ಬಿಹಾರ ಚುನಾವಣೆ ಮುಗಿಯುತ್ತಿದ್ದಂತೆ ಕಾಂಗ್ರೆಸ್ ನಾಯಕ ಶಕೀಲ್ ಅಹ್ಮದ್ ರಾಜೀನಾಮೆ

Date:

ಬಿಹಾರ ವಿಧಾನಸಭೆ ಚುನಾವಣೆಯ ಅಂತಿಮ ಹಂತದ ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಮಾಜಿ ಕೇಂದ್ರ ಕೇಂದ್ರ ಸಚಿವ ಶಕೀಲ್ ಅಹ್ಮದ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡುವ ಘೋಷಣೆ ಮಾಡಿದ್ದಾರೆ.

ಅಹ್ಮದ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರ ಬರೆದಿದ್ದು, ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ತೊರೆಯುವುದಾಗಿ ಹೇಳಿದ್ದಾರೆ. “ನಾನು ರಾಜೀನಾಮೆ ನೀಡಲು ಮೊದಲೇ ನಿರ್ಧರಿಸಿದ್ದೆ. ಆದರೆ ಮತದಾನ ಮುಗಿದ ಬಳಿಕ ಘೋಷಿಸಿದ್ದೇನೆ. ನನ್ನ ಕಾರಣದಿಂದಾಗಿ ಪಕ್ಷ ಯಾವುದೇ ಮತಗಳನ್ನು ಕಳೆದುಕೊಳ್ಳಬಾರದು ಎಂಬ ನಿಟ್ಟಿನಲ್ಲಿ ಚುನಾವಣೆ ಮುಗಿಯುವರೆಗೂ ಕಾದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಬಿಹಾರ ಚುನಾವಣೆ | ನ.6ಕ್ಕೆ ಮೊದಲ ಹಂತದ ಮತದಾನ; ಕಣದಲ್ಲಿರುವ ಘಟಾನುಘಟಿಗಳು ಇವರು!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐದು ಬಾರಿ ಶಾಸಕ ಮತ್ತು ಸಂಸದರಾಗಿರುವ ಅಹ್ಮದ್, ಪಕ್ಷದ ಸಿದ್ಧಾಂತಕ್ಕೆ ಯಾವುದೇ ವಿರೋಧವಿಲ್ಲ. ವೈಯಕ್ತಿಕ ಭಿನ್ನಾಭಿಪ್ರಾಯದಿಂದಾಗಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ. “ನಾನು ರಾಜೀನಾಮೆ ನೀಡಿದ ಮಾತ್ರಕ್ಕೆ ಬೇರೆ ಪಕ್ಷ ಅಥವಾ ಗುಂಪಿಗೆ ಸೇರುತ್ತೇನೆ ಎಂದರ್ಥವಲ್ಲ. ಆ ರೀತಿಯ ಉದ್ದೇಶ ನಾನು ಹೊಂದಿಲ್ಲ. ಕಾಂಗ್ರೆಸ್ ನೀತಿ, ತತ್ವಗಳ ಮೇಲೆ ನನಗೆ ಅಚಲ ನಂಬಿಕೆಯಿದೆ. ಜೀವನದುದ್ದಕ್ಕೂ ಕಾಂಗ್ರೆಸ್ ಮೌಲ್ಯಗಳ ಹಿತೈಷಿ, ಬೆಂಬಲಿಗನಾಗಿರುತ್ತೇನೆ. ನನ್ನ ಕೊನೆಯ ಮತವೂ ಕಾಂಗ್ರೆಸ್‌ ಪರವಾಗಿಯೇ ಇರುತ್ತದೆ” ಎಂದು ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

ಹಾಗೆಯೇ ತಮ್ಮ ತಾತ ಅಹ್ಮದ್ ಗಫೂರ್ 1937ರಲ್ಲಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿರುವುದು, ಅವರ ತಂದೆ ಶಕುರ್ ಅಹ್ಮದ್ 1952 ಮತ್ತು 1977ರ ನಡುವೆ ಐದು ಅವಧಿಗೆ ಕಾಂಗ್ರೆಸ್ ಶಾಸಕರಾಗಿ ಸೇವೆ ಸಲ್ಲಿಸಿರುವ ತಮ್ಮ ಕುಟುಂಬದ ಇತಿಹಾಸವನ್ನೂ ನೆನೆಪಿಸಿಕೊಂಡಿದ್ದಾರೆ.

ಇನ್ನು ಈ ಹಿಂದೆ 2023ರ ಏಪ್ರಿಲ್ 16ರಂದು ಅಹ್ಮದ್ ಕಾಂಗ್ರೆಸ್‌ಗೆ ಪತ್ರ ಬರೆದಿದ್ದರು. ತಾವು ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ, ಕೆನಡಾದಲ್ಲಿ ವಾಸವಿರುವ ತಮ್ಮ ಪುತ್ರರಿಗೂ ರಾಜಕೀಯದಲ್ಲಿ ಯಾವುದೇ ಆಸಕ್ತಿಯಿಲ್ಲ ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...