ಸಿದ್ದರಾಮಯ್ಯ ವಿರುದ್ಧ ʼಹಲೊ ಅಪ್ಪ’ ಆ್ಯಪ್ ಬಳಸಿ ಪೋಸ್ಟರ್ ಅಭಿಯಾನ

Date:

  • ಚಿಕ್ಕಮಗಳೂರಿನಲ್ಲಿ ಪೋಸ್ಟರ್ ಅಂಟಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು
  • ಕಾಂಗ್ರೆಸ್ ಸರ್ಕಾರ ಮತ್ತು ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್‌ ಮೂಲಕ ಬಿಜೆಪಿ ವಾಗ್ದಾಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಡಾ. ಯತೀಂದ್ರ ನಡುವಿನ ಫೋನ್ ಸಂಭಾಷಣೆ ಆಧರಿಸಿ ಬಿಜೆಪಿ ಕಾರ್ಯಕರ್ತರಿಂದ ‘ಹಲೊ ಅಪ್ಪ’ ಆ್ಯಪ್ ಬಳಸಿ ಎಂಬ ಪೋಸ್ಟರ್ ಅಭಿಯಾನ ಆರಂಭವಾಗಿದೆ.

“ಹತ್ತು ನಿಮಿಷದಲ್ಲಿ ವರ್ಗಾವಣೆ ಬೇಕೆ? ಅದೂ ಒಂದೇ ಕರೆಯಲ್ಲಿ ಹಾಗಿದ್ದರೆ ‘ಹಲೋ ಅಪ್ಪ ಆ್ಯಪ್’ ಡೌನ್‌ಲೋಡ್ ಮಾಡಿ” ಎಂಬ ಬರಹವುಳ್ಳ ಜೊತೆಗೆ ಯತೀಂದ್ರ ಭಾವಚಿತ್ರದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಪೋಸ್ಟರ್‌ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಪೋಸ್ಟರ್ ಅಂಟಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಕಿಡಿ

ಈ ಬೆಳವಣಿಗೆಗೆ ಪೂರಕವಾಗಿ ಬಿಜೆಪಿ ಈ ಕುರಿತು ಎಕ್ಸ್ ವೇದಿಕೆಯಲ್ಲಿ ಕಾಂಗ್ರೆಸ್ ಸರ್ಕಾರ ಮತ್ತು ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್‌ ಮೂಲಕ ವಾಗ್ದಾಳಿ ನಡೆಸಿದೆ.

“ಕರ್ನಾಟಕದ ಶ್ಯಾಡೋ ಸಿಎಂ ಯತೀಂದ್ರ ಅವರು, “ಹಲೋ ಅಪ್ಪಾ- ನಾನು ಹೇಳಿದ್ದಷ್ಟೆ ಮಾಡಬೇಕು” ಎಂದು ಆವಾಜ್‌ ಮೇಲೆ ಆವಾಜ್‌ ಹಾಕಿದ್ದು, ಶಾಲೆಗಳಿಗೆ ಬಣ್ಣ ಬಳಿಸುವುದಕ್ಕಲ್ಲ ಬದಲಿಗೆ ತಮ್ಮ ಎಟಿಎಂ ಸರ್ಕಾರದ ಕಲೆಕ್ಷನ್‌ ಬಯಲಾಟಕ್ಕಾಗಿ ಎಂಬುದು ಸಾಕ್ಷಿ ಸಮೇತ ಸಾಬೀತಾಗಿದೆ” ಎಂದು ಕುಟುಕಿದೆ.

