90 ವರ್ಷ ಹಳೆಯ ಜೈನ ದೇಗುಲ ಧ್ವಂಸ: ಸಮುದಾಯವನ್ನು ಸಂತೈಸುವಲ್ಲಿ ಬಿಜೆಪಿ ವಿಫಲ

Date:

ಮಹಾರಾಷ್ಟ್ರದ ಮುಂಬೈನ ವಿಲೇ ಪಾರ್ಲೆ ಪೂರ್ವದ ನೆಮಿನಾಥ್ ಕೋ-ಆಪರೇಟಿವ್ ಹೌಸಿಂಗ್ ಸೊಸೈಟಿಯಲ್ಲಿರುವ ಸುಮಾರು 90 ವರ್ಷ ಹಳೆಯದಾದ ಜೈನ ದೇಗುಲವನ್ನು ಬೃಹನ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಧ್ವಂಸ ಮಾಡಲಾಗಿದೆ. ಬಿಎಂಸಿ ಅಧಿಕಾರಿಗಳ ಈ ಕಾರ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಈಸ್ಟ್ ವಾರ್ಡ್‌ನ ಉಸ್ತುವಾರಿ ವಹಿಸಿದ್ದ ಸಹಾಯಕ ಆಯುಕ್ತ ನವನಾಥ್ ಘಡ್ಗೆ ಪಾಟೀಲ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಈ ಹಿಂದೆ ಘಡ್ಗೆ ಪಾಟೀಲ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿತ್ತು. ಆದರೆ ಕಾರಣ ಬಹಿರಂಗಪಡಿಸಿರಲಿಲ್ಲ. ಆದರೆ ಪ್ರತಿಭಟನೆ ವೇಳೆ ಶಾಸಕ ಪರಾಗ್ ಅಲವಾನಿ ಅವರು ಘಡ್ಗೆ ವರ್ಗಾವಣೆಗೆ ಜೈನ ದೇಗುಲ ಧ್ವಂಸವೇ ಕಾರಣ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಮುಂಬೈ ಬಿಎಂಸಿಯಿಂದ 90 ವರ್ಷದ ಜೈನ ದೇಗುಲ ಧ್ವಂಸ: ಬಿಜೆಪಿ ವಿರುದ್ಧ ಬೃಹತ್ ಪ್ರತಿಭಟನಾ ರ್‍ಯಾಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರೀ 1008 ದಿಗಂಬರ ಜೈನ ಮಂದಿರ ಟ್ರಸ್ಟ್ ನಿರ್ವಹಿಸುತ್ತಿರುವ ಈ ದೇವಾಲಯವು ಅಕ್ರಮ ಕಟ್ಟಡವೆಂದು ಹೇಳಿ ಏಪ್ರಿಲ್ 16ರಂದು ಕೆ-ಪೂರ್ವ ವಾರ್ಡ್‍ನ ಅಧಿಕಾರಿಗಳು ಧ್ವಂಸಗೊಳಿಸಿದ್ದರು. ಬಾಂಬೆ ಹೈಕೋರ್ಟ್ ತಡೆಯಾಜ್ಞೆ ಆದೇಶ ಬರುವುದಕ್ಕೂ ಮುನ್ನ ದೇಗುಲ ಕೆಡವಿರುವುದನ್ನು ತೀವ್ರವಾಗಿ ಖಂಡಿಸಲಾಗುತ್ತಿದೆ. ಸದ್ಯ ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರ ವಿಪಕ್ಷಗಳ, ಜೈನ ಸಮುದಾಯದ ವಾಗ್ದಾಳಿಗೆ ಗುರಿಯಾಗಿದೆ.

ಈ ಪ್ರದೇಶದಲ್ಲಿ ಬಾರ್ ತೆರೆಯಲು ಬಯಸಿದ್ದ ಹೋಟೆಲ್ ಉದ್ಯಮಿಯೊಬ್ಬರ ಒತ್ತಡಕ್ಕೆ ಒಳಗಾಗಿ ದೇವಾಲಯವನ್ನು ಕೆಡವಲಾಗಿದೆ ಎಂಬುದು ಜೈನ ನಾಯಕ ಅನಿಲ್ ಶಾ ಅವರ ಆರೋಪ. “ಹೋಟೆಲ್ ಉದ್ಯಮಿ ಹಲವು ಅಕ್ರಮ ಕಟ್ಟಡಗಳನ್ನು ನಿರ್ಮಿಸಿದ್ದಾರೆ. ಈ ಕಟ್ಟಡಗಳನ್ನು ಕೆಡವಲು ಕೋರ್ಟ್ ಆದೇಶವಿದ್ದರೂ ಅಧಿಕಾರಿಗಳು ಏನೂ ಮಾಡಿಲ್ಲ. ಆದರೆ ಈಗ ಅಧಿಕಾರಿಗಳು ಕೋರ್ಟ್ ಆದೇಶಕ್ಕೆ ಕಾಯದೆಯೇ ಹಳೆಯ ಜೈನ ದೇವಾಲಯವನ್ನು ತಕ್ಷಣವೇ ಕೆಡವಿದರು. ದೇವಾಲಯವನ್ನು ಕೆಡವಲು ತನ್ನ ಪ್ರಭಾವವನ್ನು ಬಳಸಿದ ಈ ಹೋಟೆಲ್ ಉದ್ಯಮಿಯ ವಿರುದ್ಧ ಈಗ ಇಡೀ ಜೈನ ಸಮುದಾಯವಿದೆ” ಎಂದು ಹೇಳಿದ್ದಾರೆ.

