ಬಿಆರ್‌ಎಸ್‌ ನಾಯಕ ಕೆಟಿಆರ್ ಸೇರಿದಂತೆ 8 ನಾಯಕರಿಗೆ ‘ಗೃಹಬಂಧನ’

Date:

ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಕಾರ್ಯಾಧ್ಯಕ್ಷ, ತೆಲಂಗಾಣ ಮಾಜಿ ಸಚಿವ ಕಲ್ವಕುಂಟ್ಲ ತಾರಕ ರಾಮರಾವ್ (ಕೆಟಿಆರ್), ಹರೀಶ್ ರಾವ್ ಮತ್ತು ಇತರ ಆರು ಮಂದಿ ಬಿಆರ್‌ಎಸ್‌ ನಾಯಕರನ್ನು ಮಂಗಳವಾರ ಬೆಳಿಗ್ಗೆ ಪೊಲೀಸರು ಗೃಹಬಂಧನದಲ್ಲಿ ಇರಿಸಿದ್ದಾರೆ ಎಂದು ಪಕ್ಷ ತಿಳಿಸಿದೆ.

ಫಾರ್ಮುಲಾ ಇ ರೇಸ್ ಪ್ರಕರಣದ ತನಿಖೆ ನಡೆಸುತ್ತಿರುವ ತೆಲಂಗಾಣದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ), ಪ್ರಕರಣದಲ್ಲಿ ಬಿಆರ್‌ಎಸ್‌ ನಾಯಕರ ಪಾತ್ರವಿದೆ ಎಂದು ಆರೋಪಿಸಿದೆ. ಆದರೆ, ಆರೋಪವನ್ನು ಬಿಆರ್‌ಎಸ್‌ ನಾಯಕರು ನಿರಾಕರಿಸಿದ್ದಾರೆ. ಆರೋಪವು ‘ಕ್ಷುಲ್ಲಕ’ ಮತ್ತು ‘ಕಾನೂನು ಪ್ರಕ್ರಿಯೆಯ ದುರುಪಯೋಗ’ ಎಂದು ಕೆಟಿಆರ್‌ ಕರೆದಿದ್ದಾರೆ.

ಈ ನಡುವೆ, ಸೋಮವಾರ, ಬಿಆರ್‌ಎಸ್‌ ಶಾಸಕ ಪಾಡಿ ಕೌಶಿಕ್ ರೆಡ್ಡಿ ಅವರನ್ನು ಪೊಲೀಸರು ಬಂಧಿಸಿದ್ದರು. ಇದೀಗ, ಹೈದರಾಬಾದ್‌ನ ಗಚಿಬೌಲಿಯಲ್ಲಿರುವ ಕೆಟಿಆರ್ ಅವರ ನಿವಾಸದ ಹೊರಗೆ ಭಾರೀ ಪೊಲೀಸರನ್ನು ನಿಯೋಜಿಸಲಾಗಿದ್ದು, ಕೆಟಿಆರ್ ಅವರನ್ನು ಮನೆಯಲ್ಲಿಯೇ ಬಂಧನದಲ್ಲಿರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫಾರ್ಮುಲಾ-ಇ ರೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 9ರಂದು ಎಸಿಬಿ ಮುಂದೆ ಕೆಟಿಆರ್‌ ವಿಚಾರಣೆಗೆ ಹಾಜರಾಗಿದ್ದರು. ಬಳಿಕ ಮಾತನಾಡಿದ್ದ ಕೆಟಿಆರ್, “ಆರೋಪಗಳಿಗೆ ಯಾವುದೇ ಗಣನೀಯ ಪುರಾವೆಗಳಿಲ್ಲ. ಆದರೂ, ಏಳು ಗಂಟೆಗಳಿಗೂ ಹೆಚ್ಚು ಕಾಲ ನನ್ನನ್ನು ಪುನರಾವರ್ತಿತ ಪ್ರಶ್ನೆಗಳನ್ನು ಪದೇ ಪದೇ ಕೇಳಲಾಗಿದೆ” ಎಂದು ಹೇಳಿಕೊಂಡಿದ್ದರು.

