ಆಕಾಶ್ ಆನಂದ್ ವಜಾ | ಕಾಂಗ್ರೆಸ್‌ಗೆ ಸೇರಿ; ಬಿಎಸ್‌ಪಿ ಕಾರ್ಯಕರ್ತರಿಗೆ ಉದಿತ್ ರಾಜ್ ಆಹ್ವಾನ

Date:

ಬಿಎಸ್‌ಪಿಯ ಮುಖ್ಯಸ್ಥೆ ಮಾಯಾವತಿ ಅವರು ತನ್ನ ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್‌ಪಿಯ ಎಲ್ಲಾ ಸ್ಥಾನಗಳಿಂದ ತೆಗೆದುಹಾಕಿದ್ದಾರೆ. ಇದಾದ ಬಳಿಕ ಕಾಂಗ್ರೆಸ್ ನಾಯಕ ಉದಿತ್ ರಾಜ್, ಕಾಂಗ್ರೆಸ್‌ಗೆ ಸೇರುವಂತೆ ಬಿಎಸ್‌ಪಿ ಕಾರ್ಯಕರ್ತರಿಗೆ ಆಹ್ವಾನ ನೀಡಿದ್ದಾರೆ.

ಇತ್ತೀಚೆಗೆ “ಮಾಯಾವತಿ ಸಾಮಾಜಿಕ ಚಳವಳಿಯ ಕತ್ತು ಹಿಸುಕಿ ದಮನ ಮಾಡಿದ್ದಾರೆ. ಈಗ ಅವರ ಕತ್ತು ಹಿಸುಕುವ ಸಮಯ” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಉದಿತ್ ರಾಜ್, ಈಗ ಬಿಎಸ್‌ಪಿಯಲ್ಲಾದ ದಿಢೀರ್ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ಮತ್ತೆ ಮಾಯಾವತಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನು ಓದಿದ್ದೀರಾ? ಸಾಮಾಜಿಕ ಚಳವಳಿಯ ದಮನ ಮಾಡಿದ ಮಾಯಾವತಿಯ ಕತ್ತು ಹಿಸುಕುವ ಸಮಯ ಬಂದಿದೆ: ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾಯಾವತಿಯ ಕ್ರಮಗಳೇ ಬಿಎಸ್‌ಪಿಯನ್ನು ನಾಶ ಮಾಡುತ್ತದೆ. ಬಿಎಸ್‌ಪಿಯಲ್ಲಿ ದಲಿತರು ಅಥವಾ ಒಬಿಸಿಗಳಿಗಾಗಿ ಯಾವುದೇ ಯೋಜನೆಗಳು ಉಳಿದಿಲ್ಲ” ಎಂದು ಹೇಳಿದರು. ಹಾಗೆಯೇ ತನ್ನ ಈ ಹಿಂದಿನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

“ಬಹುಜನ ಆಂದೋಲನದ ಕತ್ತನ್ನು ಮಾಯಾವತಿ ಸೀಳುತ್ತಿರುವುದಾಗಿ ನಾನು ಫೆಬ್ರವರಿ 17ರಂದೇ ಹೇಳಿದ್ದೆ. ಸಮಾಜ ಇದನ್ನು ಅರ್ಥ ಮಾಡಿಕೊಳ್ಳಬೇಕು, ಮಾಯಾವತಿಯಿಂದ ದೂರ ಉಳಿಯಬೇಕು ಎಂಬುದೇ ನನ್ನ ಹೇಳಿಕೆಯ ಅರ್ಥವಾಗಿತ್ತು” ಎಂದು ಹೇಳಿಕೊಂಡಿದ್ದಾರೆ.

“ನಾನು ಮಾಯಾವತಿ ಬಗ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ನನ್ನ ಮೇಲೆ ಬೆದರಿಕೆ ಹಾಕಲಾಗಿದೆ. ನನ್ನ ಹತ್ಯೆ ಮಾಡಿದವರಿಗೆ ನಗದು ಬಹುಮಾನವನ್ನು ಕೂಡಾ ಘೋಷಿಸಲಾಗಿತ್ತು” ಎಂದು ದೂರಿದ್ದಾರೆ.

ಇದನ್ನು ಓದಿದ್ದೀರಾ? ಬಿಎಸ್‌ಪಿ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ಆಕಾಶ್ ಆನಂದ್ ವಜಾ

ಭಾನುವಾರ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ತನ್ನ ಸೋದರಳಿಯನನ್ನು ಎಲ್ಲಾ ಸ್ಥಾನಗಳಿಂದ ತೆಗೆದುಹಾಕುವ ನಿರ್ಧಾರವನ್ನು ದಿಢೀರ್ ಆಗಿ ಕೈಗೊಂಡಿದ್ದು, ಮಾಯಾವತಿ ನಿರ್ಧಾರವೀಗ ರಾಜಕೀಯ ಸಂಚಲನ ಮೂಡಿಸಿದೆ. ಈ ಹಿಂದೆ ಒಂದೆರಡು ಬಾರಿ ಆಕಾಶ್‌ಗೆ ರಾಜ್ಯ ನಾಯಕರ ಸ್ಥಾನ ನೀಡಲಾಗಿತ್ತು, ಹಾಗೆಯೇ ಹಿಂಪಡೆಯಲಾಗಿತ್ತು, ಮತ್ತೆ ಸ್ಥಾನ ನೀಡಲಾಗಿತ್ತು.

“ನಾನು ಸಾಯುವವರೆಗೂ ನಾನೇ ಮುಖ್ಯಸ್ಥೆ, ಉತ್ತಾರಾಧಿಕಾರಿ ಘೋಷಿಸಲ್ಲ” ಎಂಬ ಮಾಯಾವತಿ ಹೇಳಿಕೆಯು ಸದ್ಯ ಬಿಎಸ್‌ಪಿ ಮಾತ್ರವಲ್ಲ ಇತರೆ ರಾಜಕೀಯ ಪಕ್ಷಗಳಲ್ಲಿಯೂ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಕಾಂಗ್ರೆಸ್ ಅಸಮಾಧಾನಕ್ಕೆ ಒಳಗಾಗಿರುವ ಕಾಂಗ್ರೆಸ್ ನಾಯಕರುಗಳನ್ನು ತಮ್ಮೆಡೆ ಸೆಳೆಯುವ ಯತ್ನದಲ್ಲಿ ತೊಡಗಿದೆ. ಎಸ್‌ಪಿ ಮಾಯಾವತಿ ನಡೆಯನ್ನು “ವಿಚಿತ್ರ ನಿರ್ಧಾರ” ಎಂದು ಕರೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...