ಅನ್ವರ್ ಮಾಣಿಪ್ಪಾಡಿ ವರದಿ ಸ್ವೀಕರಿಸಿ, ಸಿಎಂ ಅವರೇ ಸಿಬಿಐ ತನಿಖೆಗೆ ಕೊಡಲಿ: ವಿಜಯೇಂದ್ರ

Date:

ಮೈಸೂರಿನ ಮುಡಾ ಹಗರಣ, ವಕ್ಫ್ ಅವ್ಯವಹಾರ ಸಂಬಂಧಿಸಿದ ಅನ್ವರ್ ಮಾಣಿಪ್ಪಾಡಿ ಅವರ ವರದಿ ಹಾಗೂ ನನ್ನ ಮೇಲಿನ 150 ಕೋಟಿಯ ಆರೋಪ- ಇವೆಲ್ಲವುಗಳ ಸಮಗ್ರ ಸಿಬಿಐ ತನಿಖೆಗೆ ಸಿಎಂ ಸಿದ್ದರಾಮಯ್ಯ ಅವರೇ ಆದೇಶ ಮಾಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ಒತ್ತಾಯಿಸಿದರು.

ಬೆಳಗಾವಿ ಸುವರ್ಣ ಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು (ಡಿ.16) ಮಾತನಾಡಿದ ಅವರು, “ನನ್ನ ಮೇಲಿನ 150 ಕೋಟಿಯ ಆರೋಪವನ್ನೂ ಸಿಬಿಐ ತನಿಖೆಗೆ ಕೊಡಿ, ಅನ್ವರ್ ಮಾಣಿಪ್ಪಾಡಿಯವರ ವರದಿ ಸ್ವೀಕರಿಸಿ ಅದರ ಬಗ್ಗೆಯೂ ಸಿಬಿಐ ತನಿಖೆ ಮಾಡಿಸಿ. ವಕ್ಫ್ ಜಾಗದ ವಿಚಾರದಲ್ಲಿ ಲಕ್ಷ ಲಕ್ಷ ಕೋಟಿಯ ಅವ್ಯವಹಾರ ಆಗಿದೆ ಎಂಬ ವರದಿ ಇದ್ದು ಅದರ ಸಮಗ್ರ ತನಿಖೆಯೂ ಆಗಲಿ” ಎಂದು ಆಗ್ರಹಿಸಿದರು.

“ಆಡಳಿತ ಪಕ್ಷದವರು ಕೆಲಸಕ್ಕೆ ಬಾರದ ಸಂಗತಿಗಳನ್ನು ಇವತ್ತು ಸದನದಲ್ಲಿ ಪ್ರಸ್ತಾಪ ಮಾಡುತ್ತಿದ್ದಾರೆ. ಬಾಣಂತಿಯರ ಸಾವು, ಹಸುಗೂಸುಗಳ ಮರಣ, ಉತ್ತರ ಕರ್ನಾಟಕದ ವಿಚಾರಗಳು ಸದನದಲ್ಲಿ ಚರ್ಚೆ ಆಗಬಾರದೆಂಬ ಉದ್ದೇಶ ಇದರ ಹಿಂದಿದೆ. ಯಡಿಯೂರಪ್ಪ ಅವರು ಕೋವಿಡ್ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಿದ್ದರು. ಆದರೆ, ಅವರನ್ನೇ ಗುರಿಯಾಗಿ ಇಟ್ಟುಕೊಂಡು ರಾಜಕೀಯವಾಗಿ ಮುಗಿಸುವ ದುರುದ್ದೇಶದಿಂದ ಅರೆಬರೆ ಬೆಂದ ಜಸ್ಟಿಸ್ ಕುನ್ಹ ಮಧ್ಯಂತರ ವರದಿಯನ್ನು ಇಟ್ಟುಕೊಂಡು ಎಫ್‍ಐಆರ್ ದಾಖಲಿಸಿದ್ದಾರೆ. ಇದರ ಜೊತೆಗೆ ಮುನಿರತ್ನ ವಿಚಾರವನ್ನೂ ಚರ್ಚಿಸಲು ಮುಂದಾಗಿದ್ದಾರೆ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿದ್ದರಾಮಯ್ಯನವರೇ ಈ ರೀತಿ ಗೊಡ್ಡು ಬೆದರಿಕೆಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ. ಇದ್ಯಾವುದೂ ಹೊಸದಲ್ಲ. ಹಿಂದೆ ಯಡಿಯೂರಪ್ಪ ಅವರ ವಿರುದ್ಧ ಸಿಎಜಿ ವರದಿ ಸಂಬಂಧ 25 ಪ್ರಕರಣಗಳನ್ನು ಸಿದ್ದರಾಮಯ್ಯರ ಸರಕಾರವು ದಾಖಲಿಸಿ ಯಡಿಯೂರಪ್ಪ, ಬಿಜೆಪಿಯನ್ನು ಮುಗಿಸಲು ಪಿತೂರಿ ಮಾಡಲಾಗಿತ್ತು. ಯಡಿಯೂರಪ್ಪನವರು ಬಿಜೆಪಿ ರಾಜ್ಯಾಧ್ಯಕ್ಷರಾದರೆ ತಾವು ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗದೆಂದು ಯೋಚಿಸಿ ಈ ಕೆಲಸ ಮಾಡಿದ್ದರು” ಎಂದು ಆರೋಪಿಸಿದರು.

“ಸಿದ್ದರಾಮಯ್ಯನವರು ಮುಡಾ, ವಾಲ್ಮೀಕಿ ನಿಗಮದ ಹಗರಣಗಳು, ಅಬಕಾರಿ ಇಲಾಖೆ ಹಗರಣದಲ್ಲಿ ಸಿಲುಕಿ ಹಾಕಿಕೊಂಡಿದ್ದು, ವಿಲವಿಲ ಒದ್ದಾಡುತ್ತಿದ್ದಾರೆ. ಪ್ರಿಯಾಂಕ್ ಖರ್ಗೆಯವರು ನನ್ನ ಮೇಲೆ ಆರೋಪ ಮಾಡಿದ್ದು, ಇತ್ತೀಚೆಗೆ ಅವರ ಬಂಡವಾಳವೂ ಬಯಲಾಗಿದೆ. ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನೂರಾರು ಕೋಟಿÉ ಬೆಲೆಬಾಳುವ 5 ಎಕರೆ ನಿವೇಶನವನ್ನು ರಾಹುಲ್ ಖರ್ಗೆಯವರಿಗೆ ಅಕ್ರಮವಾಗಿ ಮಂಜೂರು ಮಾಡಿದ್ದರು. ಪ್ರಿಯಾಂಕ್ ಖರ್ಗೆಯವರೇ ನೀವು ಅದನ್ನು ಹಿಂತಿರುಗಿಸಿಲ್ಲವೇ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...