ಬಿಜೆಪಿ

“ನೆಲಕ್ಕೆ ಜಾರಿ ಬಿದ್ದರೂ ಮೀಸೆಗೆ ಮಣ್ಣು ಹತ್ತಿಲ್ಲ” ಎಂಬ ಪ್ರವೃತ್ತಿಯ ಸಿಎಂ ಸಿದ್ದರಾಮಯ್ಯ
ಅವರು ಇದಕ್ಕೂ ರಂಗ್‌ ಬಿರಂಗಿ ಕತೆಗಳನ್ನು ಹೆಣೆಯುತ್ತಿರುವುದು ಅಸಹ್ಯದ ಪರಮಾವಧಿ. “ಹಲೋ ಅಪ್ಪಾ” ಎಂದಿದ್ದು ವರುಣಾದ ಶಾಲೆಗಳಿಗೆ ಬಣ್ಣ ಬಳಿಸಲು ಎಂದು ಹಸಿ ಹಸಿ ಸುಳ್ಳಿನ ಸೌಧ ಕಟ್ಟಿದ್ದ ಸಿಎಂರನ್ನು, ಸಿದ್ದರಾಮಯ್ಯರವರು ಎಂದು ಕರೆಯಬೇಕೋ ಅಥವಾ ಸುಳ್ಳುರಾಮಯ್ಯರವರು ಎಂದು ಕರೆಯಬೇಕೋ ಎಂಬುದು ಸದ್ಯ ಆರೂವರೆ ಕೋಟಿ ಕನ್ನಡಿಗರಿಗಿರುವ ಗೊಂದಲ” ಎಂದು ಲೇವಡಿ ಮಾಡಿದೆ.

“ಸಿಎಂ ಸಿದ್ದರಾಮಯ್ಯ ಹಾಗೂ ಶ್ಯಾಡೋ ಸಿಎಂ ಯತೀಂದ್ರ ಸಿದ್ದರಾಮಯ್ಯ ಮತ್ತು ಡಮ್ಮಿ ಡಿಸಿಎಂ ಡಿ. ಕೆ. ಶಿವಕುಮಾರ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರ, ಸರ್ಕಾರದ ಶುರುವಾತಿನಿಂದ ಹಿಡಿದು ಇಲ್ಲಿಯವರೆಗೂ ಮಾಡಿದ್ದು ಬರೀ ಕಲೆಕ್ಷನ್-ಕಮಿಷನ್-ಕರಪ್ಷನ್” ಎಂದು ಆರೋಪಿಸಿದೆ.

“ಶ್ಯಾಡೋ ಸಿಎಂ ಯತೀಂದ್ರರವರು ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದರೂ ಅದಕ್ಕೆ ಸಿ.ಎಸ್.ಆರ್‌. ಎಂಬ ಕಪೋಲಕಲ್ಪಿತ ಕತೆಗಳನ್ನು ಕಟ್ಟಿದ್ದ ಸಿಎಂ ಸಿದ್ದರಾಮಯ್ಯ ‍& ಕೋ, ಈಗ ಏಕಾಏಕಿ ವಿವೇಕಾನಂದ ಎಂಬ ಪೊಲೀಸ್ ಇನ್ಸ್‌ಪೆಕ್ಟರ್‌ ಅವರನ್ನು ವರ್ಗಾವಣೆ ಪಟ್ಟಿಯಲ್ಲಿ ನಂಬರ್‌ 4 ರಲ್ಲಿ ಕೂರಿಸಿದ್ದು ಏಕೆ ಎಂಬ ಪ್ರಶ್ನೆಗೆ ಉತ್ತರಿಸಲು ಮಾತ್ರ ತಡಬಡಾಯಿಸುತ್ತಾರೆ” ಎಂದು ಹರಿಹಾಯ್ದಿದೆ.

“ಹೇರಳವಾಗಿ ತಪ್ಪುಗಳನ್ನು ಮಾಡುವುದು, ಆ ತಪ್ಪುಗಳನ್ನು ಮುಚ್ಚಿ ಹಾಕಲು ಸುಳ್ಳಿನ ಮಹಲುಗಳನ್ನೇ ನಿರ್ಮಿಸುವುದು ಸಿಎಂ ಸಿದ್ದರಾಮಯ್ಯರವರಿಗೆ ಹಾಗೂ ಕಾಂಗ್ರೆಸ್ಸಿಗರಿಗೆ ದೈನಂದಿನ ಕಾಯಕವಾಗಿಬಿಟ್ಟಿದೆ. ಕೊಂಚವೂ ನಾಚಿಕೆಯಿಲ್ಲದೆ ತಾವು ನುಡಿಯುವ ಸುಳ್ಳುಗಳನ್ನೇ ಸತ್ಯ ಎಂದು ವಾದಿಸುವುದು ಮುಖ್ಯಮಂತ್ರಿ ಹುದ್ದೆಗೆ ಶೋಭೆ ತರುವುದಿಲ್ಲ ಎಂಬ ಅಂಶವನ್ನು ಸಿದ್ದರಾಮಯ್ಯರವರು ಮನಗಂಡರೆ ಒಳಿತು” ಎಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...