ದೆಹಲಿ ವಿಧಾನಸಭೆ ಚುನಾವಣೆ | 15 ಗ್ಯಾರಂಟಿಗಳನ್ನು ಒಳಗೊಂಡ ಎಎಪಿ ಪ್ರಣಾಳಿಕೆ ಬಿಡುಗಡೆ

Date:

ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಎಎಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಪ್ರಣಾಳಿಕೆಯಲ್ಲಿ ಒಟ್ಟು 15 ಗ್ಯಾರಂಟಿಗಳನ್ನು ಪ್ರಸ್ತಾಪಿಸಿದ್ದಾರೆ.

ಯುವಕರಿಗೆ ಉದ್ಯೋಗ ಖಾತರಿ, ‘ಮಹಿಳಾ ಸಮ್ಮಾನ್ ಯೋಜನೆ’, ವೃದ್ಧರಿಗೆ ಉಚಿತ ಚಿಕಿತ್ಸೆ ನೀಡುವ ಭರವಸೆಯನ್ನು ಎಎಪಿ ನೀಡಿದೆ. ಎಎಪಿ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ, ಮೆಟ್ರೋ ದರದಲ್ಲಿ ಶೇಕಡ 50ರಷ್ಟು ರಿಯಾಯಿತಿ ನೀಡುವುದಾಗಿಯೂ ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿದ್ದೀರಾ? ದೆಹಲಿ ಚುನಾವಣೆ | ಎಎಪಿಯ ‘ಅಪ್ರಾಮಾಣಿಕ’ 11 ನಾಯಕರ ಪೋಸ್ಟರ್‌ನಲ್ಲಿ ರಾಹುಲ್ ಗಾಂಧಿ ಚಿತ್ರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಣಾಳಿಕೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೇಶದಲ್ಲಿ ಮೊದಲು ನಾವು ‘ಗ್ಯಾರಂಟಿ’ ಎಂಬ ಪದವನ್ನು ಸೃಷ್ಟಿಸಿದೆವು. ನಮ್ಮ ನಂತರ, ಬಿಜೆಪಿ ಅದನ್ನು ನಕಲಿಸಿದೆ. ಆದರೆ ವ್ಯತ್ಯಾಸವೆಂದರೆ, ನಾವು ನಮ್ಮ ಭರವಸೆಗಳನ್ನು ಪೂರೈಸುತ್ತೇವೆ, ಅವರು ಪೂರೈಸುವುದಿಲ್ಲ” ಎಂದು ಹೇಳಿದರು.

ಪ್ರಣಾಳಿಕೆಯಲ್ಲಿ ನಾವು 15 ಗ್ಯಾರಂಟಿಗಳನ್ನು ನೀಡಿದ್ದೇವೆ. ಅದರಲ್ಲಿ ನಮ್ಮ ಮೊದಲ ಗ್ಯಾರಂಟಿ ದೆಹಲಿ ನಿವಾಸಿಗಳಿಗೆ ‘ದೃಢವಾದ’ ಉದ್ಯೋಗ ಸೃಷ್ಟಿಸುವುದು ಎಂದು ತಿಳಿಸಿದರು.

ಮಹಿಳಾ ಸಮ್ಮಾನ್ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಮಾಸಿಕ 2,100 ರೂಪಾಯಿ ಆರ್ಥಿಕ ಸಹಾಯವನ್ನು ನೀಡುವುದು ಎಎಪಿ ಎರಡನೇ ಗ್ಯಾರಂಟಿ ಆಗಿದೆ. ಹಿರಿಯ ನಾಗರಿಕರಿಗೆ, ಸಂಜೀವನಿ ಯೋಜನೆಯಡಿಯಲ್ಲಿ ಉಚಿತ ಆರೋಗ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಇನ್ನು ಬಾಕಿ ಇರುವ ‘ಹೆಚ್ಚುವರಿ’ ನೀರಿನ ಬಿಲ್‌ಗಳನ್ನು ಮನ್ನಾ ಮಾಡುವ ಭರವಸೆಯನ್ನು ಎಎಪಿ ನೀಡಿದೆ.

