ಕಾನೂನು ಬಾಹಿರ ಕೆಲಸ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Date:

ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ನಗರದಲ್ಲಿ ಶಾಂತಿಯುತ ಹಾಗೂ ಭಯವಿಲ್ಲದ ವಾತಾವರಣ ನಿರ್ಮಿಸಲು ಬೆಂಗಳೂರು ನಗರ ಪೊಲೀಸರು ಶ್ರಮಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಇಂದು ತಮ್ಮನ್ನು ಭೇಟಿಯಾದ ಬೆಂಗಳೂರು ನಗರದ ಹಿರಿಯ ಪೊಲೀಸ್‌ ಅಧಿಕಾರಿಗಳನ್ನುದ್ದೇಶಿಸಿ ಅವರು ಮಾತನಾಡಿದರು.

“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಕಡಿಮೆ ಆಗಿದೆ. ಸಂಪೂರ್ಣವಾಗಿ ಅಪರಾಧ ನಿರ್ಮೂಲನೆ ಮಾಡಲಾಗದಿದ್ದರೂ, ಕಡಿಮೆಗೊಳಿಸಲು ಸಾಧ್ಯವಿದೆ. ತಡೆಯಲು ಸಾಧ್ಯವಿರುವ ಅಪರಾಧಗಳನ್ನು ತಡೆಗಟ್ಟಲು ಪೊಲೀಸರು ಹೆಚ್ಚಿನ ಆದ್ಯತೆ ನೀಡಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

cm and police meets

ನಗರದಲ್ಲಿ ಡ್ರಗ್ಸ್‌ ಹಾವಳಿ ತಡೆಗಟ್ಟುವಂತೆ ಸೂಚನೆ ನೀಡಿದ ಮುಖ್ಯಮಂತ್ರಿಗಳು, ಸಮಾಜದ ಒಳಿತಿಗಾಗಿ ಡ್ರಗ್ಸ್‌ ಮಾಫಿಯಾವನ್ನು ಮಟ್ಟಹಾಕುವ ಬಗ್ಗೆ ಎಲ್ಲ ಹಂತದ ಪೊಲೀಸ್‌ ಅಧಿಕಾರಿಗಳು ತೀರ್ಮಾನ ಕೈಗೊಂಡು ಅನುಷ್ಠಾನಗೊಳಿಸಬೇಕು. ವಿವಿಧ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಒಂಟಿಯಾಗಿ ಜೀವನ ಮಾಡುವವರನ್ನು ಗುರುತಿಸಿ, ಅವರ ರಕ್ಷಣೆಗೆ ಆದ್ಯತೆ ನೀಡಬೇಕು ಹಾಗೂ ಪೊಲೀಸ್‌ ಬೀಟ್‌ ವ್ಯವಸ್ಥೆ ಬಲಪಡಿಸಬೇಕು ಎಂದು ಸೂಚಿಸಿದರು.

ನಗರದಲ್ಲಿರುವ 241 ಹೊಯ್ಸಳ ವಾಹನಗಳ ಗಸ್ತುಪಡೆಯನ್ನು ಬಲಪಡಿಸಿ, ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದ ಮುಖ್ಯಮಂತ್ರಿಗಳು, “ಪೊಲೀಸ್‌ ಅಧಿಕಾರಿ, ಸಿಬ್ಬಂದಿ ರಿಯಲ್‌ ಎಸ್ಟೇಟ್‌ನವರ ಜೊತೆ ಶಾಮೀಲಾಗುವುದು, ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವುದು ಸರಿಯಲ್ಲ. ಇದರಿಂದ ಜನರಿಗೆ ಪೊಲೀಸ್‌ ವ್ಯವಸ್ಥೆಯ ಮೇಲಿನ ವಿಶ್ವಾಸ ಹೊರಟುಹೋಗುತ್ತದೆ” ಎಂದು ಕಿವಿಮಾತು ಹೇಳಿದರು.

ps meets

“ಸರ್ಕಾರ ಎಂದಿಗೂ ಕಾನೂನು ಬಾಹಿರವಾಗಿ ಕೆಲಸ ಮಾಡಿ ಎಂದು ನಿಮಗೆ ಹೇಳುವುದಿಲ್ಲ. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾದರೆ ಸರ್ಕಾರ ನಿಮ್ಮ ಮೇಲೂ ಕಠಿಣ ಕ್ರಮ ಕೈಗೊಳ್ಳುತ್ತದೆ. ನಗರದಲ್ಲಿ ರೌಡಿಸಂ ಅನ್ನು ಮಟ್ಟ ಹಾಕಬೇಕು. ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶ ನೀಡಬಾರದು” ಎಂದು ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಗರದಲ್ಲಿ ಬಂದೋಬಸ್ತ್‌ ವ್ಯವಸ್ಥೆ ಉತ್ತಮವಾಗಿ ಮಾಡಿರುವುದಾಗಿ ಬೆಂಗಳೂರು ನಗರ ಪೊಲೀಸರಿಗೆ ಮುಖ್ಯಮಂತ್ರಿಗಳು ಅಭಿನಂದನೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಜಾತಿಗಣತಿ ವರದಿ ಸ್ವೀಕಾರ ಮಾಡಲು ಸಿದ್ದರಾಮಯ್ಯಗೆ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ

ಮುಖ್ಯಮಂತ್ರಿಯವರ ಮಾರ್ಗದರ್ಶನದಲ್ಲಿ ನಗರದಲ್ಲಿ ಶಾಂತಿಯುತ ಹಾಗೂ ಸುರಕ್ಷಿತ ವಾತಾವರಣ ನಿರ್ಮಾಣಕ್ಕೆ ಶ್ರಮಿಸುವುದಾಗಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಅವರು ತಿಳಿಸಿದರು.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...