ಬಗರ್ ಹುಕುಂ | ವಿಲೇವಾರಿವಿಲ್ಲದೇ ಒಕ್ಕಲೆಬ್ಬಿಸುವಂತಿಲ್ಲ, ಬೆಳೆ ನಾಶ ಸಲ್ಲ: ಸಚಿವ ಕೃಷ್ಣ ಬೈರೇಗೌಡ

Date:

ಬಡ ಹಾಗೂ ಭೂ ರಹಿತ ರೈತರಿಗೆ ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಭೂ ಮಂಜೂರು ಮಾಡಲು ರಾಜ್ಯಾದ್ಯಂತ ಈವರೆಗೆ ಒಟ್ಟಾರೆ 185 ಸಮಿತಿಗಳನ್ನು ರಚಿಸಲಾಗಿದೆ. ರೈತರು ಭೂ ಮಂಜೂರಾತಿಗಾಗಿ ನಮೂನೆ 53, ನಮೂನೆ 57 ಅರ್ಜಿ ಹಾಕಿದ್ದರೆ, ಅರ್ಜಿ ಇತ್ಯರ್ಥ ಆಗುವ ಮೊದಲು ಅವರನ್ನು ಭೂಮಿಯಿಂದ ಒಕ್ಕಲೆಬ್ಬಿಸಲು ಸಾಧ್ಯವಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಸೋಮವಾರು ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕರಾದ ಶೈಲೇಂದ್ರ ಬೆಲ್ದಾಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಅರ್ಜಿ ಹಾಕಿರುವ ಕಡೆ ಬೆಳೆ ತೆಗೆದುಕೊಳ್ಳಲೂ ಸಹ ಅಧಿಕಾರಿಗಳು ಅಡ್ಡಿಪಡಿಸಬಾರದು. ಈ ಸಂಬಂಧ ಸ್ಪಷ್ಟವಾದ ಕಾನೂನನ್ನು ರೂಪಿಸಲಾಗಿದೆ. ಭಾಗಶಃ ಬಗರ್ ಹುಕುಂ ಯೋಜನೆಗೆ ಸಂಬಂಧಿಸಿ ಇಷ್ಟು ಸ್ಪಷ್ಟವಾಗಿ ಹಿಂದೆ ಯಾವತ್ತು ಸುತ್ತೋಲೆ ಹೊರಡಿಸಿಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

“ಬಡ ಹಾಗೂ ಭೂ ರಹಿತ ರೈತರಿಗೆ ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಭೂ ಮಂಜೂರು ಮಾಡಲು ರಾಜ್ಯಾದ್ಯಂತ ಈವರೆಗೆ 185 ಸಮಿತಿಗಳನ್ನು ರಚಿಸಿ, ಅರ್ಜಿ ವಿಲೇವಾರಿಯನ್ನೂ ತ್ವರಿತಗೊಳಿಸಲಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲೇ ಇದೊಂದು ಹೊಸ ದಾಖಲೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ, ಅತಿಹೆಚ್ಚು ಬಗರ್ ಹುಕುಂ ಸಮಿತಿಗಳನ್ನು ರಚಿಸಿದ್ದು ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ. ಅಲ್ಲದೆ, ಅರ್ಜಿ ವಿಲೇವಾರಿಗೊಳಿಸಿ ಅರ್ಹ ರೈತರಿಗೆ ಭೂ ಮಂಜೂರುಗೊಳಿಸುವ ಪ್ರಕ್ರಿಯೆಗೂ ಸಾಕಷ್ಟು ವೇಗ ತುಂಬಲಾಗುತ್ತಿದೆ. ಸ್ವತಃ ನಾನೇ ನೇರವಾಗಿ ಪರಿಶೀಲಿಸಿ ವಿಲೇ ಕೆಲಸಗಳನ್ನು ಶೀಘ್ರ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ಸಂಬಂಧ ಅಧಿಕಾರಿಗಳಿಗೆ ಗಡುವು ನೀಡಿದ್ದು ನಿಜ, ಸರ್ಕಾರವೇ ಅದನ್ನು ಬೆನ್ನಟ್ಟಿರುವುದೂ ನಿಜ” ಎಂದರು.

ಈ ವೇಳೆ ಮಧ್ಯಪ್ರವೇಶಿಸಿದ ಶಾಸಕ ಶೈಲೇಂದ್ರ ಬೆಲ್ದಾಳೆ, “ರಾಜ್ಯದಲ್ಲಿ ಎಲ್ಲೂ ಸರಿಯಾಗಿ ಬಗರ್ ಹುಕುಂ ಸಮಿತಿ ರಚಿಸಿಯೇ ಇಲ್ಲ. ಬೀದರ್ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದು, ಆ ಕಾರಣಕ್ಕಾಗಿಯೇ ಸರ್ಕಾರ ಈವರೆಗೂ ಬಗರ್ ಹುಕುಂ ಸಮಿತಿ ಸಚಿಸಿಲ್ಲವೇ..? ಎಂದು ಮರುಪ್ರಶ್ನೆ ಹಾಕಿದರು.

