಮಹಾರಾಷ್ಟ್ರ ಸರ್ಕಾರಿ ಆಸ್ಪತ್ರೆಯಲ್ಲಿ ಮುಂದುವರಿದ ಸಾವಿನ ಸರಣಿ: ಮತ್ತೆ ನಾಲ್ಕು ಮಕ್ಕಳ ಸಹಿತ 7 ಮಂದಿ ಮೃತ್ಯು

Date:

  • ಕಳೆದ 48 ಗಂಟೆಗಳಲ್ಲಿ 31ಕ್ಕೆ ಏರಿದ ಸಾವಿನ ಸಂಖ್ಯೆ; 16 ಮಂದಿ ಮಕ್ಕಳು ಮೃತ್ಯು
  • ವೈದ್ಯಕೀಯ ನಿರ್ಲಕ್ಷ್ಯದ ಆರೋಪವನ್ನು ತಳ್ಳಿ ಹಾಕಿದ ಆಸ್ಪತ್ರೆಯ ಡೀನ್

ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ಮಂದಿ ಸಾವನ್ನಪ್ಪಿದ ನಂತರ ನಿನ್ನೆ ತಡರಾತ್ರಿ ಏಳು ರೋಗಿಗಳು ಮೃತಪಟ್ಟಿದ್ದು, ಕಳೆದ 48 ಗಂಟೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

ಈಗ ಶಂಕರರಾವ್ ಚವ್ಹಾಣ್ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಏಳು ಮಂದಿಯಲ್ಲಿ ನಾಲ್ವರು ಮಕ್ಕಳಿದ್ದು, ಈವರೆಗೆ ಮೃತಪಟ್ಟ 31 ರೋಗಿಗಳ ಪೈಕಿ 16 ಮಂದಿ ಮಕ್ಕಳು ಎಂದು ತಿಳಿದುಬಂದಿದೆ.

ವೈದ್ಯಕೀಯ ನಿರ್ಲಕ್ಷ್ಯದ ಆರೋಪವನ್ನು ಆಸ್ಪತ್ರೆಯ ಡೀನ್ ಡಾ.ಶ್ಯಾಮರಾವ್ ವಾಕೋಡೆ ತಳ್ಳಿಹಾಕಿದ್ದು, ಔಷಧಿಗಳು ಅಥವಾ ವೈದ್ಯರ ಕೊರತೆಯಿಲ್ಲ. ರೋಗಿಗಳಿಗೆ ಸರಿಯಾದ ಆರೈಕೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾವಿನ ಕುರಿತು ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಛತ್ರಪತಿ ಸಂಭಾಜಿನಗರ ಜಿಲ್ಲೆಯಿಂದ ಮೂರು ಸದಸ್ಯರ ತಜ್ಞರ ಸಮಿತಿಯನ್ನು ರಚಿಸಲಾಗಿದ್ದು, ವರದಿ ಸಲ್ಲಿಸಲು ಆದೇಶ ನೀಡಲಾಗಿದೆ. ನಾನು ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇನೆ” ಎಂದು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ನಿರ್ದೇಶಕ ಡಾ.ದಿಲೀಪ್ ಮಹೈಸೇಕರ್ ನಿನ್ನೆ ತಿಳಿಸಿದ್ದರು.

ಸರ್ಕಾರಿ ಆಸ್ಪತ್ರೆಯಲ್ಲಿನ ಸಾವಿನ ಸರಣಿ ವರದಿಯು ಏಕನಾಥ್ ಶಿಂಧೆ ನೇತೃತ್ವದ ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದು, ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿದೆ.

“ಘಟನೆಯು ಅತ್ಯಂತ ನೋವಿನ, ಗಂಭೀರ ಮತ್ತು ಆತಂಕಕಾರಿ” ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿವರವಾದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಕಳೆದ ಆಗಸ್ಟ್‌ನಲ್ಲಿ ಥಾಣೆಯ ಸರ್ಕಾರಿ ಆಸ್ಪತ್ರೆಯಲ್ಲಿ ಅಲ್ಪಾವಧಿಯಲ್ಲಿ 18 ರೋಗಿಗಳು ಸಾವನ್ನಪ್ಪಿದ್ದ ಘಟನೆಯನ್ನು ಇದೇ ವೇಳೆ ಖರ್ಗೆ ನೆನಪಿಸಿದ್ದಾರೆ.

