ಎನ್‌ಇಪಿ ರದ್ದು | ಸರ್ಕಾರಿ ಶಾಲೆ ಮುಚ್ಚಲು ಸರ್ಕಾರದಿಂದ ಹುನ್ನಾರ : ಮಾಜಿ ಸಚಿವ ನಾಗೇಶ್ ಆರೋಪ

Date:

  • ‘ಈ ಸರ್ಕಾರದಲ್ಲಿ ಶಿಕ್ಷಣ ಸಚಿವರು ಯಾರು ಅನ್ನೋದೇ ಗೊತ್ತಾಗುತ್ತಿಲ್ಲ’ ಎಂದ ಮಾಜಿ ಶಿಕ್ಷಣ ಸಚಿವ
  • ಸಿದ್ದರಾಮಯ್ಯನವರಿಗೆ ಆಸಕ್ತಿ ಇಲ್ಲ ಎಂದು ಪಠ್ಯ ಪರಿಷ್ಕರಣೆ ಮಾಡುತ್ತಿದ್ದಾರೆಎಂದ ಬಿ ಸಿ ನಾಗೇಶ್

ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ರದ್ದು ಮಾಡಲು ಮುಂದಾಗಿರುವ ಕಾಂಗ್ರೆಸ್​ ಸರ್ಕಾರದ ನಿರ್ಧಾರಕ್ಕೆ ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ ಆಕ್ರೋಶ ವ್ಯಕ್ತಪಡಿಸಿದ್ದು, ‘ಬಹುತೇಕ ರಾಜಕಾರಣಿಗಳು, ಅಧಿಕಾರಿಗಳು ಶಾಲೆ ನಡೆಸುತ್ತಿದ್ದಾರೆ. ಹಾಗಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚಿಸಲು ಷಡ್ಯಂತ್ರ ನಡೆಸಿದ್ದಾರೆ’ ಎಂದು ಆರೋಪಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಪರಮೇಶ್ವರ್, ಎಸ್​​.ಎಸ್​.ಮಲ್ಲಿಕಾರ್ಜುನ, ಎಂ.ಬಿ.ಪಾಟೀಲ್ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದಾರೆ. ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ದೊಡ್ಡ ಹುನ್ನಾರ ಮಾಡಿದೆ. ಸಿದ್ದರಾಮಯ್ಯ ಎನ್​ಇಪಿ ತೆಗೆದುಹಾಕುವ ಮೊದಲು ಜನರ ಮುಂದಿಡಲಿ. ಅದರಲ್ಲಿ ಏನೆಲ್ಲ ಲೋಪದೋಷಗಳಿವೆ ಎಂದು ಬಹಿರಂಗಪಡಿಸಬೇಕು. ಖಾಸಗಿ ಸಂಸ್ಥೆಗಳ ಒತ್ತಡಕ್ಕೆ ಮಣಿದು ಈ ರೀತಿ ನಡೆದುಕೊಳ್ಳಬಾರದು’ ಎಂದು ಹೇಳಿದರು.

‘ಎನ್‌ಇಪಿ ರದ್ದು ಮಾಡುವುದು ಒಪ್ಪುವಂತದ್ದಲ್ಲ. ಮಂತ್ರಿಗಳ ಹೇಳಿಕೆಗಳನ್ನ ಗಮನಿಸುತ್ತಿದ್ದೇನೆ. ಅವರು ಹೇಳ್ತಾರೆ, ಮುಖ್ಯಮಂತ್ರಿಗಳಿಗೆ ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಆಸಕ್ತಿ ಇದೆ. ಹಾಗಾಗಿ ಪರಿಷ್ಕರಣೆ ಮಾಡ್ತಾ ಇದ್ದೇವೆ ಎಂದು. ಅಂದರೆ ಇವರು ಮಕ್ಕಳಿಗೋಸ್ಕರ ಶಿಕ್ಷಣ ನೀಡುತ್ತಿಲ್ಲ. ಸಿದ್ದರಾಮಯ್ಯನವರಿಗೆ ಆಸಕ್ತಿ ಇಲ್ಲ ಎಂದು ಪಠ್ಯ ಪರಿಷ್ಕರಣೆ ಮಾಡುತ್ತಿದ್ದಾರೆ’ ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಕಾಂಗ್ರೆಸ್‌ನ ಸಂಶೋಧನಾ ತಂಡದಿಂದ ಬಂದ ಪಠ್ಯವನ್ನು ಸೇರಿಸುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕೂಡ ರಾಜಕೀಯಗೊಳಿಸುತ್ತಿರುವ ಸರ್ಕಾರ ಯಾವುದಾದರೂ ಇದ್ದರೆ ಈ ಕೆಟ್ಟ ಸರ್ಕಾರ ಮಾತ್ರ’ ಎಂದ ಬಿ ಸಿ ನಾಗೇಶ್, ‘ಎನ್‌ಇಪಿ ಬೇಡ ಎನ್ನುವ ಕಾಂಗ್ರೆಸ್ ಮುಖಂಡರುಗಳ ಮಕ್ಕಳು ಹಾಗೂ ಮೊಮ್ಮಕ್ಕಳು ಯಾವ ಶಾಲೆಯಲ್ಲಿ ಓದುತ್ತಿದ್ದಾರೆ’ ಎಂದು ಪ್ರಶ್ನಿಸಿದರು.

‘ಉಳ್ಳವರ ಮಕ್ಕಳು ಸಿಬಿಎಸ್‌ಸಿಯಲ್ಲಿ ಓದಬಹುದು. ಆದರೆ ಬಡಮಕ್ಕಳು ಮಾತ್ರ ಸ್ಟೇಟ್ ಸಿಲೆಬಸ್‌ನಲ್ಲಿ ಓದಬೇಕಾ? ಬಹುತೇಕ ಖಾಸಗಿ ಶಾಲೆಗಳು ರಾಜಕಾರಣಿಗಳ ಒಡೆತನದ್ದಾಗಿದೆ. ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರ ಇದರ ಹಿಂದಿದೆ’ ಎಂದು ಆರೋಪಿಸಿದರು.

‘ಈ ಸರ್ಕಾರದಲ್ಲಿ ಶಿಕ್ಷಣ ಸಚಿವರು ಯಾರು ಅನ್ನೋದೇ ಗೊತ್ತಾಗುತ್ತಿಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಮಧು ಬಂಗಾರಪ್ಪ ಅವರಲ್ಲಿ ಯಾರು ಶಿಕ್ಷಣ ಸಚಿವರು. ಸರಕಾರದ ಹಿಂದಿರುವ ಬುದ್ಧಿಜೀವಿಗಳು ಶಿಕ್ಷಣ ಸಚಿವರೇ ಎಂದು ಮಾಜಿ ಸಚಿವ ಬಿ ಸಿ ನಾಗೇಶ್‌ ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...