ಇದನ್ನು ಓದಿದ್ದೀರಾ? ದೆಹಲಿ ಚುನಾವಣೆ | ಚೀನೀ ಸಿಸಿಟಿವಿ ಕ್ಯಾಮೆರಾ ಬಳಕೆ, ಪಂಜಾಬ್ ಆಡಳಿತ ದುರುಪಯೋಗ: ಎಎಪಿ, ಬಿಜೆಪಿ ವಾಕ್ಸಮರ

ರಾಷ್ಟ್ರ ರಾಜಧಾನಿಯ ಪ್ರತಿ ಮನೆಗೆ 24/7 ಶುದ್ಧ ಕುಡಿಯುವ ನೀರಿನ ಪೂರೈಕೆಯಾಗಲಿದೆ ಎಂದು ಎಎಪಿ ಭರವಸೆ ನೀಡಿದೆ. ಕಲುಷಿತ ಯಮುನಾ ನದಿಯನ್ನು ಸ್ವಚ್ಛಗೊಳಿಸುವುದು ಮತ್ತು ದೆಹಲಿಯ ರಸ್ತೆಗಳನ್ನು ವಿಶ್ವ ದರ್ಜೆಯ ರಸ್ತೆಯನ್ನಾಗಿಸುವುದು, ಬಾಬಾಸಾಹೇಬ್ ಅಂಬೇಡ್ಕರ್ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಅಧ್ಯಯನ ಮಾಡಲು ವಿದ್ಯಾರ್ಥಿವೇತನ ನೀಡುವ ಭರವಸೆಯನ್ನು ಕೂಡಾ ಎಎಪಿ ನೀಡಿದೆ.

ಉಚಿತ ಬಸ್ ಪ್ರಯಾಣ ಮತ್ತು ಮೆಟ್ರೋದಲ್ಲಿ ಶೇಕಡ 50ರಷ್ಟು ರಿಯಾಯಿತಿಯನ್ನು ಮಹಿಳೆಯರಿಗೆ ಮಾತ್ರವಲ್ಲ ವಿದ್ಯಾರ್ಥಿಗಳಿಗೂ ನೀಡಲಾಗುವುದು ಎಂದು ಎಎಪಿ ಹೇಳಿದೆ. ಪುರೋಹಿತರು ಮತ್ತು ಗುರುದ್ವಾರ ಗ್ರಂಥಗಳಿಗೆ ಮಾಸಿಕ 18,000 ರೂಪಾಯಿ ಆರ್ಥಿಕ ನೆರವು, ಬಾಡಿಗೆದಾರರಿಗೆ ಉಚಿತ ವಿದ್ಯುತ್ ಮತ್ತು ನೀರಿನ ಪ್ರಯೋಜನ ವಿಸ್ತರಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ.

ಹೆಚ್ಚುವರಿಯಾಗಿ, ದೆಹಲಿಯ ಒಳಚರಂಡಿ ವ್ಯವಸ್ಥೆಯನ್ನು ಸುಧಾರಿಸುವುದು, ಪಡಿತರ ಚೀಟಿಗಳನ್ನು ನೀಡುವುದು, ಆಟೋ ಮತ್ತು ಕ್ಯಾಬ್ ಚಾಲಕರಿಗೆ ಆರ್ಥಿಕ ನೆರವು ನೀಡುವುದು, ಅವರ ಹೆಣ್ಣುಮಕ್ಕಳ ಮದುವೆಗೆ 1 ಲಕ್ಷ ರೂಪಾಯಿ ಮತ್ತು 10 ಲಕ್ಷ ರೂಪಾಯಿ ವಿಮಾ ರಕ್ಷಣೆಯನ್ನು ನೀಡುವ ಭರವಸೆಯನ್ನು ಕೂಡಾ ಎಎಪಿ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...