ಬೆಳಗಾವಿ ಗ್ರಾಮೀಣ ಕೃಷಿ ಭೂಮಿಗೆ ನೀರು ಒದಗಿಸಲು 900 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಘೋಷಿಸುತ್ತೇವೆ: ಡಿಸಿಎಂ ಡಿ ಕೆ ಶಿವಕುಮಾರ್

Date:

“ಬೆಳಗಾವಿಯಲ್ಲಿ ಇರುವ ಮರಾಠಿ ಭಾಷಿಗರು ಕೂಡ ಕರ್ನಾಟಕದವರೇ. ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಕೆಪಿಸಿಸಿ ಕಚೇರಿ ಬಳಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ಬೆಳಗಾವಿಯ ಗ್ರಾಮೀಣ ಭಾಗದ ಜನರಿಗೆ ನಮ್ಮ ಸರ್ಕಾರ ಸಾಕಷ್ಟು ಅನುಕೂಲತೆಗಳನ್ನು ಕಲ್ಪಿಸಿಕೊಟ್ಟಿದೆ. ಅವರು ನಮ್ಮ ನೀರು, ಗಾಳಿ ಕುಡಿಯುತ್ತಿದ್ದಾರೆ. ನಮ್ಮ ಭೂಮಿಯಲ್ಲಿ ವಾಸವಾಗಿದ್ದಾರೆ, ವ್ಯವಸಾಯ ಮಾಡುತ್ತಿದ್ದಾರೆ. ಈ ಬಜೆಟ್ ಅಲ್ಲಿ ಬೆಳಗಾವಿ ಗ್ರಾಮೀಣ ಭಾಗದ ಕೃಷಿ ಭೂಮಿಗಳಿಗೆ ನೀರನ್ನು ಒದಗಿಸಲು ರೂ.900 ಕೋಟಿ ವೆಚ್ಚದಲ್ಲಿ ಯೋಜನೆ ಘೋಷಣೆ ಮಾಡಲಿದ್ದೇವೆ” ಎಂದರು.

“ಲೋಕಸಭಾ ಚುನಾವಣೆ ವಿಚಾರವಾಗಿ ಕೇಳಿದಾಗ “ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಹುತೇಕ ಅಂತಿಮ ಹಂತಕ್ಕೆ ತೆಗೆದುಕೊಂಡು ಹೋಗುತ್ತೇವೆ. ಈ ವಿಚಾರವಾಗಿ ನಾನು ಮತ್ತು ಮುಖ್ಯಮಂತ್ರಿಗಳು ಒಂದು ಸುತ್ತಿನ ಮಾತುಕಥೆ ನಡೆಸಿದ್ದೇವೆ. ಈಗ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಜತೆ ಸಭೆ ಮಾಡುತ್ತೇವೆ, ನಂತರ ಸ್ಕ್ರೀನಿಂಗ್ ಸಮಿತಿ ಸದಸ್ಯರು ಚರ್ಚಿಸಿ ಹೈಕಮಾಂಡಿಗೆ ಪಟ್ಟಿ ಕಳಿಸುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸುವವರಿಗೆ ನೈತಿಕತೆ ಇದ್ದರೆ ಪ್ರಶ್ನೆಗೆ ಬೆಲೆ, ಅಲ್ಲವೇ?

ರಾಜ್ಯಸಭೆಗೆ ರಾಜ್ಯದಿಂದ ಹೆಸರು ಸೂಚಿಸಲಾಗುವುದೇ ಎಂದು ಕೇಳಿದಾಗ, “ರಾಜ್ಯಸಭೆಗೆ ನಾವು ಹೆಸರುಗಳನ್ನು ಸೂಚಿಸುತ್ತೇವೆ. ನಂತರ ಹೈಕಮಾಂಡ್ ಅಂತಿಮ ತೀರ್ಮಾನ ಮಾಡಲಿದೆ” ಎಂದರು.

40 ಪರ್ಸೆಂಟ್ ಕಮಿಷನ್ ವಿಚಾರವಾಗಿ ತನಿಖೆ ನಿಧಾನಗತಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ ಎಂದಾಗ “ಹೈಕೋರ್ಟ್ ಅಭಿಪ್ರಾಯವನ್ನು ಗೌರವಿಸುತ್ತೇವೆ. ನಾವು ತನಿಖೆಯನ್ನು ಸಮಿತಿಗೆ ನೀಡಿದ್ದು, ಅವರ ಕರ್ತವ್ಯ ಅವರು ಮಾಡುತ್ತಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...