‘ಗೋವಾಗೆ ಬಿಜೆಪಿಯ ಗುಂಡಾರಾಜ್ ಬೇಕಿಲ್ಲ’ ಅಭಿಯಾನ ಆರಂಭಿಸಿದ ಎಎಪಿ

Date:

ಬಿಜೆಪಿ ಆಡಳಿತದ ಅವಧಿಯಲ್ಲಿ ಗೋವಾದಲ್ಲಿ ಭೂಕಬಳಿಕೆ, ಅಪರಾಧ ಹಾಗೂ ಕಾನೂನುಬಾಹಿರ ಚಟುವಟಿಕೆಗಳು ಹೆಚ್ಚುತ್ತಿವೆ. ಗೋವಾದಲ್ಲಿ ಬಿಜೆಪಿ ಆಡಳಿತವು ‘ಗೂಂಡಾರಾಜ್’ಆಗಿ ಮಾರ್ಪಟ್ಟಿದೆ ಎಂದು ಎಎಪಿ ಆರೋಪಿಸಿದೆ. ‘ಗೋವಾಗೆ ಬಿಜೆಪಿಯ ಗೂಂಡಾರಾಜ್ ಬೇಕಿಲ್ಲ’ ಎಂದು ಅಭಿಯಾನ ಆರಂಭಿಸಿದೆ.

‘ಗೋವಾಗೆ ಬಿಜೆಪಿಯ ಗೂಂಡಾರಾಜ್ ಬೇಕಿಲ್ಲ’ ಎಂಬ ಘೋಷಣೆಯನ್ನು ಗೋವಾದಲ್ಲಿ ಬ್ರಾಂಡ್‌ ಮತ್ತು ಟ್ರಂಪ್‌ ಮಾಡಲು ಎಎಪಿ ಮುಂದಾಗಿದೆ. ಎಎಪಿಯ ಈ ಅಭಿಯಾನವು ಬಿಜೆಪಿ ಸರ್ಕಾರಕ್ಕೆ ನೇರ ಸವಾಲುಗಳನ್ನು ಹಾಕಿದೆ. ಸುರಕ್ಷತೆ, ನ್ಯಾಯ ಹಾಗೂ ಹೊಣೆಗಾರಿಕೆಯನ್ನು ಬಯಸುವ ಗೋವಾ ಜನರ ಸಾಮೂಹಿಕ ಧ್ವನಿಯಾಗಿ ತಾವು ಈ ಅಭಿಯಾನ ನಡೆಸುತ್ತಿರುವುದಾಗಿ ಎಎಪಿ ನಾಯಕರು ಹೇಳಿಕೊಂಡಿದ್ದಾರೆ.

ಒಂದು ಕಾಲದಲ್ಲಿ ಗೋವಾ ಶಾಂತಿ ಮತ್ತು ಸಾಮರಸ್ಯದ ರಾಜ್ಯವಾಗಿತ್ತು. ಆದರೆ, ಬಿಜೆಪಿ ಆಡಳಿತದಲ್ಲಿ ಗೋವಾದ ಸ್ಥಿರತೆ ಕುಸಿತ ಕಂಡಿದೆ. ಗೋವಾ ಪೊಲೀಸರ ವರದಿ ಪ್ರಕಾರ, ರಾಜ್ಯದಲ್ಲಿ ಗಂಭೀರ ಅಪರಾಧಗಳು ಆರು ವರ್ಷಗಳಲ್ಲಿ 38%ರಷ್ಟು ಹೆಚ್ಚಾಗಿವೆ. 2017ರಲ್ಲಿ, ಸುಮಾರು 2,900 ಅಪರಾಧ ಪ್ರಕರಣಗಳು ದಾಖಲಾಗಿದ್ದವು. ಆದರೆ, 2024ರ ಹೊತ್ತಿಗೆ ಈ ಸಂಖ್ಯೆ 4,050ಕ್ಕೆ ಏರಿಕೆಯಾಗಿದೆ” ಎಂದು ಎಎಪಿ ವಿವರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಿಳೆಯರ ವಿರುದ್ಧದ ಅಪರಾಧಗಳು 40%ಗಿಂತ ಹೆಚ್ಚಾಗಿದೆ. ಕಳೆದ ವರ್ಷ ಕೊಲೆಗಳು ಅಥವಾ ಕೊಲೆ ಯತ್ನಕ್ಕೆ ಸಂಬಂಧಿಸಿದ 120ಕ್ಕೂ ಹೆಚ್ಚು ಪ್ರಕರಣಗಳು, ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ 350 ಪ್ರಕರಣಗಳು ಹಾಗೂ ಕಳ್ಳತನ ಮತ್ತು ದರೋಡೆಗೆ ಸಂಬಂಧಿಸಿದ 800ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ” ಎಂಬುದನ್ನು ಎಎಪಿ ಒತ್ತಿ ಹೇಳಿದೆ.

