ಬೆದರಿಕೆ, ಸುಳ್ಳು ಆರೋಪ: ಎಚ್‌ಡಿಕೆ ವಿರುದ್ಧ ಎಡಿಜಿಪಿ ಚಂದ್ರಶೇಖರ್ ಪೊಲೀಸರಿಗೆ ದೂರು

Date:

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಲೋಕಾಯುಕ್ತ ವಿಶೇಷ ತನಿಖಾ ತಂಡದ ಎಡಿಜಿಪಿ ಚಂದ್ರಶೇಖರ್, ಪೊಲೀಸರಿಗೆ ದೂರು ನೀಡಿದ್ದಾರೆ.

ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಗೆ ದೂರು ನೀಡಿರುವ ಎಡಿಜಿಪಿ ಚಂದ್ರಶೇಖರ್, ಮಾಜಿ ಸಿಎಂ ಕುಮಾರಸ್ವಾಮಿಯವರು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿ, ಮೌಖಿಕವಾಗಿ ಬೆದರಿಸಿದ್ದಾರೆ. ನನ್ನನ್ನು ಕರ್ನಾಟಕ ರಾಜ್ಯ ಕೇಡರ್‌ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ. ನನ್ನ ಕುಟುಂಬದ ವಿರುದ್ಧವೂ ಸಹ ಸುಳ್ಳು ಆಪಾದನೆಗಳನ್ನು ಮಾಡಿದ್ದಾರೆ. ನಾನು ಲಂಚ ತೆಗೆದುಕೊಂಡಿದ್ದೇನೆ ಎಂದು ಆರೋಪಿಸಿದ್ದಾರೆ” ಎಂದು ದೂರಿನಲ್ಲಿ ವಿವರಿಸಿದ್ದಾರೆ.

“ಕ್ರಿಮಿನಲ್ ಮೊಕದ್ದಮೆ ಸಂಖ್ಯೆ 16/2014ರಲ್ಲಿ ಆರೋಪಿಯಾಗಿರುವ ಕುಮಾರಸ್ವಾಮಿಯವರು ತನಿಖೆಗೆ ಅಡ್ಡಿಪಡಿಸುವ ಉದ್ದೇಶದಿಂದ ಎಸ್‌ಐಟಿ ಅಧಿಕಾರಿಗಳಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ಪ್ರಾಸಿಕ್ಯೂಷನ್ ಅನುಮತಿ ಕೋರಿ ರಾಜ್ಯಪಾಲರಿಗೆ ಲೋಕಾಯುಕ್ತ ಎಸ್‌ಐಟಿ ಕಳಿಸಿರುವ ಪತ್ರವನ್ನು ಮತ್ತು ದಾಖಲೆಗಳನ್ನು ಪತ್ರಿಕಾಗೋಷ್ಠಿಗಳಲ್ಲಿ ಪದೇ ಪದೇ ಉಲ್ಲೇಖಿಸುತ್ತಿದ್ದಾರೆ. ಲೋಕಾಯುಕ್ತದಿಂದ ರಾಜ್ಯಪಾಲರಿಗೆ ಕಳುಹಿಸಲಾದ ಈ ದಾಖಲೆಗಳು, ಅದೇ ಪ್ರಕರಣದಲ್ಲಿ ಆರೋಪಿಯಾದ ಕುಮಾರಸ್ವಾಮಿಯವರ ಕೈಗೆ ಸಿಕ್ಕಿದ್ದಾದರೂ ಹೇಗೆ? ಅವರು ತಮ್ಮ ಕೇಂದ್ರ ಮಂತ್ರಿ ಪದವಿಯ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆಯೇ ಎಂಬ ಪ್ರಶ್ನೆ ಮೂಡುತ್ತದೆ” ಎಂದು ದೂರಿನಲ್ಲಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತ್ಯಂತ ಕೀಳುಮಟ್ಟದ ಕ್ರಿಮಿನಲ್‌ಗಳು ಕೂಡ ಕುಟುಂಬ ಮತ್ತು ಮಕ್ಕಳನ್ನು ತಮ್ಮ ದ್ವೇಷ ವ್ಯವಹಾರದಿಂದ ದೂರವಿಡುತ್ತಾರೆ. ಆದರೆ, ಕುಮಾರಸ್ವಾಮಿಯವರು ನನ್ನ ಕುಟುಂಬದ ಮೇಲೆಯೂ ಸುಳ್ಳು ಆರೋಪ ಹೊರಿಸಿ ಬೆದರಿಕೆಯೊಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

“ಕುಮಾರಸ್ವಾಮಿಯವರ ಮಗ ನಿಖಿಲ್ ಕುಮಾರಸ್ವಾಮಿಯವರು ನನ್ನ ವಿರುದ್ಧ ಸುಳ್ಳು ಮತ್ತು ದುರುದ್ಧೇಶಪೂರಿತ ಆರೋಪಗಳನ್ನು ಮಾಡಿದ್ದಾರೆ. ಕುಮಾರಸ್ವಾಮಿಯವರ ಆಪ್ತ ಸುರೇಶ್ ಬಾಬು ಕೂಡ ನನ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ. ಅಲ್ಲದೇ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ, ಬೆದರಿಕೆ ಹಾಕಿದ್ದಾರೆ” ಎಂದು ಲೋಕಾಯುಕ್ತ ವಿಶೇಷ ತನಿಖಾ ತಂಡದ ಎಡಿಜಿಪಿ ಚಂದ್ರಶೇಖರ್ ಅವರು ಸಂಜಯ್ ನಗರ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನು ಓದಿದ್ದೀರಾ? ಮತ್ತೆ ತೆರಿಗೆ ಅನ್ಯಾಯ, ಕನ್ನಡಿಗರನ್ನು ಕೆಣಕುತ್ತಿರುವ ಕೇಂದ್ರ ಸರ್ಕಾರ: ಡಿ ಕೆ ಸುರೇಶ್ ಆಕ್ರೋಶ

ದೂರನ್ನು ದಾಖಲಿಸಿಕೊಂಡಿರುವ ಬೆಂಗಳೂರಿನ ಸಂಜಯ್ ನಗರ ಪೊಲೀಸರು, ಮುಂದಿನ ಕ್ರಮ ಕೈಗೊಂಡಿರುವುದಾಗಿ ತಿಳಿದುಬಂದಿದೆ.‌

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...