ಐಪಿಸಿ, ಸಿಆರ್‌ಪಿಸಿ ಬದಲು 3 ಹೊಸ ಕ್ರಿಮಿನಲ್ ಕಾನೂನುಗಳು: ಲೋಕಸಭೆಯಲ್ಲಿ ವಿಧೇಯಕಗಳ ಮಂಡನೆ

Date:

ಭಾರತೀಯ ದಂಡ ಸಂಹಿತೆ (ಐಪಿಸಿ), ದಂಡ ಪ್ರಕ್ರಿಯಾ ಸಂಹಿತೆ ಭಾರತ ಸಾಕ್ಷ್ಯ ಅಧಿನಿಯಮಕ್ಕೆ ಬದಲಾಗಿ ಹೊಸ ಕಾನೂನು ರೂಪಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಶುಕ್ರವಾರ(ಆಗಸ್ಟ್ 11) ಮಂಡಿಸಿದೆ.

1860ರ ಭಾರತೀಯ ದಂಡ ಸಂಹಿತೆ (ಐಪಿಸಿ), ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಮತ್ತು ಭಾರತೀಯ ಪುರಾವೆ ಕಾಯ್ದೆಗಳನ್ನು ಬದಲಿಸುವ ಮಸೂದೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಮಂಡಿಸಿದರು.

ಹೊಸ ವಿಧೇಯಕಗಳೊಂದಿಗೆ ಸರ್ಕಾರವು ‘ನ್ಯಾಯದಾನವನ್ನು ಖಾತರಿಪಡಿಸುವ ಗುರಿ ಹೊಂದಿದೆಯೇ ವಿನಾ, ಶಿಕ್ಷೆಯನ್ನಲ್ಲ’ ಎಂದು ಗೃಹ ಸಚಿವ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ಮತ್ತು ಭಾರತೀಯ ಸಾಕ್ಷ್ಯ ಮಸೂದೆ 2023 ಅನ್ನು ಹೆಚ್ಚಿನ ಪರಿಶೀಲನೆಗಾಗಿ ಸಂಸದೀಯ ಸಮಿತಿಗೆ ಕಳುಹಿಸಲಾಗುವುದು ಎಂದು ಅಮಿತ್‌ ಶಾ ಹೇಳಿದರು.

“ಹಾಲಿ ಇರುವ ಕಾನೂನುಗಳು ಬ್ರಿಟಿಷ್ ಆಡಳಿತವನ್ನು ರಕ್ಷಿಸುವ ಮತ್ತು ಬಲಪಡಿಸುವ ನಿಟ್ಟಿನಲ್ಲಿ ಗಮನ ಹರಿಸಿದ್ದವು. ಇದರಲ್ಲಿ ಶಿಕ್ಷೆ ನೀಡುವುದೇ ಮುಖ್ಯ ಗುರಿಯಾಗಿದ್ದು, ನ್ಯಾಯದಾನಕ್ಕೆ ಆದ್ಯತೆ ಇರಲಿಲ್ಲ. ಅವುಗಳನ್ನು ಬದಲಿಸುವ ಮೂಲಕ ಮೂರು ಹೊಸ ಕಾನೂನುಗಳು ಭಾರತೀಯ ನಾಗರಿಕರ ಹಕ್ಕುಗಳನ್ನು ಕಾಪಾಡುವ ಉತ್ಸಾಹ ತರಲಿದೆ” ಎಂದು ಅಮಿತ್ ಶಾ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮುಂದುವರೆದ ಅಮಾನತು ಸರಣಿ: ಈ ಬಾರಿ ಎಎಪಿಯ ರಾಘವ್‌ ಚಡ್ಡಾ ಸರದಿ

ನೂತನ ವಿಧೇಯಕಗಳ ಉದ್ದೇಶವು ಶಿಕ್ಷೆ ವಿಧಿಸುವುದಲ್ಲ. ಅವು ನ್ಯಾಯ ಒದಗಿಸುತ್ತವೆ ಎಂದ ಶಾ, “ಅಪರಾಧ ತಡೆಯುವ ಭಾವನೆಯ ಸೃಷ್ಟಿಗಾಗಿ ಶಿಕ್ಷೆ ನೀಡಲಾಗುತ್ತದೆ” ಎಂದರು.

ದೇಶದ್ರೋಹ ಕಾನೂನನ್ನು ರದ್ದುಪಡಿಸಲಾಗುವುದು ಎಂದು ಗೃಹ ಸಚಿವರು ಪ್ರಕಟಿಸಿದ್ದಾರೆ. ಪ್ರಸ್ತಾವಿತ ಕಾನೂನಿನಲ್ಲಿ ‘ದೇಶದ್ರೋಹ’ ಎಂಬ ಪದ ಇಲ್ಲ. ಅದನ್ನು ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರೆಗೆ ಅಪಾಯ ತಂದೊಡ್ಡುವ ಕೃತ್ಯಗಳಿಗಾಗಿ ಸೆಕ್ಷನ್ 150 ಅನ್ನು ದೇಶದ್ರೋಹದ ಕಾನೂನಿನ ಬದಲಿಗೆ ಜಾರಿಗೆ ತರಲಾಗುತ್ತಿದೆ.

ಹೊಸ ನಿಯಮದಲ್ಲಿ ಇದೇ ಮೊದಲ ಬಾರಿಗೆ ಶಿಕ್ಷೆಯಾಗಿ ಸಮುದಾಯ ಸೇವೆಯನ್ನು ಸೇರ್ಪಡೆ ಮಾಡಲಾಗಿದೆ. ತನಿಖೆಯಲ್ಲಿ ತಂತ್ರಜ್ಞಾನ ಹಾಗೂ ಫೊರೆನ್ಸಿಕ್ ವಿಜ್ಞಾನದ ಬಳಕೆ, ಎಲೆಕ್ಟ್ರಾನಿಕ್ ವಿಧದಲ್ಲಿ ಸಮನ್ಸ್ ಜಾರಿ ಮಾಡುವುದು ಹಾಗೂ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ದಾಖಲೆಗಳನ್ನು ಸಾಕ್ಷ್ಯವನ್ನಾಗಿ ಪರಿಗಣಿಸುವ ಅವಕಾಶ ಇದೆ.

ಹೊಸ ಕಾನೂನಿನ ಅನ್ವಯ ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ಲಂಚ ನೀಡಿದರೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ. ಇತರ ಪ್ರಸ್ತಾವಿತ ಶಿಕ್ಷೆಗಳಲ್ಲಿ ಸಾಮೂಹಿಕ ಅತ್ಯಾಚಾರಕ್ಕಾಗಿ 20 ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆ, ಮತ್ತು ಅಪ್ರಾಪ್ತ ವಯಸ್ಸಿನ ಅತ್ಯಾಚಾರಕ್ಕಾಗಿ ಮರಣದಂಡನೆ ಸೇರಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...