ಪತ್ರಕರ್ತೆಯೊಂದಿಗೆ ಅನುಚಿತ ವರ್ತನೆ: ನಟ, ಬಿಜೆಪಿ ಮುಖಂಡ ಸುರೇಶ್‌ ಗೋಪಿ ವಿರುದ್ಧ ಎಫ್‌ಐಆರ್

Date:

ಕೇರಳದ ಪತ್ರಕರ್ತೆಯೋರ್ವರ ಜೊತೆ ಅನುಚಿತವಾಗಿ ವರ್ತಿಸಿದ ಘಟನೆಗೆ ಸಂಬಂಧಿಸಿ, ಪತ್ರಕರ್ತೆ ನೀಡಿದ ದೂರಿನ ಮೇರೆಗೆ ನಟ, ರಾಜಕಾರಣಿ, ಮಾಜಿ ಸಂಸದ ಸುರೇಶ್ ಗೋಪಿ ವಿರುದ್ಧ ಕೇರಳ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

‘ಮೀಡಿಯಾ ವನ್ ಚಾನೆಲ್‌’ನ ಮಹಿಳಾ ಪತ್ರಕರ್ತೆ ಶಿದಾ ಜಗತ್ ನೀಡಿದ ದೂರಿನ ಮೇರೆಗೆ ನಡಕ್ಕಾವು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಐಪಿಸಿ ಸೆಕ್ಷನ್ 354 (ಎ-1, 4) ಅಡಿಯಲ್ಲಿ ಮಹಿಳೆಯನ್ನು ದೈಹಿಕವಾಗಿ ಸಂಪರ್ಕಿಸುವ ಮೂಲಕ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಪ್ರಕರಣವನ್ನು ದಾಖಲಿಸಲಾಗಿದೆ. ದೂರುದಾರರ ಹೇಳಿಕೆಯನ್ನು ದಾಖಲಿಸಿಕೊಂಡ ನಂತರ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋಯಿಕ್ಕೋಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವಾಗ ಪತ್ರಕರ್ತೆಯ ಭುಜಕ್ಕೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ ಘಟನೆ ಶುಕ್ರವಾರ ನಡೆದಿತ್ತು. ಪತ್ರಕರ್ತೆಯ ಹೆಗಲನ್ನು ಎರಡೆರಡು ಬಾರಿ ಅನುಚಿತವಾಗಿ ಮುಟ್ಟುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿತ್ತು.

ಆ ಬಳಿಕ ಪತ್ರಕರ್ತೆ ಶನಿವಾರ ಕೋಯಿಕ್ಕೋಡ್‌ ನಗರ ಪೊಲೀಸ್‌ ಆಯುಕ್ತರಿಗೆ ದೂರು ಸಲ್ಲಿಸಿದ್ದರು. ದೂರು ಸ್ವೀಕರಿಸಿದ ಕಮಿಷನರ್, ಮುಂದಿನ ಕ್ರಮಕ್ಕಾಗಿ ನಗರ ಸಹಾಯಕ ಆಯುಕ್ತರಿಗೆ ದೂರನ್ನು ರವಾನಿಸಿ, ಪುಕರಣ ದಾಖಲಿಸಲು ಸೂಚಿಸಿದ್ದಾರೆ.

ಇದೇ ಸಮಯದಲ್ಲಿ ಕೇರಳ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪಿ.ಸತಿದೇವಿ ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟದಿಂದ (ಕೆಯುಡಬ್ಲ್ಯು ಜೆ) ಕೂಡ ದೂರನ್ನು ಸ್ವೀಕರಿಸಿದ್ದು, ಪೊಲೀಸರಿಂದ ವರದಿ ಕೇಳಿದ್ದಾರೆ.

ವಿಡಿಯೋ ವೈರಲ್ ಆದ ನಂತರ ಘಟನೆ ವಿವಾದಕ್ಕೆ ತಿರುಗಿತ್ತು. ಈ ಹಿನ್ನೆಲೆಯಲ್ಲಿ ಸುರೇಶ್ ಗೋಪಿ ಶನಿವಾರ ಬೆಳಗ್ಗೆ ಫೇಸ್‌ಬುಕ್‌ ಪೋಸ್ಟ್ ಹಾಕಿ, ಕ್ಷಮೆಯಾಚಿಸಿದ್ದರು.

ಪತ್ರಕರ್ತೆಯನ್ನು ಮಗಳಂತೆ ನಡೆಸಿಕೊಂಡಿದ್ದು, ತಂದೆಯಂತೆ ಆಕೆಯಲ್ಲಿ ಕ್ಷಮೆ ಯಾಚಿಸುವುದಾಗಿ ಹೇಳಿದ್ದರು.

ಕ್ಷಮೆಯಾಚನೆ ಬಗ್ಗೆ ಪ್ರತಿಕ್ರಿಯಿಸಿದ್ದ ಪತ್ರಕರ್ತೆ, ‘ತಾನು ಮಾಡಿದ್ದು ತಪ್ಪು ಎಂಬ ಅರಿವು ಅವರಿಗಿರಬೇಕು. ಒಬ್ಬರ ದೇಹವನ್ನು ಅವರ ಅನುಮತಿ ಇಲ್ಲದೇ ಮುಟ್ಟು ತಪ್ಪು. ನನಗೆ ಅದು ಅನುಚಿತವಾಗಿ ವರ್ತಿಸಿದ ರೀತಿಯೇ ಅನಿಸಿತು. ನನಗೆ ಅವರ ನಡವಳಿಕೆ ಸರಿ ಇಲ್ಲ ಎಂದು ತೋರಿದ ಕಾರಣಕ್ಕಾಗಿಯೇ ನಾನು ಅವರ ಕೈಯನ್ನು ದೂರ ಸರಿಸಿದ್ದೆ. ಹಾಗಾಗಿ, ಈ ಘಟನೆಯ ಕೋಯಿಕ್ಕೋಡ್ ನಗರ ಪೊಲೀಸ್ ಕಮಿಷನರ್ ಅವರಿಗೆ ದೂರು ಸಲ್ಲಿಸುತ್ತೇನೆ’ ಎಂದು ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...