ತಮಿಳು ನಟ, ರಾಜಕಾರಣಿ ‘ಕ್ಯಾಪ್ಟನ್ ವಿಜಯಕಾಂತ್’ ಇನ್ನಿಲ್ಲ

Date:

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತಮಿಳಿನ ಹೆಸರಾಂತ ಹಿರಿಯ ನಟ, ರಾಜಕಾರಣಿ ಕ್ಯಾಪ್ಟನ್ ವಿಜಯಕಾಂತ್ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ  ಇಹಲೋಕ ತ್ಯಜಿಸಿದ್ದಾರೆ.

ಅವರಿಗೆ 71 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇತ್ತೀಚೆಗಷ್ಟೇ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ನಂತರ ತಕ್ಷಣವೇ ಅವರನ್ನು ಐಸಿಯೂಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಪಕ್ಷ(DMDK) ಎಂಬ ಪಕ್ಷವನ್ನು ಕೂಡ ಸ್ಥಾಪಿಸಿ, ರಾಜಕಾರಣಿಯಾಗಿ ಕೂಡ ಗುರುತಿಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿತ್ರರಂಗದಲ್ಲಿ ನಟ, ನಿರ್ಮಾಪಕ, ನಿರ್ದೇಶಕರಾಗಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ ವಿಜಯಕಾಂತ್, ಚಲನಚಿತ್ರೋದ್ಯಮದಿಂದ ಕ್ಯಾಪ್ಟನ್ ಎಂದು ಸಂಭ್ರಮದಿಂದ ಕರೆಯಲ್ಪಡುತ್ತಿದ್ದರು. ಸೆಲ್ವಮಣಿ ನಿರ್ದೇಶನದ ವಿಜಯಕಾಂತ್ ನಟನೆಯ 100ನೇ ಚಿತ್ರ ‘ಕ್ಯಾಪ್ಟನ್ ಪ್ರಭಾಕರನ್’ ಎಂಬ ಚಿತ್ರದಲ್ಲಿ ನಟಿಸಿದ್ದರು. ಅದು ಸೂಪರ್ ಹಿಟ್ ಆದ ಬಳಿಕ ವಿಜಯಕಾಂತ್ ಅವರನ್ನು ಅಭಿಮಾನಿಗಳು ಮತ್ತು ಚಿತ್ರರಂಗದವರು ‘ಕ್ಯಾಪ್ಟನ್’ ಎಂದೇ ಕರೆಯುತ್ತಿದ್ದರು.

ನಟ ವಿಜಯಕಾಂತ್ ಅವರು ಆಗಸ್ಟ್ 25, 1952 ರಂದು ಅರುಪ್ಪುಕೊಟ್ಟೈ ಬಳಿಯ ರಾಮಾನುಜಪುರಂನಲ್ಲಿ ಅಳಗರಸ್ವಾಮಿ ಮತ್ತು ಆಂಡಾಳ್ ದಂಪತಿಗೆ ಜನಿಸಿದರು. ಅದರ ನಂತರ ಅವರ ಕುಟುಂಬ ವ್ಯಾಪಾರದ ಕಾರಣದಿಂದ ಮಧುರೈಗೆ ಸ್ಥಳಾಂತರಗೊಂಡಿದ್ದರು.

ಮೊದಲ ಬಾರಿಗೆ 1979ರಲ್ಲಿ ಗಜ ನಿರ್ದೇಶನದ ‘ಇನಿಕ್ಕುಮ್ ಇಹಲಾ’ ಚಿತ್ರದ ಮೂಲಕ ತೆರೆಗೆ ಪದಾರ್ಪಣೆ ಮಾಡಿದ್ದರು. ಈ ಚಿತ್ರದಲ್ಲಿ ನಿರ್ದೇಶಕರು ತಮ್ಮ ಮೂಲ ಹೆಸರನ್ನು ವಿಜಯರಾಜ್ ಎಂದು ವಿಜಯಕಾಂತ್ ಎಂದು ಬದಲಾಯಿಸಿದ್ದರು.

