ಜನರೇ ಸೇರಿ ಬ್ರ್ಯಾಂಡ್‌ ಬೆಂಗಳೂರು ಕಟ್ಟಬೇಕು ಎಂದ ಡಿಸಿಎಂ ಡಿ ಕೆ ಶಿವಕುಮಾರ್

Date:

ಜನರ ಧ್ವನಿಯೇ ಸರ್ಕಾರದ ಧ್ವನಿಯಾಗಬೇಕು ಎಂಬ ನಿಟ್ಟಿನಲ್ಲಿ ಬೆಂಗಳೂರಿನ ಅಭಿವೃದ್ಧಿಗಾಗಿ ‘ಬ್ರ್ಯಾಂಡ್‌ ಬೆಂಗಳೂರು’ ಅಭಿಯಾನದಡಿ ಸಾರ್ವಜನಿಕರಿಂದ ಸಲಹೆ ಕೇಳಲಾಗಿತ್ತು. ಪುಟಾಣಿ ಮಕ್ಕಳಿಂದ ಹಿಡಿದು ಹಿರಿಯರವರೆಗೂ 70 ಸಾವಿರಕ್ಕೂ ಹೆಚ್ಚು ಜನರು ತಮ್ಮ ಸಲಹೆ ನೀಡಿದ್ದಾರೆ. ಈ ಎಲ್ಲ ಸಲಹೆಗಳನ್ನು ಕ್ರೋಡೀಕರಿಸಲಾಗುತ್ತಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಸೆಂಟ್ರಲ್‌ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ‘ಬ್ರ್ಯಾಂಡ್‌ ಬೆಂಗಳೂರು ಸಮ್ಮೇಳನ’ವನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿ ನನಗೆ ಸಿಕ್ಕಿರುವ ಸ್ಥಾನವನ್ನು ನನ್ನ ಒಂದು ಅಭಿರುಚಿಯಾಗಿ ಆಗಿ ತೆಗೆದುಕೊಂಡಿದ್ದೇನೆ. ಬೆಂಗಳೂರು ಪೂರ್ವ ಯೋಜಿತ ನಗರವಲ್ಲ. ಸದ್ಯ ನಮ್ಮ ಕಣ್ಮುಂದೆ ಕಾಣುತ್ತಿರುವ ಅತಿ ದೊಡ್ಡ ಸಮಸ್ಯೆಗಳೆಂದರೆ ಕಸ ವಿಲೇವಾರಿ ಮತ್ತು ಟ್ರಾಫಿಕ್‌ ಸಮಸ್ಯೆ. ಈಗಾಗಲೇ ಹೈದರಾಬಾದ್‌ಗೆ ಭೇಟಿ ನೀಡಿ ಅಲ್ಲಿನ ಕಸ ವಿಲೇವಾರಿ ವ್ಯವಸ್ಥೆಯನ್ನು ವೀಕ್ಷಿಸಿದ್ದೇನೆ. ಇನ್ನೂ ಒಂದೆರಡು ರಾಜ್ಯಗಳಿಗೆ ಭೇಟಿ ನೀಡುತ್ತೇನೆ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ನಗರದ ಟ್ರಾಫಿಕ್‌ ಜಂಕ್ಷನ್‌ಗಳಿಗೆ ಭೇಟಿ ನೀಡಿ ಸುಗಮ ಸಂಚಾರಕ್ಕಾಗಿ ಏನೇನು ಮಾಡಬಹುದು ಎಂಬ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದ್ದೇನೆ. ಬೆಂಗಳೂರಿನ ಜನತೆಯ ಆಸ್ತಿ ರಕ್ಷಣೆಗಾಗಿ ಒಂದಷ್ಟು ಸುಧಾರಣೆಗಳನ್ನು ತರಲು ಮುಂದಾಗಿದ್ದೇವೆ. ಮನೆ ನಿರ್ಮಾಣದ ಅನುಮತಿ ಪತ್ರವನ್ನು ಮನೆ ಬಾಗಿಲಿಗೇ ತಲುಪಿಸುವ ಹೊಸ ವ್ಯವಸ್ಥೆ ಸದ್ಯದಲ್ಲೇ ಜಾರಿಗೆ ಬರಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.

‘ಜನರೇ ಸೇರಿ ಬ್ರ್ಯಾಂಡ್‌ ಬೆಂಗಳೂರು ಕಟ್ಟಬೇಕು. ಹಾಗಾಗಿ ವಾರ್ಡ್‌ನಲ್ಲಿರುವ ಪಾರ್ಕ್‌, ಕ್ರೀಡಾಂಗಣ, ಸೇರಿದಂತೆ ವಾರ್ಡಿನ ಸರ್ಕಾರಿ ಆಸ್ತಿಯನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಅಲ್ಲಿನ ಸ್ಥಳೀಯ ನಾಗರಿಕರಿಗೆ ವಹಿಸಬೇಕಿದೆ. ರಸ್ತೆ ಗುಂಡಿಗಳ ಬಗ್ಗೆ ಜನರೇ ಮಾಹಿತಿ ನೀಡುವ ವ್ಯವಸ್ಥೆಯನ್ನು ಜಾರಿಗೆ ತಂದಿದ್ದೇವೆ’ ಎಂದು ತಿಳಿಸಿದರು.

ಸಮ್ಮೇಳನದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಬಿಎಂಆರ್‌ಸಿಎಲ್ ನಿಗಮದ ಎಂಡಿ ಅಂಜುಮ್ ಫರ್ವೇಝ್, ಕೆಎಸ್‌ಆರ್‌ಟಿಸಿ ಎಂಡಿ ಜಿ ಸತ್ಯವತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...