ದೆಹಲಿ ಮಾಜಿ ಸಿಎಂ ಆತಿಶಿ ಬಂಧಿಸಲಾಗಿದೆ ಎಂದ ಎಎಪಿ: ಪೊಲೀಸರ ನಕಾರ

Date:

ದೆಹಲಿಯ ಕಲ್ಕಾಜಿಯ ಭೂಮಿಹೀನ್ ಶಿಬಿರದ ನಿವಾಸಿಗಳನ್ನು ಭೇಟಿ ಮಾಡಲು ಹೋದಾಗ ದೆಹಲಿ ಮಾಜಿ ಮುಖ್ಯಮಂತ್ರಿ, ಆಮ್‌ ಆದ್ಮಿ ಪಕ್ಷದ ನಾಯಕಿ ಆತಿಶಿ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಎಪಿ ಹೇಳಿಕೊಂಡಿದೆ. ಆದರೆ ಪೊಲೀಸರು ಮಾತ್ರ ಇದನ್ನು ನಿರಾಕರಿಸಿದ್ದಾರೆ.

ಜುಗ್ಗಿ-ಜೋಪ್ರಿ ಶಿಬಿರದಲ್ಲಿರುವ ಮನೆಗಳಿಗೆ ದೆಹಲಿ ಅಭಿವೃದ್ಧಿ ಪ್ರಾಧಿಕಾರವು ನೋಟಿಸ್ ಅಂಟಿಸಿದೆ. ಈ ಮನೆಯು ಅತಿಕ್ರಮಣವಾಗಿದ್ದು ಮೂರು ದಿನಗಳಲ್ಲಿ ಮನೆ ಖಾಲಿ ಮಾಡಬೇಕು. ಇಲ್ಲವಾದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನೋಟಿಸ್‌ನಲ್ಲಿ ಎಚ್ಚರಿಸಲಾಗಿದೆ.

ಇದನ್ನು ಓದಿದ್ದೀರಾ? ‘ದೆಹಲಿ ಸಿಎಂ ಆತಿಶಿ ಬಂಧನಕ್ಕೆ ಸಿದ್ಧತೆ!’

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೂನ್ ಮತ್ತು ಜುಲೈ 2023ರಲ್ಲಿ, ಈ ವರ್ಷ ಮೇ ತಿಂಗಳಲ್ಲಿ ಮೂರು ಬಾರಿ ನೆಲಸಮ ಕಾರ್ಯಾಚರಣೆ ಮಾಡಲಾಗಿದೆ. ಇಲ್ಲಿ ನೆಲೆಸಿರುವವರು ಹೆಚ್ಚಿನವರು ವಲಸೆ ಕಾರ್ಮಿಕರು ಆಗಿದ್ದಾರೆ, ಅವರಿಗೆ ಶಿಬಿರ ಇದಾಗಿದೆ. ಇವರನ್ನು ಭೇಟಿ ಮಾಡಲು ಹೋದಾಗ ಆತಿಶಿ ಬಂಧನ ನಡೆದಿದೆ ಎನ್ನಲಾಗಿದೆ. ಆದರೆ ಪೊಲೀಸರು ಮಾತ್ರ ನಾವು ಬಂಧಿಸಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿರುವ ಆತಿಶಿ, “ನಾಳೆ, ಬಿಜೆಪಿ ಭೂಮಿಹೀನರ ಶಿಬಿರದ ಮೇಲೆ ಬುಲ್ಡೋಜರ್‌ಗಳನ್ನು ಓಡಿಸಲಿದೆ. ಇಂದು, ಅಲ್ಲಿನ ಕೊಳೆಗೇರಿ ನಿವಾಸಿಗಳು ಪ್ರತಿಭಟನೆ ನಡೆಸಲು ಯೋಜಿಸುತ್ತಿದ್ದರು. ಆದ್ದರಿಂದ ಬಿಜೆಪಿ ಸರ್ಕಾರ ಸಾವಿರಾರು ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಿದೆ” ಆರೋಪಿಸಿದ್ದಾರೆ.

“ರೇಖಾ ಗುಪ್ತಾ ಅವರೇ ಯಾವುದೇ ಕೊಳೆಗೇರಿಗಳನ್ನು ಕೆಡವಲಾಗುವುದಿಲ್ಲ ಎಂದು ನೀವು ಹೇಳಿದ್ದೀರಿ ಅಲ್ಲವೇ? ಹಾಗಾದರೆ ಇಷ್ಟೊಂದು ಬೃಹತ್ ಪೊಲೀಸ್ ಮತ್ತು ಸಿಆರ್‌ಪಿಎಫ್‌ ಪಡೆ ಏಕೆ ನಿಯೋಜಿಸಲಾಗಿದೆ” ಆತಿಶಿ ದೆಹಲಿ ಸಿಎಂ ರೇಖಾ ಅವರನ್ನು ಪ್ರಶ್ನಿಸಿದ್ದಾರೆ.

ಆದರೆ ರೇಖಾ ಮಾತ್ರ ನ್ಯಾಯಾಲಯಗಳು ಹೊರಡಿಸಿದ ಆದೇಶವನ್ನು ಅಧಿಕಾರಿಗಳು ವಿರೋಧಿಸಲು ಸಾಧ್ಯವಿಲ್ಲ. ಸ್ಥಳಾಂತರಗೊಂಡ ನಿವಾಸಿಗಳಿಗೆ ವಸತಿ ಒದಗಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...