ಕನ್ನಡ ನಾಮಫಲಕ ಅಳವಡಿಕೆ; ಎರಡು ವಾರ ಅವಧಿ ವಿಸ್ತರಣೆ: ಡಿಸಿಎಂ ಡಿ ಕೆ ಶಿವಕುಮಾರ್‌

Date:

ಬೆಂಗಳೂರಿನ ಎಲ್ಲ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದ ಕಡೆ ಶೇ.60ರಷ್ಟು‌ ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು ಎರಡು ವಾರಗಳ‌ ಕಾಲ ವಿಸ್ತರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿ‌ಹಿಡಿಯುವುದು ಅತಿ ಮುಖ್ಯ. ಎರಡು ವಾರಗಳ‌ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ‌ ಎಂದು ನಿರೀಕ್ಷಿಸಿದ್ದೇನೆ” ಎಂದು ಹೇಳಿದ್ದಾರೆ.

ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಬಳಸದ ವಾಣಿಜ್ಯ ಮಳಿಗೆಗಳ ‘ವ್ಯಾಪಾರ ಪರವಾನಗಿ’ ಅಮಾನತು ಮಾಡಿ, ಇಂದಿನಿಂದ ಬೀಗ ಹಾಕಲು ಬಿಬಿಎಂಪಿ ನಿರ್ಧರಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಗಡಿ ಮುಂಗಟ್ಟುಗಳ ಮೇಲ್ಭಾಗದಲ್ಲಿ ಕನ್ನಡ ಪ್ರದರ್ಶಿತವಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ವಿಶೇಷ ರಾಜ್ಯ ಪತ್ರಿಕೆ ಅಧಿಸೂಚನಾ ಪತ್ರದಲ್ಲಿ ಸೂಚಿಸಲಾಗಿತ್ತು. ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಅಧಿಸೂಚನೆಯಂತೆ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲ ವಾಣಿಜ್ಯ ಮಳಿಗೆಗಳು ಫೆ.28ರೊಳಗೆ ನಾಮಫಲಕ ಗಳಲ್ಲಿ ಶೇ 60ರಷ್ಟು ಕನ್ನಡ ಅಳವಡಿಸಿಕೊಳ್ಳಲು ಸೂಚಿಸಿ, 55,187 ಮಳಿಗೆಗಳಿಗೆ ನೋಟಿಸ್‌ ಜಾರಿ ಮಾಡಲಾಗಿತ್ತು.

ಫೆ.28ರ ವೇಳೆಗೆ 52,134 ವಾಣಿಜ್ಯ ಉದ್ದಿಮೆಗಳು ಸೂಚನೆಯನ್ನು ಪಾಲಿಸಿವೆ. ಉಳಿದ 3,044 ವಾಣಿಜ್ಯ ಉದ್ದಿಮೆಗಳು ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ರಾಜರಾಜೇಶ್ವರಿ ನಗರ ವಲಯದಲ್ಲಿ ಅತಿ ಹೆಚ್ಚು ಬಾಕಿ ಉಳಿದಿದ್ದು, ಯಲಹಂಕ, ಬೊಮ್ಮನಹಳ್ಳಿ ವಲಯ ನಂತರದ ಸ್ಥಾನದಲ್ಲಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...