ಜಾತಿ ಸಮೀಕ್ಷೆ ವರದಿ ಸ್ವೀಕಾರ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದೆ: ಮಾಜಿ ಸಿಎಂ ಬೊಮ್ಮಾಯಿ

Date:

ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ವರದಿ ಪಡೆದಿರುವುದು ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದೆ. ಸರ್ಕಾರ ಬೆಂಕಿಯ ಜೊತೆ ಆಟವಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್ ಪಕ್ಷ ಜಾತ್ಯತೀತ ಅಂತ ಕರೆಯುವ ಪಕ್ಷಕ್ಕೆ ಜಾತಿಗಳ ಮೇಲೆ ಪ್ರತಿ ಬರುತ್ತದೆ. ಚುನಾವಣೆ ಹತ್ತಿರ ಬಂದಾಗ ಜಾತಿ ಸಮಾವೇಶ, ಸುಳ್ಳು ಆಶ್ವಾಸನೆ ಕೊಡುವುದು ಮಾಡುತ್ತಾರೆ” ಎಂದರು.

“2017ರಲ್ಲಿ ಸಿದ್ದರಾಮಯ್ಯ ಅವರು ಎಲ್ಲ ಜಾತಿಗಳ ಶಿಕ್ಷಣ ಮತ್ತು ಸಾಮಾಜಿಕ ಅಧ್ಯಯನ ಮಾಡಲು ಸೂಚಿಸಿದ್ದರು. ಅವರ ಉದ್ದೇಶ ಬೇರೆ ಇತ್ತು. ಜಾತಿ ಗಣತಿ ಮಾಡುವ ಅಧಿಕಾರದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿದೆ, ಅದನ್ನು ತಪ್ಪಿಸಲು ಇವರು ಶೈಕ್ಷಣಿಕ, ಸಾಮಾಜಿಕ ಅಧ್ಯಯನ ಅಂತ ಹೇಳಿ, ಉದ್ದೇಶ ಒಂದು, ಆದೇಶ ಒಂದು ಆಗಿರುವುದರಿಂದ ಈ ಗೊಂದಲ ಸೃಷ್ಟಿಯಾಯಿತು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂತರಾಜ ವರದಿ ಸಿದ್ದವಾದಾಗ ಸಿದ್ದರಾಮಯ್ಯ ಸಿಎಂ ಆಗಿದ್ದರು. ಆಗ ಚುನಾವಣೆ ಇದ್ದ ಕಾರಣ ವರದಿ ಸ್ವೀಕಾರ ಮಾಡಲಿಲ್ಲ. ಆಗ ವರದಿಯ ಬಗ್ಗೆ ಸಾಕಷ್ಡು ಗೊಂದಲ ಇತ್ತು. ಈಗ ಕೊಟ್ಟಿರುವ ವರದಿಯಲ್ಲಿಯೂ ಗೊಂದಲ ಇದೆ. ಇವರು 5.82 ಕೋಟಿ ಜನರನ್ನು ಸಂಪರ್ಕ ಮಾಡಿದ್ದೇವೆ ಅಂತ ಹೇಳುತ್ತಾರೆ. ಆದರೆ, ಬಹುತೇಕ ಜನರು ತಮ್ಮನ್ನು ಸಂಪರ್ಕ ಮಾಡಿಲ್ಲ ಎನ್ನುತ್ತಾರೆ. ಈಗ ಕೊಟ್ಟಿರುವ ವರದಿ ಚೌ ಚೌ ವರದಿ. ಡಾಟಾ ಕಾಂತರಾಜ ಅವರದು, ಜಯಪ್ರಕಾಶ್ ಹೆಗ್ಡೆ ಅವರು ವರದಿ ನನ್ನದು ಅಂತ ಹೇಳಿದ್ದಾರೆ. ಸಿಎಂ ಜಯಪ್ರಕಾಶ್ ಹೆಗ್ಡೆ ಅವರ ಅವಧಿ ವಿಸ್ತರಿಸಿ ರಾಜಕೀಯ ಕಾರಣಕ್ಕೆ ವರದಿ ಪಡೆದಿದ್ದಾರೆ”‌ ಎಂದು ಆರೋಪಿಸಿದರು.

