ಇಡಿ ಕಸ್ಟಡಿಯಲ್ಲಿರುವ ದೆಹಲಿ ಸಿಎಂ ಕೇಜ್ರಿವಾಲ್ ಭದ್ರತೆ ಬಗ್ಗೆ ಎಎಪಿ ಆತಂಕಗೊಂಡಿದೆ: ಅತಿಶಿ

Date:

ಇಡಿ ಕಸ್ಟಡಿಯಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಭದ್ರತೆಯ ಬಗ್ಗೆ ಆಮ್ ಆದ್ಮಿ ಪಕ್ಷ (ಎಎಪಿ) ಆತಂಕಗೊಂಡಿದೆ ಎಂದು ದೆಹಲಿ ಸಚಿವ ಅತಿಶಿ ಶುಕ್ರವಾರ ಹೇಳಿದ್ದಾರೆ.

ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ರಾತ್ರಿ ಬಂಧಿಸಿದೆ.

ಅವರ ಬಂಧನದ ಬಗ್ಗೆ ಕಳವಳ ವ್ಯಕ್ತಪಡಿಸಿ ಸುದ್ದಿಗೋಷ್ಠಿ ನಡೆಸಿರುವ ಅತಿಶಿ, “ಲೋಕಸಭೆ ಚುನಾವಣೆಗೂ ಮುನ್ನ ರಾಷ್ಟ್ರೀಯ ಪಕ್ಷದ ಮುಖ್ಯಸ್ಥರನ್ನು ಬಂಧಿಸಿರುವುದು, ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಇದೇ ಮೊದಲು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಡಿ ಒಂದೇ ಒಂದು ಸಾಕ್ಷ್ಯವನ್ನು ನೀಡಲು ಸಾಧ್ಯವಾಗಿಲ್ಲ. ಆದರೂ, ಬಂಧಿಸಲಾಗಿದೆ. ಇದು ಅರವಿಂದ್ ಕೇಜ್ರಿವಾಲ್ ಬಗ್ಗೆ ಬಿಜೆಪಿಗೆ ಎಷ್ಟು ಭಯವಾಗಿದೆ ಎಂಬುದನ್ನು ತೋರಿಸುತ್ತದೆ” ಎಂದು ಆರೋಪಿಸಿದ್ದಾರೆ.

“ಒಬ್ಬ ನಾಯಕ ಮಾತ್ರ ಅವರಿಗೆ (ಬಿಜೆಪಿ) ಸವಾಲು ಹಾಕಬಹುದು ಎಂದು ಅವರಿಗೆ ತಿಳಿದಿದೆ. ಅದಕ್ಕಾಗಿಯೇ ಅವರು ಅರವಿಂದ್ ಕೇಜ್ರಿವಾಲ್ ಮತ್ತು ಎಎಪಿಯನ್ನು ತುಳಿಯಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ” ಎಂದು ಸಚಿವರು ಹೇಳಿದ್ದಾರೆ.

“ಇಡಿ ಕಸ್ಟಡಿಯಲ್ಲಿರುವ ಕೇಜ್ರಿವಾಲ್ ಅವರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಆಮ್ ಆದ್ಮಿ ಪಕ್ಷವು ಚಿಂತಿತವಾಗಿದೆ” ಎಂದಿದ್ದಾರೆ.

“ದಿಲ್ಲಿಯ ಮುಖ್ಯಮಂತ್ರಿಯಾಗಿರುವ ಕೇಜ್ರಿವಾಲ್ ಅವರಿಗೆ Z+ ಭದ್ರತೆ ಇರುತ್ತದೆ. ಈಗ ಅವರು ಇಡಿ ಕಸ್ಟಡಿಯಲ್ಲಿದ್ದಾರೆ. ಕೇಜ್ರಿವಾಲ್ ಅವರ ಸುರಕ್ಷತೆಯ ಹೊಣೆ ಯಾರು? ಇಡಿ ಕಚೇರಿಯಲ್ಲಿ ಕೇಜ್ರಿವಾಲ್ ಇರುವ ಲಾಕ್-ಅಪ್‌ಗೆ ಯಾರ್ಯಾರು ಹೋಗುತ್ತಿದ್ದಾರೆ? ಅವರ ಭದ್ರತಾ ವ್ಯವಸ್ಥೆಗಳ ಬಗ್ಗೆ ಕೇಂದ್ರವು ಉತ್ತರಿಸಬೇಕು” ಎಂದು ಅವರು ಹೇಳಿದ್ದಾರೆ.

“ಕೇಜ್ರಿವಾಲ್ ಮತ್ತು ವಿರೋಧ ಪಕ್ಷದ ನಾಯಕರ ವಿರುದ್ಧ ಬಿಜೆಪಿ ‘ರಾಜಕೀಯ ಪಿತೂರಿ’ ನಡೆಸುತ್ತಿದೆ” ಎಂದು ಆರೋಪಿಸಿದರು.