ಮಹಾರಾಷ್ಟ್ರದ ಆಡಳಿತಾರೂಢ ಮೈತ್ರಿಕೂಟದ ಭಾಗವಾಗಿರುವ ಬಿಜೆಪಿಯನ್ನು ಗುರಿಯಾಗಿರಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಬಿಜೆಪಿ ಸರಕಾರ ಪ್ರಚಾರಕ್ಕೆ ಸಾವಿರಾರು ಕೋಟಿ ಖರ್ಚು ಮಾಡುತ್ತದೆ, ಆದರೆ ಮಕ್ಕಳ ಔಷಧಿ ಖರೀದಿಸಲು ಹಣವಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಏಕನಾಥ್ ಶಿಂಧೆ ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ನಾಂದೇಡ್ ಆಸ್ಪತ್ರೆಗೆ ತಕ್ಷಣ ಬೇಕಾದ ಎಲ್ಲ ರೀತಿಯ ನೆರವನ್ನು ಒದಗಿಸಲು ಪ್ರಾಶಸ್ತ್ಯ ನೀಡಬೇಕು” ಎಂದು ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಹೇಳಿದ್ದಾರೆ.

maharashtra hospital

ನಿನ್ನೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದ ಆಸ್ಪತ್ರೆಯ ಡೀನ್ ಡಾ.ಶ್ಯಾಮರಾವ್ ವಾಕೋಡೆ, “ಸೆಪ್ಟೆಂಬರ್ 30-ಅಕ್ಟೋಬರ್ 1 ರಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ 12 ನವಜಾತ ಶಿಶುಗಳು 0-3 ದಿನಗಳ ವಯಸ್ಸಿನವರಾಗಿದ್ದಾರೆ ಮತ್ತು ತುಂಬಾ ಕಡಿಮೆ ತೂಕ ಹೊಂದಿದ್ದರು. ಮಕ್ಕಳ ವಿಭಾಗದಲ್ಲಿ 142 ದಾಖಲಾತಿಗಳಾಗಿದ್ದು, ಅದರಲ್ಲಿ 42 ಇನ್ನೂ ಗಂಭೀರ ಪ್ರಕರಣಗಳು. ಆಮ್ಲಜನಕ ಮತ್ತು ವೆಂಟಿಲೇಟರ್ ಸೌಲಭ್ಯಗಳಿವೆ. ರೋಗಿಗಳು ಹಿಂಗೋಲಿ, ಪರ್ಭಾನಿ ಮತ್ತು ವಾಶಿಮ್ ಸೇರಿದಂತೆ ನೆರೆಯ ಜಿಲ್ಲೆಗಳಿಂದ ಬಂದವರು. ಕೆಲವರು ನೆರೆಯ ತೆಲಂಗಾಣದ ಹಳ್ಳಿಗಳಿಂದ ಬಂದವರು” ಎಂದು ಅವರು ಹೇಳಿದರು ಎಂದು ಹೇಳಿದ್ದಾರೆ.

ಈಗಾಗಲೇ ಮೃತಪಟ್ಟಿರುವ 12 ವಯಸ್ಕರಲ್ಲಿ ಐವರು ಪುರುಷರು ಮತ್ತು ಏಳು ಮಹಿಳೆಯರ ಪೈಕಿ ನಾಲ್ವರು ವಯಸ್ಕರಿಗೆ ಹೃದಯ ಸಂಬಂಧಿ ಕಾಯಿಲೆಗಳು, ಒಬ್ಬರು ವಿಷಪ್ರಾಷಣ ಸಮಸ್ಯೆಯಿಂದ ಬಳಲುತ್ತಿದ್ದರು, ಒಬ್ಬರಿಗೆ ಯಕೃತ್ತಿನ ಸಮಸ್ಯೆ, ಇಬ್ಬರು ಕಿಡ್ನಿ ರೋಗಿಗಳು ಮತ್ತು ಒಂದು ಪ್ರಕರಣವು ಗರ್ಭಾವಸ್ಥೆಯಲ್ಲಿನ ತೊಡಕು ಹಾಗೂ ಮೂರು ಅಪಘಾತ ಪ್ರಕರಣಗಳಾಗಿತ್ತು ಎಂದು ನಾಂದೇಡ್ ಜಿಲ್ಲಾಡಳಿತ ನಿನ್ನೆ ಹೊರಡಿಸಿದ್ದ ಹೇಳಿಕೆಯಲ್ಲಿ ತಿಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...