ಜಾತಿ ಸಮೀಕ್ಷೆಗೆ ವಿರೋಧವಿಲ್ಲ

“ಜಾತಿ ಸಮೀಕ್ಷೆ ನಮ್ಮ ವಿರೋಧವಿಲ್ಲ. ಜಾತಿ ಸಂಖ್ಯೆಯ ಜೊತೆಗೆ ಅವರ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಮೇಲೆತ್ತಬೇಕು ಎನ್ನುವ ಬದ್ದತೆ ನಮಗಿದೆ. ಅದಕ್ಕಾಗಿಯೇ ನಾವು ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಈಗ ಇವರು ತೆಗೆದುಕೊಂಡ ವರದಿಯ ಬಗ್ಗೆ ಸರ್ಕಾರ ಯಾಕೆ ಮುಚ್ಚು ಮರೆ ಮಾಡುತ್ತಿದ್ದಾರೆ. ಈ ಬಗ್ಗೆ ಮುಕ್ತ ಚರ್ಚೆಯಾಗಬೇಕು. ಹಿಂದುಳಿದ ವರ್ಗದಲ್ಲಿ150 ಜಾತಿಗಳನ್ನು ಸೇರಿಸಿದ್ದಾರೆ. ಅವರಿಗೆ ಮೀಸಲಾತಿಯ ಬಗ್ಗೆ ಚರ್ಚೆಯಾಗಬೆಕು. ಹಿಂದುಳಿದವರಲ್ಲಿ ಅತಿ ಹಿಂದುಳಿದ ಕಟ್ಟ ಕಡೆಯ ಸಮುದಾಯಗಳಿಗೆ ಮೀಸಲಾತಿ ಪ್ರಯೋಜನ ಸಿಗುತ್ತಿಲ್ಲ. ಅವರಿಗೆ ಸೌಲಭ್ಯ ಸಿಗಬೇಕು. ಮುಖ್ಯಮಂತ್ರಿ ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು. ಅದು ಅಕ್ಷಮ್ಯ ಅಪರಾಧ” ಎಂದು ಹೇಳಿದರು.

“ಸರ್ಕಾರದ ನಡವಳಿಕೆಯಿಂದ ಸಮಾಜದಲ್ಲಿ ಅಶಾಂತಿ ಮೂಡುತ್ತಿದೆ. ಅವರ ಸಂಪುಟದ ಸಚಿವರೆ ಅಪಸ್ವರ ಎತ್ತಿದ್ದಾರೆ. ನಿಮ್ಮ ಸಂಪುಟದಲ್ಲಿ ಒಗ್ಗಟ್ಟಿಲ್ಲವಾ? ಬದ್ದತೆ ಇಲ್ಲವೆ? ಜಾತಿ ಸಮೀಕ್ಷೆ ವಿಚಾರದಲ್ಲಿ ಸರ್ಕಾರ್ ಡಬಲ್ ಗೇಮ್ ಆಡುತ್ತಿದ್ದು, ಚೂಟುವವರೂ ಇವರೇ, ರಮಿಸುವವರೂ ಇವರೇ, ಬಡವರು, ತುಳಿತಕ್ಕೊಳಗಾದವರ ಜೊತೆ ಆಟ ಆಡುವುದು ಸರಿಯಲ್ಲ. ಸಮಾಜದಲ್ಲಿ ಗೊಂದಲ ಉಂಟು ಮಾಡುವ ಕೆಲಸ ಮಾಡಬೇಡಿ. ವರದಿ ಮಾಡಿದವರೊಬ್ಬರು ನೀಡುವವರೊಬ್ಬರು. ಸಿಎಂ ವರದಿ ಸ್ವೀಕಾರ ಮಾಡುತ್ತಾರೆ. ಅವರ ಸಚಿವರು ಅದನ್ನು ವಿರೋದ ಮಾಡುತ್ತಾರೆ. ಏನಿದು” ಎಂದು ಪ್ರಶ್ನಿಸಿದರು.

ಮುಸ್ಲೀಮರು ಅಲ್ಪ ಸಂಖ್ಯಾತರಲ್ಲ

“ರಾಜ್ಯ ಸರ್ಕಾರ ಸ್ವೀಕಾರ ಮಾಡಿರುವ ವರದಿಯಲ್ಲಿ 70 ಲಕ್ಷ ಜನ ಮುಸ್ಲೀಮರಿದ್ದಾರೆ ಎಂದು ಸೋರಿಕೆಯಾದ ವರದಿಯಲ್ಲಿ ಮಾಹಿತಿ ಇದೆ. ಹಾಗಿದ್ದರೆ ಅವರು ಅಲ್ಪ ಸಂಖ್ಯಾತರು ಹೇಗೆ ಆಗುತ್ತಾರೆ ? ರಾಜ್ಯದ ಬಹು ಸಂಖ್ಯಾತ ಜಾತಿಗಳಿಗಿಂತ ಅವರೇ ಹೆಚ್ಚಿನ ಜನಸಂಖ್ಯೆ ಇದ್ದಾರೆ ಎಂದರೆ ಅವರು ಹೇಗೆ ಅಲ್ಪ ಸಂಖ್ಯಾತರಾಗುತ್ತಾರೆ. ಸರ್ಕಾರ ಇದಕ್ಕೆ ಉತ್ತರ ಕೊಡಬೇಕು” ಎಂದು ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...