ಆಧಾರ್‌ – ಪ್ಯಾನ್‌ ಕಾರ್ಡ್‌ ಜೋಡಣೆ | ಇದು ಹಗಲು ದರೋಡೆ‌ ಅಲ್ಲದೆ ಮತ್ತೇನು: ಜೆಡಿಎಸ್ ಪ್ರಶ್ನೆ

Date:

  • ಆಧಾರ್ ಜೋಡಿಸದಿದ್ದರೆ ದಂಡ ವಿಧಿಸಿ ಎನ್ನುವ ಕಾನೂನು ಎಲ್ಲಿದೆ
  • ಕೇಂದ್ರ ಸರ್ಕಾರದ್ದು ಸರ್ವಾಧಿಕಾರಿ ನಡೆ ಎಂದ ಜೆಡಿಎಸ್‌

ಸಾವಿರ ರೂಪಾಯಿ ದುಬಾರಿ ಶುಲ್ಕದೊಂದಿಗೆ ಆಧಾರ್ ಮತ್ತು ಪ್ಯಾನ್‌ ಕಾರ್ಡ್‌ ಜೋಡಣೆ ಮಾಡಬೇಕೆಂದಿರುವ ಕೇಂದ್ರ ಸರ್ಕಾರದ ನಿರ್ಧಾರ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್‌ “ಇದು ಹಗಲು ದರೋಡೆ ಅಲ್ಲದೆ ಮತ್ತೇನು?” ಎಂದು ಪ್ರಶ್ನಿಸಿದೆ.

ಪ್ಯಾನ್‌ ಮತ್ತು ಆಧಾರ್ ಲಿಂಕ್‌ ಮಾಡುವ ದಿನಾಂಕವನ್ನು ಮಾರ್ಚ್ 31 ಕೊನೆಯ ದಿನಾಂಕ ಎಂದು ಹೇಳಲಾಗಿತ್ತು. ಆದರೆ, ಜೂನ್‌ 30ರವರೆಗೆ ಸರ್ಕಾರ ಗಡುವು ವಿಸ್ತರಿಸಿದೆ. ದುಬಾರಿ ಶುಲ್ಕದೊಂದಿಗೆ ಪ್ಯಾನ್‌ ಜೋಡಣೆ ಮಾಡುವ ಪ್ರಕ್ರಿಯೆ ವ್ಯಾಪಕ ಟೀಕೆಗೆ ಗುರಿಯಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್‌, “ಆಧಾರ್ ಮತ್ತು ಪ್ಯಾನ್ ಕಾರ್ಡ್ ಜೋಡಣೆ ಮಾಡಲು ಸಾವಿರ ರೂಪಾಯಿ ಶುಲ್ಕ ನಿಗದಿ ಮಾಡಿರುವುದು ಹಗಲು ದರೋಡೆ‌ ಅಲ್ಲದೆ ಮತ್ತೇನು? ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಜನಸಾಮಾನ್ಯರ ದುಡ್ಡು ಈ ರೀತಿ ಸುಲಿಗೆ ‌ಮಾಡುವುದು ಅಭ್ಯಾಸವಾಗಿಬಿಟ್ಟಿದೆ. ಇವರನ್ನು ಅಧಿಕಾರಕ್ಕೆ ತಂದು ಜನಸಾಮಾನ್ಯರು ಪರಿತಪಿಸುತ್ತಿದ್ದಾರೆ” ಎಂದು ವ್ಯಂಗ್ಯವಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಕಲಿ ಪ್ಯಾನ್ ಕಾರ್ಡು ಹೊಂದಿದವರನ್ನು ಹಿಡಿಯಲು ಈ ಕ್ರಮ ಎಂದು ಪ್ರಲಾಪ‌ ಕೊಚ್ಚುವವರೆ, ನಾಲ್ಕು ಜನ ಕಳ್ಳರನ್ನು ಹಿಡಿಯಲು ಸಕಲ ಜನಸಾಮಾನ್ಯರೇಕೆ ಶುಲ್ಕ ತೆರಬೇಕು? ಇದನ್ನು ದುಡ್ಡು ಕೊಟ್ಟು ಮಾಡಿಸಿಕೊಳ್ಳುವಂತೆ ಕಡ್ಡಾಯಗೊಳಿಸಿದ್ದು ಏಕೆ? ಹೀಗೆ ಸಾಮಾನ್ಯರ ಜೇಬಿಗೆ ಕತ್ತರಿ ಹಾಕುವ ವ್ಯವಸ್ಥೆಯೇ ಜನದ್ರೋಹಿಯಾದದ್ದು. ನಾಚಿಕೆಯಾಗಬೇಕು” ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿದೆ.

“ಈ ಜೋಡಣೆ ಪ್ರಕ್ರಿಯೆ ಈ ತಿಂಗಳೊಳಗೆ ಮಾಡದಿದ್ದರೆ 10 ಸಾವಿರ ರೂ. ದಂಡ ತೆರಬೇಕಂತೆ! ಪ್ಯಾನ್ ಕಾರ್ಡ್‌ಗೆ ಆಧಾರ್ ಜೋಡಿಸದಿದ್ದರೆ ಅಥವಾ ತಡವಾಗಿ ಜೋಡಿಸುವುದಕ್ಕೆ ದಂಡ ವಿಧಿಸಲು ಯಾವ ಕಾನೂನಿನಲ್ಲಿ ಅವಕಾಶವಿದೆ? ಇದು ಸರ್ವಾಧಿಕಾರಿ ನಡೆ. ಹೇಳುವವರು-ಕೇಳುವವರು ಇಲ್ಲದ ಕುಸಿದ ವ್ಯವಸ್ಥೆಗೆ ಹಿಡಿದ ಕನ್ನಡಿ” ಎಂದು ಹೇಳಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...