ಜೈನ ದೇಗುಲವನ್ನು ಕೆಡವುದರಿಂದ ತನ್ನ ಪಕ್ಷಕ್ಕೆ ಆಗುವ ನಷ್ಟವನ್ನು ತಡೆಯುವ ಪ್ರಯತ್ನವನ್ನು ಮಾಡಿದ ಬಿಜೆಪಿ, ಜೈನ ಧರ್ಮಕ್ಕೆ ಸೇರಿದ ತನ್ನ ಸಚಿವ ಮಂಗಲ್ ಪ್ರಭಾತ್ ಲೋಧಾ ಅವರನ್ನು ಸ್ಥಳಕ್ಕೆ ಕಳುಹಿಸಿದೆ. ಆದರೆ ಆ ಹೊತ್ತಿಗೆ ಧ್ವಂಸ ಕಾರ್ಯವನ್ನು ಪೂರ್ಣಗೊಳಿಸಲಾಗಿತ್ತು. ಬಿಎಂಸಿ ನೇರವಾಗಿ ಬಿಜೆಪಿ ನಿಯಂತ್ರಿತ ರಾಜ್ಯ ಸರ್ಕಾರದ ಅಡಿಯಲ್ಲಿದೆ. ಸ್ಥಳೀಯ ಶಾಸಕ ಪರದ್ ಅಲವಾನಿ ಕೂಡ ಬಿಜೆಪಿಗೆ ಸೇರಿದವರು. ಆದ್ದರಿಂದ ಬಿಜೆಪಿ ವಿರುದ್ಧ ಜೈನ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನು ಓದಿದ್ದೀರಾ? ಉತ್ತರಾಖಂಡದ ಸುರಂಗ ಕಾರ್ಮಿಕರನ್ನು ರಕ್ಷಿಸಿದ್ದ ವಕೀಲ್ ಹಸನ್ ಮನೆ ಧ್ವಂಸಗೊಳಿಸಿದ ದೆಹಲಿ ಅಭಿವೃದ್ಧಿ ಪ್ರಾಧಿಕಾರ!

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಸಿಂಗ್ ಯಾದವ್ ದೇಗುಲ ಧ್ವಂಸವನ್ನು ಖಂಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಧಾರ್ಮಿಕ ಅಲ್ಪಸಂಖ್ಯಾತರನ್ನು ಅವರ ಭೂಮಿ ಮತ್ತು ಆಸ್ತಿಯನ್ನು ಕಸಿದುಕೊಳ್ಳಲಾಗುತ್ತಿದೆ” ಎಂದು ಬಿಜೆಪಿಯನ್ನು ಟೀಕಿಸಿದ್ದಾರೆ.

“ದೇಶದ ವಿವಿಧ ಭಾಗಗಳಲ್ಲಿ ಜೈನ ಮುನಿಗಳು ಮತ್ತು ಅವರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು ನಡೆಯುತ್ತಿದೆ. ಪ್ರಸ್ತುತ ಧಾರ್ಮಿಕ ಅಲ್ಪಸಂಖ್ಯಾತರಾಗಿರುವುದು ಒಂದು ಶಾಪ ಎಂಬಂತಾಗಿದೆ. ಅಲ್ಪಸಂಖ್ಯಾತ ಜೈನ ಸಮುದಾಯದಲ್ಲಿ ಭಯ, ಅಭದ್ರತೆ ಹೆಚ್ಚಾಗುತ್ತಿದೆ” ಎಂದರು.

“ಮಧ್ಯಪ್ರದೇಶದ ಸಿಂಗೋಲಿಯಲ್ಲಿ ಜೈನರ ಮೇಲೆ ಹಿಂಸಾತ್ಮಕ ದಾಳಿ, ವಿಲೇ ಪಾರ್ಲೆಯಲ್ಲಿ ದೇವಾಲಯದ ಧ್ವಂಸ, ಜಾರ್ಖಂಡ್‌ನ ಗಿರಿಧಿಹ್‌ನಲ್ಲಿ ಸಮ್ಮೇದ್ ಶಿಕಾರ್ ವಿಚಾರದಲ್ಲಿ ಕೇಂದ್ರ ಸರ್ಕಾರದ ಹಸ್ತಕ್ಷೇಪ ಮತ್ತು ಉತ್ತರಪ್ರದೇಶದ ಭಾಗ್‌ಪತ್‌ನಲ್ಲಿ ಜೈನ ವಿಗ್ರಹ ಸ್ಥಾಪನೆಗೆ ವಿರೋಧ ಎಲ್ಲವೂ ಜೈನರ ವಿರುದ್ಧದ ಬಿಜೆಪಿಯ ಅಭಿಯಾನವನ್ನು ಸೂಚಿಸುತ್ತದೆ. ಬಿಜೆಪಿ ಭೂಕಬಳಿಕೆಯಲ್ಲಿ ತೊಡಗಿದೆ” ಎಂದು ಆರೋಪಿಸಿದರು. ಹಾಗೆಯೇ “ಭಾರತೀಯ ಜನತಾ ಪಕ್ಷವನ್ನು ಭಾರತೀಯ ಜಮೀನ್ ಪಕ್ಷ ಎಂದು ಮರುನಾಮಕರಣ ಮಾಡಬೇಕೆಂದು” ಎಂದು ವ್ಯಂಗ್ಯವಾಡಿದರು.

ಸದ್ಯ ಮುಂಬೈನಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಜೈನ ಸಮುದಾಯವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...