ಶಾಸಕರ ಅನುಮಾನಗಳಿಗೆ ಸಮಂಜಸ ಉತ್ತರದ ಮೂಲಕ ತೆರೆ ಎಳೆಯಲು ಮುಂದಾದ ಸಚಿವರು, “ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಸಮಿತಿ ರಚನೆ ಆಗಿಲ್ಲ, ಆಗಬೇಕು ಎಂದು ಒಪ್ಪಿಕೊಳ್ಳುತ್ತೇನೆ. ಅಲ್ಲದೆ, ಆದಷ್ಟು ಶೀಘ್ರದಲ್ಲಿ ಅವರ ಕ್ಷೇತ್ರದಲ್ಲಿ ಸಮಿತಿ ರಚನೆಗೆ ಸಂಬಂಧಿಸಿ ಕ್ರಮ ತೆಗೆದುಕೊಳ್ಳಲು ನಾನು ಬದ್ಧನಾಗಿದ್ದೇನೆ. ಆದರೆ, ರಾಜ್ಯಾದ್ಯಂತ ಎಲ್ಲೂ ಬಗರ್ ಹುಕುಂ ಸಮಿತಿಯೇ ರಚನೆಯಾಗಿಲ್ಲ ಎಂದು ಆಧಾರವಿಲ್ಲದೆ ಹೇಳುವುದು ಸರಿಯಲ್ಲ. ರಾಜ್ಯಾದ್ಯಂತ ದಾಖಲೆಯ 185 ಸಮಿತಿ ರಚನೆ ಆಗಿದೆ. ಆರ್‌ಟಿಐನಲ್ಲಿ ಪ್ರಶ್ನೆ ಕೇಳಿದರೂ ಸೂಕ್ತ ಮಾಹಿತಿ ನೀಡುತ್ತೇನೆ” ಎಂದು ಸವಾಲೆಸೆದರು.

ಮುಂದುವರೆದು, “ಬೀದರ್ ಜಿಲ್ಲೆಯ ನಾಲ್ಕು ತಾಲೂಕುಗಳಷ್ಟೇ ಅಲ್ಲ, ಏಳೂ ತಾಲೂಕುಗಳಲ್ಲೂ ಬಗರ್ ಹುಕುಂ ಸಮಿತಿ ರಚಿಸಲಾಗಿಲ್ಲ. ಅಲ್ಲದೆ, ರಾಜ್ಯದ ಇನ್ನೂ 13 ಕ್ಷೇತ್ರಗಳಲ್ಲಿ ಸಮಿತಿ ರಚನೆ ಕೆಲಸ ಬಾಕಿ ಇದೆ. ಈ ಸಂಬಂಧ ನಾನು ಅವರಿವರ ಮೇಲೆ ಸಬೂಬು ಹೇಳುವುದಿಲ್ಲ. ಏಕೆಂದರೆ ಇದು ನನ್ನ ಜವಾಬ್ದಾರಿ. ಹೀಗಾಗಿ ಬೀದರ್ ದಕ್ಷಿಣ ಸೇರಿದಂತೆ ಬಗರ್ ಹುಕುಂ ಸಮಿತಿ ರಚನೆಗೆ ಬಾಕಿ ಇರುವ ಎಲ್ಲಾ ಕ್ಷೇತ್ರದಲ್ಲೂ ಮುಂದಿನ ಹತ್ತು ದಿನಗಳಲ್ಲಿ ಸಮಿತಿ ರಚಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲು ನಾನು ಬದ್ಧನಾಗಿದ್ದೇನೆ” ಎಂದು ಉತ್ತರಿಸಿದರು.

ಅರ್ಜಿ ವಿಲೇಯಾಗದೆ ರೈತರಿಗೆ ತೊಂದರೆ ಸಲ್ಲ..!

ಬಗರ್ ಹುಕುಂ ಯೋಜನೆಯ ಅಡಿ ಸಲ್ಲಿಸಲಾಗಿರುವ ನಮೂನೆ 53 ಹಾಗೂ ನಮೂನೆ 57 ಅರ್ಜಿ ವಿಲೇವಾರಿಯಾಗದೆ ಅಧಿಕಾರಿಗಳು ರೈತರಿಗೆ ತೊಂದರೆ ನೀಡುವುದು ಅಥವಾ ಒಕ್ಕಲೆಬ್ಬಿಸುವಂತಿಲ್ಲ. ರಾಜ್ಯದಲ್ಲಿ ಇಂತಹ ಯಾವುದೇ ಪ್ರಕರಣ ಕಂಡು ಬಂದರೆ ನನ್ನ ಗಮನಕ್ಕೆ ತನ್ನಿ ಎಂದು ಸಚಿವ ಕೃಷ್ಣ ಬೈರೇಗೌಡ ಸದನಕ್ಕೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...