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವು ‘ಕ್ಷುಲ್ಲಕ’ ಮತ್ತು ‘ಕಾನೂನುಬಾಹಿರ’ವಾಗಿವೆ. ರಾಜ್ಯ ಸರ್ಕಾರದ ವಿರುದ್ಧ ಬಿಆರ್‌ಎಸ್ ಹೋರಾಡುತ್ತಿದ್ದು, ಕಾರಣಕ್ಕಾಗಿ ತಮ್ಮ ಮೇಲೆ ಇಂತಹ ಆರೋಪ ಹೊರಿಸಲಾಗಿದೆ ಎಂದು ಕೆಟಿಆರ್ ಪ್ರತಿಪಾದಿಸಿದ್ದರು.

ಈ ವರದಿ ಓದಿದ್ದೀರಾ?: 70 ಗಂಟೆ, 90 ಗಂಟೆ ಕೆಲಸ: ಉದ್ಯೋಗಿಗಳ ರಕ್ತ ಹೀರುವುದು ಲಾಭಕೋರ ಬಂಡವಾಳಿಗರ ಸಂಚು

“ಇದರಲ್ಲಿ ಭ್ರಷ್ಟಾಚಾರ ಎಲ್ಲಿದೆ ಎಂದು ನಾನು ಅವರನ್ನು (ಎಸಿಬಿ) ಕೇಳಿದೆ. ಹೈದರಾಬಾದ್ ಮತ್ತು ತೆಲಂಗಾಣವನ್ನು ವಿಶ್ವ ವೇದಿಕೆಯಲ್ಲಿ ಇರಿಸಲು ನಾನು ಸಚಿವನಾಗಿ ಏನು ಮಾಡಿದ್ದೇನೆಯೋ ಅದನ್ನು ಪೂರ್ಣ ಪ್ರಜ್ಞೆಯಿಂದ ಮಾಡಿದ್ದೇನೆ. ನೀವು ನನ್ನ ಮೇಲೆ ಆರೋಪ ಮಾಡಿ ಪ್ರಕರಣವನ್ನು ಹೇರಲು ಮುಂದಾದರೆ, ಅದು ಬಹುಶಃ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಸಂತೋಷವಾಗಬಹುದು. ಹೊರತಾಗಿ, ಬೇರೇನು ಅಗದು” ಎಂದು ಕೆಟಿಆರ್‌ ಹೇಳಿದ್ದಾರೆ.

“ರಾಜಕೀಯ ವಿರೋಧವನ್ನು ನಿಗ್ರಹಿಸಲು ಸರ್ಕಾರವು ಆರೋಪ-ಪ್ರಕರಣವನ್ನು ಸಾಧನವಾಗಿ ಬಳಸುತ್ತಿದೆ. ನಾನು ಕಾನೂನುಬದ್ಧವಾಗಿ ಹೋರಾಡುತ್ತೇನೆ. ನಾನು ಎಲ್ಲ ರೀತಿಯ ಕಾನೂನು ಪರಿಹಾರಗಳನ್ನು ಹುಡುಕುತ್ತೇನೆ. ಸತ್ಯ ಹೊರ ಬರುತ್ತದೆ. ನ್ಯಾಯವು ಮೇಲುಗೈ ಸಾಧಿಸುತ್ತದೆ ಎಂದು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.

ಈ ನಡುವೆ, ತಮ್ಮ ವಿರುದ್ಧ ದಾಖಲಾಗಿರುವ ಫಾರ್ಮುಲಾ ಇ ರೇಸ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಕೆಟಿಆರ್ ಸಲ್ಲಿಸಿದ್ದ ಅರ್ಜಿಯನ್ನು ತೆಲಂಗಾಣ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

2023ರ ಫೆಬ್ರವರಿಯಲ್ಲಿ ಹೈದರಾಬಾದ್‌ನಲ್ಲಿ ನಡೆದ ಫಾರ್ಮುಲಾ ಇ ರೇಸ್‌ಗೆ ಸಂಬಂಧಿಸಿದಂತೆ ಹಣಕಾಸು ಅಕ್ರಮಗಳು ನಡೆದಿವೆ. ಕೆಟಿಆರ್‌ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣವನ್ನು ತೆಲಂಗಾಣದ ಎಸಿಬಿ ತನಿಖೆ ನಡೆಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...