ಅರವಿಂದ್ ಕೇಜ್ರಿವಾಲ್ ಬಂಧನ ವಿರೋಧಿಸಿ ಬೃಹತ್ ಪ್ರತಿಭಟನೆ; ವಿಪಕ್ಷಗಳು ಸಜ್ಜು

Date:

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಖಂಡಿಸಿ ವಿಪಕ್ಷಗಳು ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿವೆ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖಂಡೆ, ಸಚಿವೆ ಅತಿಶಿ ಘೋಷಿಸಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ವಿರುದ್ಧವಾಗಿ ಸ್ಪರ್ಧಿಸಲು ಸಜ್ಜಾಗಿರುವ ‘ಇಂಡಿಯಾ’ ಮೈತ್ರಿಕೂಟದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂಬ ವರದಿಗಳ ಮಧ್ಯೆ ಅತಿಶಿ ಪತ್ರಿಕಾಗೋಷ್ಠಿ ನಡೆಸಿ ಈ ಹೇಳಿಕೆಯನ್ನು ನೀಡಿದ್ದಾರೆ. ಈ ಪ್ರತಿಭಟನೆಯಲ್ಲಿ ಎಎಪಿ ಮಾತ್ರವಲ್ಲದೆ ಉಳಿದ ವಿಪಕ್ಷಗಳ ನಾಯಕರುಗಳು ಕೂಡಾ ಭಾಗಿಯಾಗಲಿದ್ದಾರೆ.

ಇದನ್ನು ಓದಿದ್ದೀರಾ?   ದೆಹಲಿ ಅಬಕಾರಿ ನೀತಿ ಪ್ರಕರಣ; ಕೇಜ್ರಿವಾಲ್‌ ಮತ್ತೆ 4 ದಿನ ಇಡಿ ವಶಕ್ಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂಡಿಯಾ ಮೈತ್ರಿಕೂಟ ಈಗ ಒಂದಾಗಿದೆ. ಅರವಿಂದ್ ಕೇಜ್ರಿವಾಲ್‌ ಅವರನ್ನು ಬಂಧಿಸಿದಾಗ ಪ್ರಮುಖ ಕಾಂಗ್ರೆಸ್ ನಾಯಕರುಗಳು ಕೂಡಾ ಅಲ್ಲಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ಮೈತ್ರಿಕೂಟದ ಎಲ್ಲಾ ನಾಯಕರು ಧ್ವನಿ ಎತ್ತಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಬಂಧನವು ಪ್ರಜಾಪ್ರಭುತ್ವದ ಕೊಲೆಗಾಗಿ ಮಾಡಲಾದ ಕೊನೆಯ ದಾಳಿಯಾಗಿದೆ. ನಾಳೆ ಇದರ ವಿರುದ್ಧ ಪ್ರತಿಪಕ್ಷಗಳು ಸಹ ಧ್ವನಿ ಎತ್ತಲಿವೆ” ಎಂದು ಹೇಳಿದರು.

ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯವು ಕಳೆದ ವಾರ ಬಂಧಿಸಿದೆ. 2021-22ರ ಪ್ರಕರಣ ಇದಾಗಿದ್ದು ದೆಹಲಿ ಸರ್ಕಾರವು ಅಬಕಾರಿ ನೀತಿಯನ್ನು ರೂಪಿಸುವಾಗ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಮಾಡಿದೆ ಎಂಬ ಆರೋಪಿಸಲಾಗಿದೆ. ನಂತರ ಈ ಅಬಕಾರಿ ನೀತಿಯನ್ನು ರದ್ದುಗೊಳಿಸಲಾಗಿದೆ.

ಇದನ್ನು ಓದಿದ್ದೀರಾ? ಅಬಕಾರಿ ನೀತಿ ಪ್ರಕರಣದ ಸಾಕ್ಷಿಗೂ ಬಿಜೆಪಿಗೂ ಸಂಬಂಧವಿದೆ: ಎಎಪಿ

ಇನ್ನು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಮಹಾ ರ್‍ಯಾಲಿಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಪಿಯ ಶರದ್ ಪವಾರ್, ಶಿವಸೇನೆಯ ಉದ್ಧವ್ ಠಾಕ್ರೆ, ಎಸ್‌ಪಿಯ ಅಖಿಲೇಶ್ ಯಾದವ್ ಮತ್ತು ಆರ್‌ಜೆಡಿಯ ತೇಜಸ್ವಿ ಯಾದವ್ ಸೇರಿದಂತೆ ಭಾರತದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...