ದಿನೇಶ್ ಗುಂಡೂರಾವ್ ವಿರುದ್ಧ ನಿಂದನೆ: ಯತ್ನಾಳ್‌ ಬುದ್ಧಿಭ್ರಮಣೆಗೆ ಉಚಿತ ಚಿಕಿತ್ಸೆ; ಕಾಂಗ್ರೆಸ್‌ ಗ್ಯಾರಂಟಿ

Date:

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ಬಗ್ಗೆ ವೈಯಕ್ತಿಕ ನಿಂದನೆ ಮಾಡಿರುವ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಅವರಿಗೆ ಬುದ್ದಿಭ್ರಮಣೆಯಾಗಿದೆ. ಅವರನ್ನು ಸ್ವತಃ ಬಿಜೆಪಿಯೇ ಎತ್ತಿ ಮೂಲೆಗೆ ಎಸೆದಿದೆ. ಯತ್ನಾಳ್‌ ಬಾಯಿ ಬಚ್ಚಲು ಎಂದು ಬಿಎಸ್‌ವೈ ಬಣದ ನಾಯಕರೇ ಹೇಳುತ್ತಿದ್ದಾರೆ. ಯತ್ನಾಳ್ ಅವರ ಮಾನಸಿಕ ಮತ್ತು ಬಾಯಿ ಚಿಕಿತ್ಸೆಗೆ ಕಾಂಗ್ರೆಸ್ ಸರ್ಕಾರ ಉಚಿತ ಚಿಕೆತ್ಸೆ ವ್ಯವಸ್ಥೆ ಕಲ್ಪಿಸಲು ಸಿದ್ಧವಿದೆ. ಇದು ಕಾಂಗ್ರೆಸ್‌ನ ಗ್ಯಾರಂಟಿ ಎಂದು ಕೆಪಿಸಿಸಿ ಹೇಳಿದೆ.

ಯತ್ನಾಳ್ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಪತ್ರಿಕಾ ಪ್ರಕಟಣೆ ನೀಡಿದೆ. “ಮುಸ್ಲಿಂಮರೆಲ್ಲರನ್ನು ಪಾಕಿಸ್ತಾನ ದೃಷ್ಟಿಯಿಂದ ನೋಡುವ ಯತ್ನಾಳ್ ಅವರು ಸ್ವತಃ ಮೌಲ್ವಿ ಕುಟುಂಬದೊಂದಿಗೆ ವ್ಯವಹಾರಿಕ ಸಂಬಂಧ ಇಟ್ಟುಕೊಂಡಿರಲಿಲ್ಲವೇ. ಹಾಗಾದರೆ, ಯತ್ನಾಳ್ ಅವರಿಗೂ ಪಾಕಿಸ್ತಾನದ ಜೊತೆ ಸಂಬಂಧವಿದೆ ಎನ್ನೋಣವೇ” ಎಂದು ಪ್ರಶ್ನಿಸಿದೆ.

“ಪಾಕಿಸ್ತಾನದ ಜಪ ಮಾಡುವುದನ್ನ ಬಿಟ್ಟು ಬಿಜೆಪಿಯಲ್ಲಿ ಅವರ ಅಸ್ಥಿತ್ವ ಏನು ಎಂಬುದನ್ನ ಚಿಂತಿಸಬೇಕು. ಬಿಜೆಪಿಯಲ್ಲಿ ಬದಿಗೆ ಸರಿದು ಬೀದಿಗೆ ಬಿದ್ದಿರುವ ಯತ್ನಾಳ್ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮತಿಭ್ರಮಣೆಯಲ್ಲಿ ಕೀಳು ಅಭಿರುಚಿಯ ಹೇಳಿಕೆಗಳನ್ನ ನೀಡುವ ಮೂಲಕ ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡ್ತಿದ್ದಾರೆ. ಯತ್ನಾಳ್ ಅವರಿಗೆ ಒಳ್ಳೆಯ ಚಿಕಿತ್ಸೆಯ ಅಗತ್ಯತೆ ಇದೆ” ಎಂದು ಕಾಂಗ್ರೆಸ್‌ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯತ್ನಾಳ್ ಅವರಿಗೆ ಉಚಿತ ಮಾನಸಿಕ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲು ಕಾಂಗ್ರೆಸ್ ಸರ್ಕಾರ ಸಿದ್ಧವಿದೆ. ಇದು ಕಾಂಗ್ರೆಸ್‌ನ ಗ್ಯಾರಂಟಿ” ಎಂದು ತಿರುಗೇಟು ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...