ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರತ್ಯೇಕ ಜಂಟಿ ಕೃಷಿ ನಿರ್ದೇಶಕರ ಕಚೇರಿ ಮಂಜೂರು

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರತ್ಯೇಕ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸ್ಥಾಪಿಸಬೇಕೆಂಬ ರೈತರ ಬಹುದಿನಗಳ ಬೇಡಿಕೆಯನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಈಡೇರಿಸಿದ್ದು, ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.

ಸಚಿವರ ಸೂಚನೆ ಮೇರೆಗೆ ಕೃಷಿ ಇಲಾಖೆಯಲ್ಲಿನ ಕರ್ನಾಟಕ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮ ನಿಯಮಿತ ಸಂಸ್ಥೆ (ಕೆಮಿಕ್) ಸಮಾಪನಗೊಳಿಸಿದಾಗ ಲಭ್ಯವಾದ ಜಂಟಿ ಕೃಷಿ ನಿರ್ದೇಶಕರ ಹುದ್ದೆಯನ್ನು ಪೂರಕ ಸಿಬ್ಬಂದಿಯೊಡನೆ ಜಂಟಿ ಕೃಷಿ ನಿರ್ದೇಶಕರು, ಬೆಂಗಳೂರು ಗ್ರಾಮಾಂತರ ಎಂದು ಮರುವಿನ್ಯಾಸಗೊಳಿಸಿ ಆದೇಶ ಹೊರಡಿಸಲಾಗಿದೆ.

ಹುದ್ದೆಗಳ ವಿವರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ಗ್ರಾಮಾಂತರ ಕೃಷಿ ಕಚೇರಿಗೆ ಜಂಟಿ ಕೃಷಿ ನಿರ್ದೇಶಕರು-1, ಸಹಾಯಕ ಕೃಷಿ ನಿರ್ದೇಶಕರು-2, ಕೃಷಿ ಅಧಿಕಾರಿ-3, ಸಹಾಯ ಆಡಳಿತಾಧಿಕಾರಿ-1, ಅಧೀಕ್ಷಕರು-1, ಪ್ರಥಮ ದರ್ಜೆ ಸಹಾಯಕರು-1, ದ್ವಿತೀಯ ದರ್ಜೆ ಸಹಾಯಕರು-2, ಬೆರಳಚ್ಚುಗಾರರು-1, ವಾಹನ ಚಾಲಕರು-2, ಗ್ರೂಪ್ ಡಿ-3 ಸೇರಿದಂತೆ 17 ಅಧಿಕಾರಿ ಸಿಬ್ಬಂದಿಗಳ ಹುದ್ದೆಗಳನ್ನು ಸೃಜಿಸಲಾಗಿದೆ. ಇದಲ್ಲದೇ 13 ಹುದ್ದೆಗಳನ್ನೊಳಗೊಂಡ ಬೆಂಗಳೂರು ಗ್ರಾಮಾಂತರ ಉಪ ಕೃಷಿ ನಿರ್ದೇಶಕರ ಕಚೇರಿ ಕೂಡಾ ಕಾರ್ಯನಿರ್ವಹಿಸಲಿದೆ. ಇದರಿಂದಾಗಿ ಒಟ್ಟು 30 ಅಧಿಕಾರಿ ಸಿಬ್ಬಂದಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ರೈತರ ಸೇವೆಗೆ ಲಭ್ಯವಾಗಲಿದ್ದಾರೆ.

ಜಂಟಿ ಕೃಷಿ ನಿರ್ದೇಶಕ ಕಚೇರಿಗಳ ಕೇಂದ್ರ ಸ್ಥಾನ

ಜಂಟಿ ಕೃಷಿ ನಿರ್ದೇಶಕರು ಬೆಂಗಳೂರು ನಗರ ಜಿಲ್ಲೆ ಕಚೇರಿಯನ್ನು ಹಾಲಿ ಇರುವ ಬನಶಂಕರಿಯೇ ಮುಂದುವರೆಸಿದ್ದು, ಜಂಟಿ ಕೃಷಿ ನಿರ್ದೇಶಕರು, ಬೆಂಗಳೂರು ಹುದ್ದೆಯನ್ನು ಜಂಟಿ ಕೃಷಿ ನಿರ್ದೇಶಕರು, ಬೆಂಗಳೂರು ಗ್ರಾಮಾಂತರ ಎಂದು ಪುನರ್ ನಾಮಕರಣ ಮಾಡಲಾಗಿದೆ. ಇವರ ಕಚೇರಿಯನ್ನು ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ಇಲ್ಲಿಗೆ ಸ್ಥಳಾಂತರ ಮಾಡಲು ನಿರ್ದೇಶನ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಇಲಾಖೆಯ ಎಲ್ಲಾ ಕಚೇರಿಗಳ ಉಸ್ತುವಾರಿ ಈ ಜಂಟಿ ಕೃಷಿ ನಿರ್ದೇಶಕರ ವ್ಯಾಪ್ತಿಗೆ ಒಳಪಡಲಿದೆ.

ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ದೊಡ್ಡಬಳ್ಳಾಪುರ, ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಯಲಹಂಕ ಮತ್ತು ಆನೇಕಲ್ ತಾಲ್ಲೂಕುಗಳು ಸೇರಿ ಒಂದೇ ಜಂಟಿ ಕೃಷಿ ನಿರ್ದೇಶಕರ ಹುದ್ದೆ ಇತ್ತು, ಈ ಕಚೇರಿ ಅಧೀನದಲ್ಲಿ 11 ರೈತ ಸಂಪರ್ಕ ಕೇಂದ್ರಗಳು (ಬೆಂಗಳೂರು ಉತ್ತರ 4+ ಆನೇಕಲ್-7) ಕಾರ್ಯ ನಿರ್ವಹಿಸುತ್ತಿವೆ. ಜೊತೆಗೆ ರಾಮಕೃಷ್ಣ ಕೃಷಿ ಪಾಠಶಾಲೆ, ಪೀಡೆನಾಶಕ ಶೇಷಾಂಶ ಪ್ರಯೋಗಾಲಯ, ಮಣ್ಣು ಪರೀಕ್ಷಾ ಪ್ರಯೋಗಾಲಯಗಳು ಸಹ ಕಾರ್ಯ ನಿರ್ವಹಿಸುತ್ತಿವೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಿಗೆ ಪ್ರತ್ಯೇಕ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಇರುವುದರಿಂದ, ಎರಡು ಜಿಲ್ಲೆಗಳಿಗೆ ಸಂಬಂಧಿಸಿದಂತೆ ಎಲ್ಲ ಸಭೆಗಳಲ್ಲಿ ಒಬ್ಬರೇ ಜಂಟಿ ಕೃಷಿ ನಿರ್ದೇಶಕರೇ ಭಾಗವಹಿಸಬೇಕಾಗಿತ್ತು.

ಇದರಿಂದಾಗಿ, ಎರಡು ಜಿಲ್ಲೆಗಳ ಕೃಷಿ ಚಟುವಟಿಕೆಗಳನ್ನು ಸಕಾಲದಲ್ಲಿ ಕೈಗೊಂಡು ಇಲಾಖೆಯ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವಲ್ಲಿ ಹೆಚ್ಚಿನ ಕಾರ್ಯ ಒತ್ತಡ ಉಂಟಾಗುತ್ತಿತ್ತು, ಇಲಾಖೆಯ ಸವಲತ್ತುಗಳನ್ನು ರೈತರಿಗೆ ತಲುಪಿಸುವಲ್ಲಿ ಕಷ್ಟಸಾಧ್ಯವಾಗುತ್ತಿತ್ತು. ಹೊಸ ಜಂಟಿ ಕೃಷಿ ನಿರ್ದೇಶಕರ ಹುದ್ದೆ ಸೃಜನೆಯಾದ ನಂತರ ಈ ಎಲ್ಲಾ ಸಮಸ್ಯೆಗಳು ಕೊನೆಯಾಗಿ ರೈತರಿಗೆ ಸಕಾಲದಲ್ಲಿ ಸೇವೆ ದೊರೆಯಲು ಅನುಕೂಲವಾಗಲಿದೆ.

ಕೃಷಿ ಇಲಾಖೆಯ ಕಾರ್ಯಕ್ರಮಗಳನ್ನು ಸಕಾಲದಲ್ಲಿ ರೈತರಿಗೆ ತಲುಪಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರತ್ಯೇಕ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಾರಂಭವಾಗಲಿದ್ದು, ಗ್ರಾಮಾಂತರ ಜಿಲ್ಲೆಯ ಜನರಿಗೆ ಇಲಾಖೆಯ ಸವಲತ್ತುಗಳು ಮತ್ತು ತಾಂತ್ರಿಕ ನೆರವು ಶೀಘ್ರವಾಗಿ ದೊರೆಯಲು ನೆರವಾಗುತ್ತದೆ. ಅಲ್ಲದೇ ರಾಜ್ಯಾದ್ಯಂತ ಖಾಲಿ ಇರುವ ಹುದ್ದೆಗಳ ಭರ್ತಿ ಪ್ರಕ್ರಿಯೆ ಚಾಲನೆಯಲ್ಲಿದ್ದು, ಶೀಘ್ರವಾಗಿ 956 ಕೃಷಿ ಅಧಿಕಾರಿಗಳ ಹುದ್ದೆಯನ್ನು ಕೆ.ಪಿ.ಎಸ್.ಸಿ ಮೂಲಕ ಭರ್ತಿಗೆ ಕ್ರಮಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವರು ಚಲುವರಾಯಸ್ವಾಮಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...