ಆರು ತಿಂಗಳಲ್ಲೇ ಮತ್ತೊಮ್ಮೆ ಬಿಯರ್‌ ದರ ಹೆಚ್ಚಳ: ಅಬಕಾರಿ ಇಲಾಖೆ ಪ್ರಸ್ತಾವ

Date:

ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು (ಎಇಡಿ) ಶೇಕಡ ಹತ್ತರಷ್ಟು ಹೆಚ್ಚಿಸಲು ಅಬಕಾರಿ ಇಲಾಖೆ ಮುಂದಾಗಿದೆ.

ಕರ್ನಾಟಕ ಸರ್ಕಾರವು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಮತ್ತೊಮ್ಮೆ ಹೆಚ್ಚಿಸಲು ಪ್ರಸ್ತಾಪಿಸಿರುವುದಾಗಿ ವರದಿಯಾಗಿದ್ದು, 650 ಮಿ.ಲೀ. ಅಳತೆಯ ಪ್ರತಿ ಬಾಟಲಿ ಬಿಯರ್‌ನ ದರದಲ್ಲಿ ₹ 8ರಿಂದ ₹ 10ರವರೆಗೆ ಹೆಚ್ಚಳವಾಗಲಿದೆ.

ಕರ್ನಾಟಕ ಅಬಕಾರಿ (ಅಬಕಾರಿ ಸುಂಕ ಮತ್ತು ಶುಲ್ಕಗಳು) ನಿಯಮಗಳು, 1968ಕ್ಕೆ ತಿದ್ದುಪಡಿ ಮಾಡಲು ಕರಡು ಅಧಿಸೂಚನೆ ರೂಪಿಸಲಾಗಿದ್ದು, ಇದರಲ್ಲಿ ದರ ಹೆಚ್ಚಳವನ್ನು ಪ್ರಸ್ತಾಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕಾಗಿ ಕರ್ನಾಟಕ ಅಬಕಾರಿ (ಅಬಕಾರಿ ಸುಂಕಗಳು ಮತ್ತು ಶುಲ್ಕಗಳು) (ತಿದ್ದುಪಡಿ) ನಿಯಮಗಳು–2024ರ ಕರಡನ್ನು ಶನಿವಾರ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. 2023ರ ಜುಲೈ ತಿಂಗಳಲ್ಲಿ ಭಾರತೀಯ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ 20ರಷ್ಟು ಮತ್ತು ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ 10ರಷ್ಟು ಹೆಚ್ಚಳ ಮಾಡಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯುವಜನರ ವಿಶ್ವಾಸ ಉಳಿಸಿಕೊಳ್ಳುವುದೇ ಕೆಪಿಎಸ್‌ಸಿ?

ಆರು ತಿಂಗಳಲ್ಲೇ ಮತ್ತೊಮ್ಮೆ ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆ ಏರಿಕೆಗೆ ಪ್ರಕ್ರಿಯೆ ಆರಂಭಿಸಲಾಗಿದೆ. ಹೆಚ್ಚುವರಿ ಅಬಕಾರಿ ತೆರಿಗೆ ಏರಿಕೆಗೆ ಅವಕಾಶ ಕಲ್ಪಿಸುವ ಕರಡು ನಿಯಮಗಳಿಗೆ ಆಕ್ಷೇಪಣೆ ಸಲ್ಲಿಸಲು ಶನಿವಾರದಿಂದ ಏಳು ದಿನಗಳ ಕಾಲಾವಕಾಶ ನೀಡಲಾಗಿದೆ.

ದರ ಹೆಚ್ಚಳಕ್ಕೆ ಅವಕಾಶ ನೀಡುವ ಹೊಸ ನಿಯಮಗಳು ಈ ತಿಂಗಳ ಕೊನೆಯಲ್ಲಿ ಅಥವಾ ಫೆಬ್ರವರಿ ಆರಂಭದಲ್ಲಿ ಅಂತಿಮಗೊಳ್ಳುವ ಸಾಧ್ಯತೆಯಿದೆ ಎಂದು ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...