ನಟ ವಿಜಯಕಾಂತ್, ನಿರ್ದಿಷ್ಟ ಪ್ರಕಾರದ ಚಿತ್ರಗಳಲ್ಲಿ ನಟಿಸದೆ, ಕೌಟುಂಬಿಕ ಚಿತ್ರ, ಸಾಹಸ ಚಿತ್ರಗಳು, ಹಳ್ಳಿ ಚಿತ್ರಗಳು, ಸೆಂಟಿಮೆಂಟ್ ಚಿತ್ರಗಳ ಪಾತ್ರ ಸೇರಿದಂತೆ ಎಲ್ಲ ರೀತಿಯ ಕಥೆಗಳಲ್ಲಿ ನಟಿಸಲು ಆಯ್ಕೆ ಮಾಡಿಕೊಂಡಿದ್ದರಿಂದ ತಮಿಳುನಾಡಿನಲ್ಲಿ ಜನಮನ್ನಣೆ ಗಳಿಸಿಕೊಂಡಿದ್ದರು. ಮೈ ಬಣ್ಣ ಕಪ್ಪಾಗಿದ್ದ ಕಾರಣಕ್ಕೆ ಮೊದಮೊದಲು ಅವರಿಗೆ ನಾಯಕ ನಟನ ಪಾತ್ರ ಸಿಕ್ಕಿರಲಿಲ್ಲ. ಬಳಿಕ ತಮ್ಮ ಪ್ರತಿಭೆಯಿಂದ ಜನರಿಂದ ಮನ್ನಣೆ ಗಳಿಸಿದ ಬಳಿಕ, ನಾಯಕ ನಟನಾಗಿ ಕೂಡ ಗುರುತಿಸಿಕೊಂಡರು. ಆ ಬಳಿಕ ‘ಕರುಪ್ಪು ಎಂಜಿಆರ್’ ಎಂಬ ಹೆಸರು ಕೂಡ ಗಳಿಸಿಕೊಂಡಿದ್ದರು.

ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಸಂತಾಪ

ವಿಜಯಕಾಂತ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಚಿತ್ರನಟ ಕಮಲ್ ಹಾಸನ್ ಸೇರಿದಂತೆ ಹಲವು ಮಂದಿ ಗಣ್ಯರು ಸಂತಾಪ ಸೂಚಿಸಿದ್ದಾರೆ.

ವಿಜಯಕಾಂತ್ ಅವರೊಂದಿಗಿನ ಹಳೆಯ ಫೋಟೊ ಹಂಚಿಕೊಂಡಿರುವ ಪ್ರಧಾನಿ ಮೋದಿ, “ವಿಜಯಕಾಂತ್ ಅರ ನಿಧನದಿಂದ ಅತೀವ ದುಃಖವಾಗಿದೆ. ತಮಿಳು ಚಲನಚಿತ್ರದ ದಂತಕಥೆ, ಅವರ ವರ್ಚಸ್ಸು ಲಕ್ಷಾಂತರ ಜನರ ಹೃದಯಗಳನ್ನು ಸ್ಪರ್ಶಿಸಿದ್ದವು. ರಾಜಕೀಯ ನಾಯಕರಾಗಿ ಸಾರ್ವಜನಿಕ ಸೇವೆಯಲ್ಲೂ ಕೂಡ ತೊಡಗಿಕೊಂಡಿದ್ದರು. ಅವರು ಆತ್ಮೀಯ ಸ್ನೇಹಿತರಾಗಿದ್ದರು. ಅವರ ಕುಟುಂಬ, ಅಭಿಮಾನಿಗಳು ಮತ್ತು ಅನುಯಾಯಿಗಳೊಂದಿಗೆ ನನ್ನ ಸಂತಾಪವಿದೆ ” ಎಂದು ಟ್ವೀಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...