ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯ ತಲೆತಗ್ಗಿಸುವಂಥ ನಿರ್ಣಯ: ವಿಶ್ವೇಶ್ವರ ಹೆಗಡೆ ಕಾಗೇರಿ

Date:

  • ‘ಡಿಕೆಶಿ ಪ್ರಕರಣ ಪ್ರಜಾಪ್ರಭುತ್ವದ ಸಂಸದೀಯ ವ್ಯವಸ್ಥೆಗೆ ಅಗೌರವ’
  • ‘ಕ್ಯಾಬಿನೆಟ್‍ನ ನಿರ್ಣಯವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ’

ಮೊನ್ನೆ ನಡೆದ ನಮ್ಮ ರಾಜ್ಯದ ಕ್ಯಾಬಿನೆಟ್‍ನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇಡೀ ದೇಶದಲ್ಲೇ ಕರ್ನಾಟಕವು ತಲೆತಗ್ಗಿಸುವಂತೆ ಮಾಡಿರುವ ನಿರ್ಣಯ ಅಂಗೀಕರಿಸಿದ್ದಾರೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಡಿ.ಕೆ.ಶಿವಕುಮಾರ್ ಅವರು ಗಳಿಸಿದ ಅಕ್ರಮ ಆಸ್ತಿ ಸಂಬಂಧ ಸಿಬಿಐ ತನಿಖೆ ನಡೆಯುತ್ತಿದೆ. ಸಿಬಿಐ ಮತ್ತು ಕೋರ್ಟ್‍ಗಳು ಅವರ ಮೇಲೆ ಚಾರ್ಜ್‍ಶೀಟ್ ಹಾಕಲು ಬೇಕಾದ ಪ್ರಕ್ರಿಯೆ ನಡೆಸುತ್ತಿವೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಮತ್ತು ಕರ್ನಾಟಕದ ಸಚಿವ ಸಂಪುಟವು ನಮ್ಮ ಪ್ರಜಾಪ್ರಭುತ್ವದ ಸಂಸದೀಯ ವ್ಯವಸ್ಥೆಗೇ ಅಗೌರವ ಆಗುವಂಥ ನಿರ್ಣಯವನ್ನು ಕ್ಯಾಬಿನೆಟ್‍ನಲ್ಲಿ ತೆಗೆದುಕೊಂಡಿದ್ದಾರೆ” ಎಂದು ಆಕ್ಷೇಪಿಸಿದರು.

“ಕ್ಯಾಬಿನೆಟ್‍ನ ಈ ನಿರ್ಣಯವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಆ ನಿರ್ಣಯ ಮಾಡಲು ಸ್ಪೀಕರ್ ಸ್ಥಾನವನ್ನು ಅವರು ಬಳಕೆ ಮಾಡಿಕೊಂಡಿರುವುದು ದುರ್ದೈವದ ಸಂಗತಿ. ಸ್ಪೀಕರ್ ಸ್ಥಾನವು ಸಂವಿಧಾನಬದ್ಧವಾಗಿ ತನ್ನದೇ ಆದ ಘನತೆ, ಗೌರವವನ್ನು ಇಟ್ಟುಕೊಂಡಿದೆ. ಸ್ಪೀಕರ್ ಅವರ ಅನುಮತಿಯ ವ್ಯಾಪ್ತಿಯಲ್ಲೇ ಬರದೆ ಇರುವ ವಿಷಯಕ್ಕೆ ಸ್ಪೀಕರ್ ಅವರು ಅನುಮತಿ ಕೊಟ್ಟಿಲ್ಲವೆಂದು ಕಾರಣವನ್ನು ಹೇಳಿ ಕ್ಯಾಬಿನೆಟ್ ನಿರ್ಣಯ ಮಾಡಿದ್ದು ಕಾಂಗ್ರೆಸ್ ಸರಕಾರದ ಅಕ್ಷಮ್ಯ ಅಪರಾಧ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಿಜೆಪಿಗೆ ಮರಳಿ ಹೋಗುವ ಬಗ್ಗೆ ಕನಸು ಮನಸಿನಲ್ಲೂ ಯೋಚಿಸಿಲ್ಲ: ಗಾಲಿ ಜನಾರ್ದನ ರೆಡ್ಡಿ

“ಸಿದ್ದರಾಮಯ್ಯನವರು ಹಿರಿತನ ಉಳ್ಳವರು; ಅವರು ಯಾವ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬುದು ವ್ಯಕ್ತವಾಗುತ್ತದೆ. ಅವರು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಲಿ. ಅವರ ಹಿರಿತನ, ಅನುಭವಕ್ಕೆ ತಕ್ಕಂತೆ ಕೆಲಸ ಮಾಡಲಿ. ಈ ರೀತಿಯ ಒತ್ತಡಕ್ಕೆ ಮಣಿದು, ಅಸಹಾಯಕರಾಗಿ ಅಥವಾ ಬಿಜೆಪಿ ಮೇಲೆ ಇನ್ನೇನೋ ಸಿಟ್ಟು, ದ್ವೇಷ ಸಾಧನೆಗೆ ಈ ರೀತಿ ರಾಜ್ಯದ ಜನರು, ನಮ್ಮ ವ್ಯವಸ್ಥೆಯೇ ತಲೆತಗ್ಗಿಸುವಂಥ ನಿರ್ಣಯವನ್ನು ಸಿದ್ದರಾಮಯ್ಯನವರು ಮಾಡಬಾರದು” ಎಂದು ಆಗ್ರಹಿಸಿದರು.

“ಇಡೀ ಕ್ಯಾಬಿನೆಟ್ ಮತ್ತು ಮುಖ್ಯಮಂತ್ರಿಗಳು ಈ ನಿರ್ಣಯ ತೆಗೆದುಕೊಂಡಿರುವುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಸಿಬಿಐ ತನಿಖೆ ಮುಂದುವರಿಯಬೇಕು. ಇದರಲ್ಲಿ ಸ್ಪೀಕರ್ ಪಾತ್ರ ಏನೂ ಇಲ್ಲ. ಸ್ಪೀಕರ್ ಅವರ ವ್ಯಾಪ್ತಿಗೆ ಬರದೇ ಇರುವ ವಿಷಯವಿದು” ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...