ಏತನ್ಮಧ್ಯೆ, ಕೇಜ್ರಿವಾಲ್ ಕುಟುಂಬವನ್ನು ಭೇಟಿ ಮಾಡಲು ದೆಹಲಿ ಸಂಪುಟ ಸಚಿವ ಗೋಪಾಲ್ ರೈ ಅವರು ಕೇಜ್ರಿವಾಲ್ ನಿವಾಸಕ್ಕೆ ಭೇಟಿ ನೀಡಿದ್ದರು. ಆದರೆ, ಅವರಿಗೆ ಅಧಿಕಾರಿಗಳು ಪ್ರವೇಶ ನೀಡಿಲ್ಲ ಎಂದು ಆರೋಪಿಸಿದ್ದಾರೆ.

“ನನಗೆ ಕಾಯುವಂತೆ ಹೇಳಿದರು. ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಅವರ ಕುಟುಂಬ ಯಾವ ಸ್ಥಿತಿಯಲ್ಲಿದೆ ಎಂದು ಯಾರಿಗೂ ತಿಳಿದಿಲ್ಲ. ಅನಾರೋಗ್ಯದಿಂದ ಬಳಲುತ್ತಿರುವ ಕೇಜ್ರಿವಾಲ್ ಪೋಷಕರು ಮನೆಯಲ್ಲಿದ್ದಾರೆ. ಯಾವ ಕಾನೂನಿನ ಅಡಿಯಲ್ಲಿ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ” ಗೋಪಾಲ್ ರೈ ಕಿಡಿಕಾರಿದ್ದಾರೆ.

ಮತ್ತೊಬ್ಬ ಸಚಿವ ಸೌರಭ್ ಭಾರದ್ವಾಜ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಮುಖ್ಯಮಂತ್ರಿ ಕೇಜ್ರಿವಾಲ್‌ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಲಾಗಿದೆ. ಕೇಂದ್ರ ಸರ್ಕಾರಕ್ಕೆ ಕೇಜ್ರಿವಾಲ್ ಅವರ ಹಿರಿಯ ಪೋಷಕರು ಮತ್ತು ಮಕ್ಕಳೊಂದಿಗೆ ಏನು ದ್ವೇಷವಿದೆ? ಅವರನ್ನು ಭೇಟಿ ಮಾಡಲು ಯಾರಿಗೂ ಅವಕಾಶ ನೀಡಿಲ್ಲ. ಯಾವುದೇ ಸಹಾನುಭೂತಿಯೂ ಇಲ್ಲ. ಕುಟುಂಬವು ದುಃಖಿತವಾಗಿದೆ” ಎಂದು ಹೇಳಿದ್ದಾರೆ.

“ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ನಾಯಕರು ಬಿಜೆಪಿ ಸೇರಿದರೆ ಅವರ ಪ್ರಕರಣಗಳ ತನಿಖೆ ನಡೆಸುವುದಿಲ್ಲ. ಹೇಮಂತ್ ಸೋರೆನ್ ಅವರನ್ನು ಬಂಧಿಸಲಾಗಿದೆ. ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ಇದು ಚುನಾವಣೆಯ ಮೇಲೆ ಪರಿಣಾಮ ಬೀರುವ ಪ್ರಯತ್ನ” ಎಂದು ಅತಿಶಿ ಆರೋಪಿಸಿದ್ದಾರೆ.

“ನೀವು ಪ್ರತಿಪಕ್ಷಗಳು ಮತ್ತು ಎಎಪಿ ವಿರುದ್ಧ ಯಾವುದೇ ಪಿತೂರಿ ನಡೆಸುತ್ತಿದ್ದರೂ, ದೆಹಲಿ, ಪಂಜಾಬ್ ಮತ್ತು ಈ ದೇಶದ ಜನರು ನಿಮಗೆ ತಕ್ಕ ಉತ್ತರವನ್ನು ನೀಡುತ್ತಾರೆ” ಎಂದು ಬಿಜೆಪಿಗೆ ಅತಿಶಿ ಎಚ್ಚರಿಕೆ ನೀಡಿದ್ದಾರೆ.

“ನಾವು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ. ಪ್ರತಿಭಟನೆಗೆ ಬಿಜೆಪೊ ಹೆದರಿದೆ ಎಂಬುದು ರಸ್ತೆಗಳಲ್ಲಿ ಗೋಚರಿಸುತ್ತಿದೆ. ದೆಹಲಿಯ ಎಎಪಿ ಕೇಂದ್ರ ಕಚೇರಿ ಕೋಟೆಯಾಗಿ ಮಾರ್ಪಟ್ಟಿದೆ. ಪಕ್ಷದ ಕಚೇರಿಯ ಹೊರಗೆ 2000-2500 ಪೊಲೀಸರನ್ನು ನಿಯೋಜಿಸಲಾಗಿದೆ. ಹಲವಾರು ಅರೆಸೇನಾಪಡೆಗಳನ್ನು ಕರೆತರಲಾಗಿದೆ” ಎಂದು ಅತಿಶಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...