ಶಾಸಕರ ವೇತನ ಪರಿಷ್ಕರಣೆಗೂ ಆಯೋಗ ರಚಿಸಲಿ: ಅರವಿಂದ ಬೆಲ್ಲದ ಸಲಹೆ

Date:

ಶಾಸಕರಿಗೆ ಇರುವಂತಹ ವೇತನದಲ್ಲಿ ಎಲ್ಲ ಕಚೇರಿ, ವಾಹನ, ಚಾಲಕ ನಿರ್ವಹಣೆ ಸಾಧ್ಯ ಇಲ್ಲ ಎಂಬುದು ಎಲ್ಲ ಶಾಸಕರಿಗೂ ಗೊತ್ತಿದೆ. ಹೀಗಾಗಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ವೇತನ ಆಯೋಗ ರಚಿಸುವಂತೆ ಶಾಸಕರ ವೇತನ ಪರಿಷ್ಕರಣೆಗೂ ಆಯೋಗ ರಚಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.

ಧಾರವಾಡ ಜರ್ನಲಿಸ್ಟ್‌ ಗಿಲ್ಡ್‌ ವತಿಯಿಂದ ನಗರದ ಪತ್ರಿಕಾಭವನದಲ್ಲಿ ಗುರುವಾರ ಆಯೋಜಿಸಿದ್ದ ಸಂವಾದದಲ್ಲಿ ಅವರು ಮಾತನಾಡಿ, “ಶಾಸಕರ ಪಗಾರವನ್ನು ಶಾಸಕರೇ ಹೆಚ್ಚಿಸಿಕೊಳ್ಳುವುದು ತಪ್ಪು” ಎಂದರು.

“ಶಾಸಕರಿಗೆ ಏನೇನು ಖರ್ಚುಗಳು ಇರುತ್ತವೆ, ಖರ್ಚು ನಿಭಾಯಿಸಲು ಸರ್ಕಾರದಿಂದ ಏನು ವ್ಯವಸ್ಥೆ ಮಾಡಬೇಕು, ಶಾಸಕರ ಆಪ್ತ ಸಹಾಯಕರ ಪಗಾರ, ಅವರ ಪ್ರವಾಸ ಭತ್ಯೆ ಇತ್ಯಾದಿ ಯಾರು ನೀಡಬೇಕು ಇತ್ಯಾದಿ ಕುರಿತು ಆಯೋಗವು ಪರಿಶೀಲಿಸಿ ನಿರ್ಧಾರ ಕೈಗೊಳ್ಳುವಂತಾಗಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲಾಧಿಕಾರಿ ಸಹಿತ ವಿವಿಧ ಅಧಿಕಾರಿಗಳಿಗೆ ಕಚೇರಿ, ವಾಹನ, ಮನೆ ಎಲ್ಲ ಸೌಲಭ್ಯ ಇರುತ್ತದೆ. ಶಾಸಕರಿಗೆ ವಾಹನ ಸೌಲಭ್ಯ ಇಲ್ಲ. ಶಾಸಕ ಬಸ್‌ನಲ್ಲಿ ಎಲ್ಲ ಕಡೆ ಓಡಾಡಿ ಕೆಲಸ ಮಾಡಲು ಆಗುತ್ತದೆಯೇ? ಶಾಸಕರ ಆಪ್ತ ಸಹಾಯಕರ ಸಂಬಳ ಯಾರು ಪಾವತಿಸುವುದು? ಈ ಹಿನ್ನೆಲೆಯಲ್ಲಿ ಆಡಳಿತದಲ್ಲಿ ಬಹಳಷ್ಟು ಸುಧಾರಣೆಗಳು ಆಗಬೇಕಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜೈಲುಗಳಲ್ಲಿ ಜಾತಿಭೂತ- ಸುಪ್ರೀಮ್ ಕೋರ್ಟ್ ಕಳವಳ

ಶ್ರೀಕಾಂತ ಪೂಜಾರಿ ಬಂಧನ ವಿಚಾರವಾಗಿ ಮಾತನಾಡಿ, “1992ರಲ್ಲಿ ಹುಬ್ಬಳ್ಳಿ ನಗರದಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ ಪೂಜಾರಿ ಬಂಧಿಸಿರುವುದು ರಾಮಮಂದಿರ ಕರಸೇವೆ ಪ್ರಕರಣದಲ್ಲಿ. ಅದಕ್ಕೆ ನಾವು ಖಂಡನೆ ವ್ಯಕ್ತಪಡಿಸಿದೆವು. ಶ್ರೀಕಾಂತ ವಿರುದ್ಧದ ಬೇರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾವು ಮಾತಾಡಿಲ್ಲ, ಕ್ರಮ ಜರುಗಿಸುವುದಕ್ಕೆ ನಮ್ಮ ಆಕ್ಷೇಪ ಇಲ್ಲ” ಎಂದರು.

“ಶ್ರೀಕಾಂತ್‌ ಮನೆ ಪಕ್ಕದವರೊಬ್ಬರು (ವೃದ್ಧ) ಈ ಪ್ರಕರಣದಲ್ಲಿಇದ್ದರು. ಪೊಲೀಸರು ಆ ವೃದ್ಧನನ್ನು ಬಿಟ್ಟು ಶ್ರೀಕಾಂತ್‌ನನ್ನು ಕರೆತಂದಿರುವುದು ನಮಗೆ ಗೊತ್ತಾಯಿತು. ಶ್ರೀಕಾಂತನನ್ನು ಗುರಿಯಾಗಿಸಿಕೊಂಡು ಬಂಧಿಸಿದ್ದಾರೆ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...