ಚುನಾವಣೆ 2023 | ‘ತೆನೆ’ ಹೊತ್ತ ಅಪ್ಪನೆದುರು ‘ಕಮಲ’ ಹಿಡಿದ ಮಗ; ಗೊಂದಲದಲ್ಲಿ ಚಳ್ಳಕೆರೆ ಕ್ಷೇತ್ರದ ಜನ

Date:

  • ಜಿಲ್ಲೆಯಲ್ಲಿ ಮೊಟ್ಟ ಮೊದಲ ಭಾರಿಗೆ ಬಿಜೆಪಿ ಬಾವುಟ ಹಾರಿಸಿದ್ದ ಶಾಸಕ
  • ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಸವರಾಜ್‌ ಮಂಡಿಮಠ್

ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಚಿತ್ರದುರ್ಗ ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿಸಿದ್ದ ಶಾಸಕ ಬಸವರಾಜ್ ಮಂಡಿಮಠ್‌ ಕಳೆದ ಕೆಲವು ದಿನಗಳ ಹಿಂದೆ ಜೆಡಿಎಸ್‌ ಸೇರಿದ್ದಾರೆ. ಜೆಡಿಎಸ್‌ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದಾರೆ. ಆದರೆ, ಅವರ ಮಗ ಸೋಮಶೇಖರ್ ಮಂಡಿಮಠ್ ಬುಧವಾರ ಬಿಜೆಪಿ ಅಭ್ಯರ್ಥಿಯೊಂದಿಗೆ ಕಾಣಿಸಿಕೊಂಡಿದ್ದಾರೆ. ಅಪ್ಪ ಜೆಡಿಎಸ್‌ನಲ್ಲಿ ಮಗ ಬಿಜೆಪಿಯಲ್ಲಿ ಕಾಣಿಸಿಕೊಂಡಿರುವುದು ಕ್ಷೇತ್ರದ ಜನರು ಗೊಂದಲಕ್ಕೀಡು ಮಾಡಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಸವರಾಜ ಮಂಡಿಮಠ್ ಇತ್ತೀಚೆಗೆ ಜೆಡಿಎಸ್‌ ಸೇರಿ, ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ ಪರ ಪ್ರಚಾರ ನಡೆಸುತ್ತಿದ್ದರು. ತಂದೆಗೆ ಸಾಥ್‌ ನೀಡಿದ್ದ ಮಗ ಸೋಮಶೇಖರ್ ಮಂಡಿಮಠ್ ಕೂಡ ಜೆಡಿಎಸ್‌ನಲ್ಲಿ ತಂದೆಯೊಂದಿಗೆ ಕಾಣಿಸಿಕೊಂಡಿದ್ದರು.

ಆದರೆ, ಬುಧವಾರ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ಸೋಮಶೇಖರ್ ಮಂಡಿಮಠ್ ಬಿಜೆಪಿ ಅಭ್ಯರ್ಥಿಯೊಂದಿಗೆ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಶಾಸಕ ಬಸವರಾಜ್ ಮಂಡಿಮಠ್ ಕುಟುಂಬದವರು ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ತನ್ನದೇ ಆದ ಪ್ರಭಾವ ಹೊಂದಿದ್ದಾರೆ. ಕ್ಷೇತ್ರವು ಪುನರ್‌ವಿಂಗಡಣೆ ಆದ ನಂತರ, ಕ್ಷೇತ್ರ ಇಲ್ಲದಂತಾಗಿ, ಚಳ್ಳಕೆರೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದರು.

ಈ ಸುದ್ದಿ ಓದಿದ್ದೀರಾ? : ಚುನಾವಣೆ 2023 | ಜನಾರ್ದನ ರೆಡ್ಡಿ ಪತ್ನಿಯ ಘೋಷಿತ ಆಸ್ತಿ ₹250 ಕೋಟಿ

ಕಳೆದ ಚುನಾವಣೆಯಲ್ಲಿಯೂ ಕೂಡ ಬಿಜೆಪಿ ಅಭ್ಯರ್ಥಿ ಪರ ಗುರುತಿಸಿಕೊಂಡಿದ್ದರು. ಆದರೆ, ಇದ್ದಕಿದ್ದಂತೆ ಚುನಾವಣಾ ಕೊನೆಯಲ್ಲಿ ಅಂತರ ಕಾಯ್ದಕೊಂಡು ಬಿಜೆಪಿ ಅಭ್ಯರ್ಥಿ ಸೋಲಿಗೆ ಕಾರಣರಾಗಿದ್ದರು. ಜೊತೆಗೆ ಕಳೆದ ಐದು ವರ್ಷಗಳಿಂದ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು.

ಕಳೆದ ಕೆಲವು ದಿನಗಳ ಹಿಂದೆ ಅಭ್ಯರ್ಥಿ ರವೀಶ್‌ ನೇತೃತ್ವದಲ್ಲಿ ಜೆಡಿಎಸ್‌ ಸೇರಿ ಕುಮಾರಸ್ವಾಮಿ ಜೊತೆಗೆ ಪಂಚರತ್ನ ಯಾತ್ರೆಯಲ್ಲಿ ಬಸವರಾಜ್ ಮಂಡಿಮಠ್ ಕಾಣಿಸಿಕೊಂಡಿದ್ದರು.

ಈ ನಡುವೆ, ಬುಧವಾರ ನಡೆದ ಅನಿರೀಕ್ಷಿತ ಬೆಳವಣಿಗೆಯಿಂದಾಗಿ ಕ್ಷೇತ್ರದ ಜನರು ಅಪ್ಪನ ಪರ ನಿಲ್ಲಬೇಕೋ ಅಥವಾ ಮಗನ ಪರ ನಿಲ್ಲಬೇಕೋ ಎಂಬುವುದನ್ನು ತಿಳಿಯದೇ ಗೊಂದಲಕ್ಕೀಡಾದರೆ, 2 ಪಕ್ಷದ ಕಾರ್ಯಕರ್ತರಿಗೆ ಈ ಘಟನೆ ಇರುಸು ಮುರುಸು ತಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...