ಆರೋಗ್ಯ ಇಲಾಖೆ | 8 ವರ್ಷಗಳ ಬಳಿಕ ಕೌನ್ಸಲಿಂಗ್ ಮೂಲಕ ವರ್ಗಾವಣೆ ಜಾರಿಗೊಳಿಸಿದ ಸಚಿವ ಗುಂಡೂರಾವ್

Date:

  • ವರ್ಗಾವಣೆ ಕೌನ್ಸಲಿಂಗ್ ಸುತ್ತೋಲೆ ಪ್ರಕಟ
  • ಜುಲೈ ತಿಂಗಳ ಅಂತ್ಯದೊಳಗೆ ಕೌನ್ಸಲಿಂಗ್ ಪೂರ್ಣಗೊಳಿಸಲು ಸೂಚನೆ

ಆರೋಗ್ಯ ಇಲಾಖೆಯಲ್ಲಿ ಈ ಬಾರಿ ಕೌನ್ಸಲಿಂಗ್ ಮೂಲಕವೇ ವರ್ಗಾವಣೆ ನಡೆಯಲಿದೆ. 2016ರ ಬಳಿಕ ಆರೋಗ್ಯ ಇಲಾಖೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಕೌನ್ಸಲಿಂಗ್ ಮೂಲಕ ವರ್ಗಾವಣೆ ನಡೆಯಲಿದ್ದು, 8 ವರ್ಷಗಳಿಂದ ಕೌನ್ಸಲಿಂಗ್ ಎದುರು ನೋಡುತ್ತಿದ್ದ ಅರ್ಹ ವೈದ್ಯರು ಸಿಬ್ಬಂದಿಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉತ್ತಮ ಹೆಜ್ಜೆಯಿಟ್ಟಿದ್ದಾರೆ.

ಕಳೆದ ವರ್ಷ ಸರ್ಕಾರ ರಚನೆಯಾದ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿಗಳು ವರ್ಗಾವಣೆಗೆ ಬೇಡಿಕೆ ಇಟ್ಟಿದ್ದರು. ಸಾಮಾನ್ಯ ವರ್ಗವಾಣೆ ನಡೆಸಿದರೂ, ಎಲ್ಲರ ಬೇಡಿಕೆಗಳನ್ನ ಈಡೇರಿಸಲು ಸಾಧ್ಯವಾಗಿರಲಿಲ್ಲ. ಅಲ್ಲದೇ, ಸಾಕಷ್ಟು ವರ್ಗಾವಣೆತ ಒತ್ತಡ ಪರಿಸ್ಥಿತಿಗಳನ್ನ ಎದುರಿಸಬೇಕಾಗಿ ಬಂದಿತ್ತು. ಇದಕ್ಕೆ ಕಾರಣ 2016ರಿಂದ ಆರೋಗ್ಯ ಇಲಾಖೆಯಲ್ಲಿ ಸಮರ್ಪಕವಾದ ವರ್ಗಾವಣೆ ನಡೆದಿರಲಿಲ್ಲ. ಅಲ್ಲದೇ, ಸಾಮಾನ್ಯ ವರ್ಗಾವಣೆಯಲ್ಲಿ ಅರ್ಹರಿಗೆ ನ್ಯಾಯ ದೊರೆಯುವುದಿಲ್ಲ ಎಂಬುವುದನ್ನ ಮನಗಂಡ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈ ಬಾರಿ ಪೂರ್ಣ ಪ್ರಮಾಣದ ಕೌನ್ಸಲಿಂಗ್ ಮೂಲಕ ವರ್ಗಾವಣೆ ನಡೆಸುವಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದರು.

ಗ್ರೂಪ್ ‘ಎ’ಯಿಂದ ಹಿಡಿದು ಗ್ರೂಪ್ ‘ಡಿ’ಯಲ್ಲಿ ಬರುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳನ್ನ ಕೌನ್ಸಲಿಂಗ್ ಮೂಲಕವೇ ವರ್ಗಾವಣೆ ನಡೆಸಲು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಜುಲೈ 31ರೊಳಗೆ ಕೌನ್ಸಲಿಂಗ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಲಾಖೆಯಲ್ಲಿ ಗುರುತಿಸಿರುವ ತಜ್ಞ ಹುದ್ದೆಗಳಲ್ಲಿ ವೈದ್ಯರುಗಳು ತಜ್ಞತೆಗೆ ಅನುಗುಣವಾಗಿ ಕಾರ್ಯನಿರ್ವಹಿಸದೇ ಬೇರೆ ತಜ್ಞತೆ/ಇತರೆ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಜ್ಞ ವೈದ್ಯರ ಮಾಹಿತಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.

ಇದನ್ನು ಓದಿದ್ದೀರಾ? ಯುಎಸ್‌ನ ಪ್ರತಿ ಐವರು ವಲಸಿಗ ವೈದ್ಯರಲ್ಲಿ ಒಬ್ಬರು ಭಾರತೀಯರು!

ಮೂರು ವರ್ಷ ಸೇವಾವಧಿ ಪೂರೈಸಿರುವ ವೈದ್ಯರು, ನಾಲ್ಕು ವರ್ಷ ಪೂರೈಸಿರುವ ಗ್ರೂಪ್ ಬಿ ನೌಕರರು, 5 ವರ್ಷ ಪೂರೈಸಿದ ಗ್ರೂಪ್ ಸಿ ನೌಕರರು ಹಾಗೂ 7 ವರ್ಷ ಸೇವಾವಧಿ ಪೂರೈಸಿರುವ ಗ್ರೂಪ್ ಡಿ ನೌಕರರು ಜೂನ್ ತಿಂಗಳ ಅಂತ್ಯದೊಳಗೆ ಮಾಹಿತಿ ಸಲ್ಲಿಸುವಂತೆ ತಿಳಿಸಲಾಗಿದೆ. ಮೇಲ್ಕಾಣಿಸಿದ ಸೇವಾವಧಿ ಪೂರೈಸಿರುವ ವೈದ್ಯರು ಹಾಗೂ ಸಿಬ್ಬಂದಿಗಳ ಸ್ಥಾನಗಳಿಗೆ ಕೌನ್ಸಲಿಂಗ್ ಮೂಲಕ ವರ್ಗಾವಣೆ ನಡೆಸಲು ಅವಕಾಶ ಕಲ್ಪಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...