“ಬಿಜೆಪಿ ಸರ್ಕಾರವು ದೊಡ್ಡ ಪ್ರಮಾಣದ ಭೂ ವರ್ಗಾವಣೆಗಳನ್ನು ಮಾಡಿದೆ. ಇತ್ತೀಚಿನ ವರ್ಷಗಳಲ್ಲಿ, ಸ್ಥಳೀಯ ಸಮುದಾಯಗಳ ಒಪ್ಪಿಗೆ ಇಲ್ಲದೆಯೇ 3,200 ಎಕರೆಗೂ ಹೆಚ್ಚು ಸಾರ್ವಜನಿಕ ಮತ್ತು ಸಮುದಾಯದ ಭೂಮಿಯನ್ನು ಖಾಸಗಿ ಕಂಪನಿಗಳು ಮತ್ತು ಬಿಲ್ಡರ್‌ಗಳಿಗೆ ಹಸ್ತಾಂತರಿಸಲಾಗಿದೆ. ಇದು ಗೋವಾದ ಭೂ ಹಕ್ಕುಗಳು ಮತ್ತು ಸಾಂಸ್ಕೃತಿಕ ಗುರುತನ್ನು ಹಾಳುಮಾಡಿದೆ” ಎಂದು ಎಎಪಿ ಆರೋಪಿಸಿದೆ.

“ಕಳೆದ ಎರಡು ವರ್ಷಗಳಲ್ಲಿ ಸಾಮಾಜಿಕ ಮತ್ತು ರಾಜಕೀಯ ಕಾರ್ಯಕರ್ತರ ಮೇಲೆ 250ಕ್ಕೂ ಹೆಚ್ಚು ಹಲ್ಲೆ ಪ್ರಕರಣಗಳು ವರದಿಯಾಗಿವೆ. ಕಾರ್ಯಕರ್ತರ ಮೇಲೆ ದಾಳಿಯ ಪ್ರಕರಣಗಳು ರಾಜ್ಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆಯ ಕುಸಿತ ಮತ್ತು ಭಯದ ವಾತಾವರಣವನ್ನು ಸೂಚಿಸುತ್ತವೆ” ಎಂದು ಎಎಪಿ ಹೇಳುತ್ತದೆ.

ಈ ಲೇಖನ ಓದಿದ್ದೀರಾ?: ಜಾತಿ ಸಮೀಕ್ಷೆ; ಜಾಗೃತವಾಗಿದ್ದಾರೆಯೇ ಒಬಿಸಿಗಳು?

ಅಭಿಯಾನದಲ್ಲಿ ಮೂಲಸೌಕರ್ಯವು ಮತ್ತೊಂದು ಪ್ರಮುಖ ಅಂಶವಾಗಿದೆ. ಗೋವಾದ ಸುಮಾರು 72%ರಷ್ಟು ರಸ್ತೆಗಳು ತುರ್ತು ದುರಸ್ತಿಗಾಗಿ ಕಾಯುತ್ತಿವೆ. ಮಳೆಗಾಲದಲ್ಲಿ ಪುನರಾವರ್ತಿತ ಪ್ರವಾಹವು ಕಳಪೆ ಯೋಜನೆ ಮತ್ತು ಅಸಮರ್ಪಕ ನಿರ್ವಹಣೆಯನ್ನು ಎತ್ತಿ ತೋರಿಸುತ್ತದೆ ಎಂದು ಎಎಪಿ ಹೇಳಿದೆ.

ಒಂದು ಕಡೆ ಅಪರಾಧ, ಭೂಕಬಳಿಕೆ ಮತ್ತು ಗುಂಡಾರಾಜ್ಅನ್ನು ಸಕ್ರಿಯಗೊಳಿಸಿದ ಆರೋಪ ಹೊತ್ತಿರುವ ಬಿಜೆಪಿ ಇದೆ. ಮತ್ತೊಂದೆಡೆ, ಶಾಂತಿ, ಕಾನೂನು, ಪಾರದರ್ಶಕತೆ ಹಾಗೂ ಜನರ ನೇತೃತ್ವದ ಆಡಳಿತದ ಭರವಸೆ ನೀಡುವ ಎಎಪಿ ಇದೆ. ಜನರು ತಮ್ಮ ಜೀವನೋಪಾಯ ಮತ್ತು ಭದ್ರತೆಗಾಗಿ ಉತ್ತಮ ಆಯ್ಕೆಯನ್ನು ಮಾಡುತ್ತಾರೆ ಎಂದು ಎಎಪಿ ಹೇಳಿಕೊಂಡಿದೆ.

2027ರ ಫೆಬ್ರವರಿಯಲ್ಲಿ ಗೋವಾ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ. ಗೋವಾ ವಿಧಾನಸಭೆಯು 40 ಸದಸ್ಯರ ಸಂಖ್ಯಾ ಬಲವನ್ನು ಹೊಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...